AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ-ಸೊಸೆಯ ಡಿವೋರ್ಸ್​ ವದಂತಿಯಿಂದ ಮುಖ್ಯ ನಿರ್ಧಾರ ತೆಗೆದುಕೊಂಡ ನಾಗಾರ್ಜುನ? ಹೆಚ್ಚಿತು ಸಂಶಯದ ಬೆಂಕಿ

ಅಕ್ಕಿನೇನಿ ಕುಟುಂಬದವರು ನೇರವಾಗಿ ಏನನ್ನೂ ಹೇಳಿಲ್ಲವಾದರೂ ಪರೋಕ್ಷವಾಗಿ ಎಲ್ಲವೂ ಗೋಚರಿಸುವಂತಿದೆ. ಸಾರ್ವಜನಿಕವಾಗಿ ಸಮಂತಾ ಮತ್ತು ನಾಗ ಚೈತನ್ಯ ಒಟ್ಟಿಗೆ ಕಾಣಿಸಿಕೊಳ್ಳದೇ ಹಲವು ದಿನಗಳಾಗಿವೆ ಎಂಬುದು ಗಮನಿಸಬೇಕಾದ ಅಂಶ.

ಮಗ-ಸೊಸೆಯ ಡಿವೋರ್ಸ್​ ವದಂತಿಯಿಂದ ಮುಖ್ಯ ನಿರ್ಧಾರ ತೆಗೆದುಕೊಂಡ ನಾಗಾರ್ಜುನ? ಹೆಚ್ಚಿತು ಸಂಶಯದ ಬೆಂಕಿ
ಸಮಂತಾ ಅಕ್ಕಿನೇನಿ, ನಾಗ ಚೈತನ್ಯ, ನಾಗಾರ್ಜುನ
TV9 Web
| Edited By: |

Updated on: Sep 06, 2021 | 4:06 PM

Share

2017ರಲ್ಲಿ ಮದುವೆಯಾದ ನಟಿ ಸಮಂತಾ ಅಕ್ಕಿನೇನಿ ಮತ್ತು ಅಕ್ಕಿನೇನಿ ನಾಗ ಚೈತನ್ಯ ಅವರ ಸಂಸಾರದಲ್ಲಿ ಈಗ ಏನೋ ಕಿರಿಕ್​ ಎದುರಾಗಿದೆ ಎಂಬ ಅನುಮಾನ ಮೂಡಿದೆ. ಆ ಅನುಮಾನಕ್ಕೆ ಪೂರಕ ಆಗುವಂತಹ ಅನೇಕ ಘಟನೆಗಳು ಮತ್ತೆ ಮತ್ತೆ ನಡೆಯುತ್ತಿವೆ. ಕೆಲವೇ ದಿನಗಳ ಹಿಂದೆ ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಹೆಸರಿನ ಜೊತೆ ಇದ್ದ ಅಕ್ಕಿನೇನಿ ಎಂಬ ಸರ್​ನೇಮ್​ ಅನ್ನು ತೆಗೆದು ಹಾಕಿದ ನಂತರ ಈ ಸಂಶಯ ಹುಟ್ಟುಕೊಂಡಿತ್ತು. ಆ ಬಗ್ಗೆ ಕುಟುಂಬದವರು ಏನೂ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸಮಂತಾ ಮಾವ ಅಕ್ಕಿನೇನಿ ನಾಗಾರ್ಜುನ ಅವರು ಇತ್ತೀಚೆಗೆ ತೆಗೆದುಕೊಂಡ ಒಂದು ನಿರ್ಧಾರದಿಂದಾಗಿ ಅನುಮಾನ ಇನ್ನಷ್ಟು ಹೆಚ್ಚುವಂತಾಗಿದೆ.

ನಾಗಾರ್ಜುನ ಅವರು ಬಿಗ್​ ಬಾಸ್​ ತೆಲುಗು ಸೀಸನ್​ 5ಕ್ಕೆ ನಿರೂಪಣೆ ಮಾಡುತ್ತಿದ್ದಾರೆ. ಸೆ.5ರಂದು ಈ ಶೋ ಅದ್ದೂರಿಯಾಗಿ ಶುರುವಾಗಿದೆ. ಪ್ರತಿಬಾರಿ ಬಿಗ್​ ಬಾಸ್​ ಲಾಂಚ್​ ಆಗುವುದಕ್ಕೂ ಮುನ್ನ ಒಂದು ಸುದ್ದಿಗೋಷ್ಠಿ ನಡೆಸುವುದು ವಾಡಿಕೆ. ಆದರೆ ಈ ಬಾರಿ ಆ ಸಂಪ್ರದಾಯಕ್ಕೆ ನಾಗಾರ್ಜುನ ಬ್ರೇಕ್​ ಹಾಕಿದ್ದಾರೆ. ಅದರಿಂದಾಗಿ ಹಲವು ಬಗೆಯ ವದಂತಿಗಳು ಜೀವ ಪಡೆದುಕೊಂಡಿವೆ.

