AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ-ಸೊಸೆಯ ಡಿವೋರ್ಸ್​ ವದಂತಿಯಿಂದ ಮುಖ್ಯ ನಿರ್ಧಾರ ತೆಗೆದುಕೊಂಡ ನಾಗಾರ್ಜುನ? ಹೆಚ್ಚಿತು ಸಂಶಯದ ಬೆಂಕಿ

ಅಕ್ಕಿನೇನಿ ಕುಟುಂಬದವರು ನೇರವಾಗಿ ಏನನ್ನೂ ಹೇಳಿಲ್ಲವಾದರೂ ಪರೋಕ್ಷವಾಗಿ ಎಲ್ಲವೂ ಗೋಚರಿಸುವಂತಿದೆ. ಸಾರ್ವಜನಿಕವಾಗಿ ಸಮಂತಾ ಮತ್ತು ನಾಗ ಚೈತನ್ಯ ಒಟ್ಟಿಗೆ ಕಾಣಿಸಿಕೊಳ್ಳದೇ ಹಲವು ದಿನಗಳಾಗಿವೆ ಎಂಬುದು ಗಮನಿಸಬೇಕಾದ ಅಂಶ.

ಮಗ-ಸೊಸೆಯ ಡಿವೋರ್ಸ್​ ವದಂತಿಯಿಂದ ಮುಖ್ಯ ನಿರ್ಧಾರ ತೆಗೆದುಕೊಂಡ ನಾಗಾರ್ಜುನ? ಹೆಚ್ಚಿತು ಸಂಶಯದ ಬೆಂಕಿ
ಸಮಂತಾ ಅಕ್ಕಿನೇನಿ, ನಾಗ ಚೈತನ್ಯ, ನಾಗಾರ್ಜುನ
TV9 Web
| Edited By: |

Updated on: Sep 06, 2021 | 4:06 PM

Share

2017ರಲ್ಲಿ ಮದುವೆಯಾದ ನಟಿ ಸಮಂತಾ ಅಕ್ಕಿನೇನಿ ಮತ್ತು ಅಕ್ಕಿನೇನಿ ನಾಗ ಚೈತನ್ಯ ಅವರ ಸಂಸಾರದಲ್ಲಿ ಈಗ ಏನೋ ಕಿರಿಕ್​ ಎದುರಾಗಿದೆ ಎಂಬ ಅನುಮಾನ ಮೂಡಿದೆ. ಆ ಅನುಮಾನಕ್ಕೆ ಪೂರಕ ಆಗುವಂತಹ ಅನೇಕ ಘಟನೆಗಳು ಮತ್ತೆ ಮತ್ತೆ ನಡೆಯುತ್ತಿವೆ. ಕೆಲವೇ ದಿನಗಳ ಹಿಂದೆ ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಹೆಸರಿನ ಜೊತೆ ಇದ್ದ ಅಕ್ಕಿನೇನಿ ಎಂಬ ಸರ್​ನೇಮ್​ ಅನ್ನು ತೆಗೆದು ಹಾಕಿದ ನಂತರ ಈ ಸಂಶಯ ಹುಟ್ಟುಕೊಂಡಿತ್ತು. ಆ ಬಗ್ಗೆ ಕುಟುಂಬದವರು ಏನೂ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸಮಂತಾ ಮಾವ ಅಕ್ಕಿನೇನಿ ನಾಗಾರ್ಜುನ ಅವರು ಇತ್ತೀಚೆಗೆ ತೆಗೆದುಕೊಂಡ ಒಂದು ನಿರ್ಧಾರದಿಂದಾಗಿ ಅನುಮಾನ ಇನ್ನಷ್ಟು ಹೆಚ್ಚುವಂತಾಗಿದೆ.

ನಾಗಾರ್ಜುನ ಅವರು ಬಿಗ್​ ಬಾಸ್​ ತೆಲುಗು ಸೀಸನ್​ 5ಕ್ಕೆ ನಿರೂಪಣೆ ಮಾಡುತ್ತಿದ್ದಾರೆ. ಸೆ.5ರಂದು ಈ ಶೋ ಅದ್ದೂರಿಯಾಗಿ ಶುರುವಾಗಿದೆ. ಪ್ರತಿಬಾರಿ ಬಿಗ್​ ಬಾಸ್​ ಲಾಂಚ್​ ಆಗುವುದಕ್ಕೂ ಮುನ್ನ ಒಂದು ಸುದ್ದಿಗೋಷ್ಠಿ ನಡೆಸುವುದು ವಾಡಿಕೆ. ಆದರೆ ಈ ಬಾರಿ ಆ ಸಂಪ್ರದಾಯಕ್ಕೆ ನಾಗಾರ್ಜುನ ಬ್ರೇಕ್​ ಹಾಕಿದ್ದಾರೆ. ಅದರಿಂದಾಗಿ ಹಲವು ಬಗೆಯ ವದಂತಿಗಳು ಜೀವ ಪಡೆದುಕೊಂಡಿವೆ.