ಒಂದು ವೇಳೆ ಈ ಸಂದರ್ಭದಲ್ಲಿ ನಾಗಾರ್ಜುನ ಸುದ್ದಿಗೋಷ್ಠಿ ನಡೆಸಿದರೆ ಬಿಗ್​ ಬಾಸ್​ಗಿಂತಲೂ ಹೆಚ್ಚಾಗಿ ಅವರ ಮಗ-ಸೊಸೆಯ ವಿಚ್ಛೇದನದ ವದಂತಿ ಕುರಿತು ಮಾಧ್ಯಮದವರು ಪ್ರಶ್ನೆಗಳನ್ನು ಕೇಳುತ್ತಾರೆ ಎಂಬುದು ಖಚಿತ. ಹಾಗಾಗಿ ಅಂಥ ಪ್ರಸಂಗವನ್ನು ತಪ್ಪಿಸುವ ಸಲುವಾಗಿಯೇ ಅವರು ಬಿಗ್​ ಬಾಸ್​ ಸುದ್ದಿಗೋಷ್ಠಿಯನ್ನು ಕ್ಯಾನ್ಸಲ್​ ಮಾಡಿದ್ದಾರೆ ಎಂದು ಟಾಲಿವುಡ್​ ಅಂಗಳದಲ್ಲಿ ಸುದ್ದಿ ಹಬ್ಬಿದೆ.

ಇಷ್ಟೆಲ್ಲ ಗುಸುಗುಸು ಹರಿದಾಡುತ್ತಿದ್ದರೂ ಕೂಡ ಸಮಂತಾ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆ.29ರಂದು ನಾಗಾರ್ಜುನ ಜನ್ಮದಿನ. ಅಂದು ಕೂಡ ಸಮಂತಾ ಅವರು ಕುಟುಂಬದವರ ಜೊತೆ ಕಾಣಿಸಿಕೊಳ್ಳಲಿಲ್ಲ. ನಯನತಾರಾ ಪ್ರಿಯಕರ ವಿಘ್ನೇಶ್​ ಶಿವನ್​ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ಸಮಂತಾ ನಟಿಸುತ್ತಿದ್ದು, ಆ ಚಿತ್ರದ ಶೂಟಿಂಗ್​ ಸಲುವಾಗಿ ಅವರು ಮಾವನ ಬರ್ತ್​ಡೇ ಸೆಲೆಬ್ರೇಷನ್​ಗೆ ಚಕ್ಕರ್​ ಹಾಕಿದ್ದಾರೆ ಎನ್ನಲಾಗಿದೆ. ನೇರವಾಗಿ ಈ ಕುಟುಂಬದವರು ಏನನ್ನೂ ಹೇಳಿಲ್ಲವಾದರೂ ಪರೋಕ್ಷವಾಗಿ ಎಲ್ಲವೂ ಗೋಚರಿಸುವಂತಿದೆ. ಸಾರ್ವಜನಿಕವಾಗಿ ಸಮಂತಾ ಮತ್ತು ನಾಗಚೈತನ್ಯ ಒಟ್ಟಿಗೆ ಕಾಣಿಸಿಕೊಳ್ಳದೇ ಹಲವು ದಿನಗಳಾಗಿವೆ ಎಂಬುದು ಗಮನಿಸಬೇಕಾದ ಅಂಶ.

ಇದನ್ನೂ ಓದಿ:

ಅಭಿಮಾನಿಗಳ ಬಳಿ ಬಹಿರಂಗ ಕ್ಷಮೆ ಕೇಳಿ, ನಟನೆಯಿಂದ ಬ್ರೇಕ್​ ಪಡೆದ ಸಮಂತಾ ಅಕ್ಕಿನೇನಿ 

ಸಖತ್​ ಬೇಡಿಕೆ ಇದ್ದರೂ ಸಮಂತಾ ಯಾಕಿನ್ನೂ ಬಾಲಿವುಡ್​ಗೆ ಕಾಲಿಟ್ಟಿಲ್ಲ? ನಾಗಾರ್ಜುನ ಸೊಸೆಗೆ ಕಾಡುತ್ತಿದೆ ಭಯ

Follow Us
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