ಒಂದು ವೇಳೆ ಈ ಸಂದರ್ಭದಲ್ಲಿ ನಾಗಾರ್ಜುನ ಸುದ್ದಿಗೋಷ್ಠಿ ನಡೆಸಿದರೆ ಬಿಗ್​ ಬಾಸ್​ಗಿಂತಲೂ ಹೆಚ್ಚಾಗಿ ಅವರ ಮಗ-ಸೊಸೆಯ ವಿಚ್ಛೇದನದ ವದಂತಿ ಕುರಿತು ಮಾಧ್ಯಮದವರು ಪ್ರಶ್ನೆಗಳನ್ನು ಕೇಳುತ್ತಾರೆ ಎಂಬುದು ಖಚಿತ. ಹಾಗಾಗಿ ಅಂಥ ಪ್ರಸಂಗವನ್ನು ತಪ್ಪಿಸುವ ಸಲುವಾಗಿಯೇ ಅವರು ಬಿಗ್​ ಬಾಸ್​ ಸುದ್ದಿಗೋಷ್ಠಿಯನ್ನು ಕ್ಯಾನ್ಸಲ್​ ಮಾಡಿದ್ದಾರೆ ಎಂದು ಟಾಲಿವುಡ್​ ಅಂಗಳದಲ್ಲಿ ಸುದ್ದಿ ಹಬ್ಬಿದೆ.

ಇಷ್ಟೆಲ್ಲ ಗುಸುಗುಸು ಹರಿದಾಡುತ್ತಿದ್ದರೂ ಕೂಡ ಸಮಂತಾ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆ.29ರಂದು ನಾಗಾರ್ಜುನ ಜನ್ಮದಿನ. ಅಂದು ಕೂಡ ಸಮಂತಾ ಅವರು ಕುಟುಂಬದವರ ಜೊತೆ ಕಾಣಿಸಿಕೊಳ್ಳಲಿಲ್ಲ. ನಯನತಾರಾ ಪ್ರಿಯಕರ ವಿಘ್ನೇಶ್​ ಶಿವನ್​ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ಸಮಂತಾ ನಟಿಸುತ್ತಿದ್ದು, ಆ ಚಿತ್ರದ ಶೂಟಿಂಗ್​ ಸಲುವಾಗಿ ಅವರು ಮಾವನ ಬರ್ತ್​ಡೇ ಸೆಲೆಬ್ರೇಷನ್​ಗೆ ಚಕ್ಕರ್​ ಹಾಕಿದ್ದಾರೆ ಎನ್ನಲಾಗಿದೆ. ನೇರವಾಗಿ ಈ ಕುಟುಂಬದವರು ಏನನ್ನೂ ಹೇಳಿಲ್ಲವಾದರೂ ಪರೋಕ್ಷವಾಗಿ ಎಲ್ಲವೂ ಗೋಚರಿಸುವಂತಿದೆ. ಸಾರ್ವಜನಿಕವಾಗಿ ಸಮಂತಾ ಮತ್ತು ನಾಗಚೈತನ್ಯ ಒಟ್ಟಿಗೆ ಕಾಣಿಸಿಕೊಳ್ಳದೇ ಹಲವು ದಿನಗಳಾಗಿವೆ ಎಂಬುದು ಗಮನಿಸಬೇಕಾದ ಅಂಶ.

ಇದನ್ನೂ ಓದಿ:

ಅಭಿಮಾನಿಗಳ ಬಳಿ ಬಹಿರಂಗ ಕ್ಷಮೆ ಕೇಳಿ, ನಟನೆಯಿಂದ ಬ್ರೇಕ್​ ಪಡೆದ ಸಮಂತಾ ಅಕ್ಕಿನೇನಿ 

ಸಖತ್​ ಬೇಡಿಕೆ ಇದ್ದರೂ ಸಮಂತಾ ಯಾಕಿನ್ನೂ ಬಾಲಿವುಡ್​ಗೆ ಕಾಲಿಟ್ಟಿಲ್ಲ? ನಾಗಾರ್ಜುನ ಸೊಸೆಗೆ ಕಾಡುತ್ತಿದೆ ಭಯ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್