ಅಕ್ಕಿನೇನಿ ಕುಟುಂಬಕ್ಕೆ ಸಿಹಿ ಸುದ್ದಿ; ಖುಷಿಪಟ್ಟ ಅಭಿಮಾನಿಗಳು

ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಇದರ ಜತೆಗೆ ರಾತ್ರಿ ಕರ್ಫ್ಯೂ, ವೀಕೆಂಡ್​ ಕರ್ಫ್ಯೂ ನಿಯಮಗಳು ಜಾರಿಯಲ್ಲಿವೆ. ಇದರ ಮಧ್ಯೆಯೂ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಅಭಿನಯದ ‘ಬಂಗಾರ್ರಾಜು’ ಚಿತ್ರ ತೆರೆಗೆ ಬಂದಿದೆ.

ಅಕ್ಕಿನೇನಿ ಕುಟುಂಬಕ್ಕೆ ಸಿಹಿ ಸುದ್ದಿ; ಖುಷಿಪಟ್ಟ ಅಭಿಮಾನಿಗಳು
ನಾಗ ಚೈತನ್ಯ-ಅಕ್ಕಿನೇನಿ ನಾಗಾರ್ಜುನ
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 18, 2022 | 5:10 PM

ಕಳೆದ ವರ್ಷ ಅಕ್ಟೋಬರ್​ ತಿಂಗಳಲ್ಲಿ ಅಕ್ಕಿನೇನಿ ಕುಟುಂಬ (Akkineni Family) ಹಾಗೂ ಅವರ ಅಭಿಮಾನಿಗಳಿಗೆ ಬೇಸರ ಆಗುವ ಘಟನೆ ನಡೆದಿತ್ತು. ನಾಗ ಚೈತನ್ಯ ಹಾಗೂ ಸಮಂತಾ ವಿಚ್ಛೇದನ (Naga Chaitanya and Samantha Divorce) ಪಡೆದು ಬೇರೆ ಆದರು. ಇದಾಗಿ ಹಲವು ತಿಂಗಳು ಕಳೆದಿದೆ. ಈಗ ಅಕ್ಕಿನೇನಿ ಕುಟುಂಬ ಖುಷಿ ಪಡುವ ಘಟನೆ ಒಂದು ನಡೆದಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಹಾಗಾದರೆ ಏನಿದು ಸಮಾಚಾರ? ಅವರ ಅಭಿಮಾನಿಗಳು ಖುಷಿಪಡುವಂತಹ ಘಟನೆ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕೊವಿಡ್​ನಿಂದ ದೇಶದ ಪರಿಸ್ಥಿತಿ ಹದಗೆಟ್ಟಿದೆ. ನಿತ್ಯ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇದನ್ನು ನಿಯಂತ್ರಿಸೋಕೆ ಯಾವ ಸರ್ಕಾರಗಳಿಂದಲೂ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಸರ್ಕಾರಗಳು ಕಠಿಣ ನಿಯಮಗಳನ್ನು ಜಾರಿಗೆ ತಂದಿವೆ. ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಇದರ ಜತೆಗೆ ರಾತ್ರಿ ಕರ್ಫ್ಯೂ, ವೀಕೆಂಡ್​ ಕರ್ಫ್ಯೂ ನಿಯಮಗಳು ಜಾರಿಯಲ್ಲಿವೆ. ಇದರ ಮಧ್ಯೆಯೂ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಅಭಿನಯದ ‘ಬಂಗಾರ್ರಾಜು’ ಚಿತ್ರ ತೆರೆಗೆ ಬಂದಿದೆ. ಸಂಕ್ರಾಂತಿ ಪ್ರಯುಕ್ತ ಜನವರಿ 14ರಂದು ಚಿತ್ರ ರಿಲೀಸ್​ ಆಗಿದ್ದು, ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ.

ಮೂರು ದಿನಗಳಲ್ಲಿ ಈ ಚಿತ್ರ ಬರೋಬ್ಬರಿ 53 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಕೊವಿಡ್​ ಮಧ್ಯೆಯೂ ಸಿನಿಮಾ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಿರುವುದು ಸಹಜವಾಗಿಯೇ ಅಕ್ಕಿನೇನಿ ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಸಂಕ್ರಾಂತಿ ಹಬ್ಬ ಈ ಕುಟುಂಬದ ಹಾಗೂ ಅಭಿಮಾನಿಗಳ ಖುಷಿಯನ್ನು ದುಪ್ಪಟ್ಟು ಮಾಡಿದೆ.

‘ಬಂಗಾರ‍್ರಾಜು’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಹಾಗೂ ಕೃತಿ ಶೆಟ್ಟಿ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ‘ನಮ್ಮ ‘ಬಂಗಾರ‍್ರಾಜು’ ಪೊಂಗಲ್ ಹಬ್ಬದ ಸಿನಿಮಾ ಎಂದು ನಾನು ಯಾವಾಗಲೂ ನಂಬಿದ್ದೇನೆ. ಹಬ್ಬದ ಸಮಯದಲ್ಲಿ ಎಲ್ಲರೂ ಕುಳಿತು ಒಟ್ಟಾಗಿ ಸಿನಿಮಾ ನೋಡುತ್ತಾರೆ. ಇದು ನಮ್ಮ ಸಿನಿಮಾಗೆ ಪ್ಲಸ್​ ಪಾಯಿಂಟ್​ ಆಗಲಿದೆ. ಚಿತ್ರಮಂದಿರದಲ್ಲಿ ಪ್ರೇಕ್ಷಕರು ಈ ಸಿನಿಮಾವನ್ನು ಒಮ್ಮೆಯಾದರೂ ನೋಡುತ್ತಾರೆ ಎನ್ನುವ ನಂಬಿಕೆ ನನಗೆ ಇದೆ’ ಎಂದು ಅಕ್ಕಿನೇನಿ ನಾಗಾರ್ಜುನ ಹೇಳಿದ್ದರು. ಆ ಮಾತು ಈಗ ನಿಜವಾಗಿದೆ.

ಇದನ್ನೂ ಓದಿ: ಅಕ್ಕಿನೇನಿ ನಾಗಾರ್ಜುನ ಚಿತ್ರದಿಂದ ಎರಡನೇ ಹೀರೋಯಿನ್​ ಔಟ್​; ಇದಕ್ಕಿದೆ ಮಹತ್ವದ ಕಾರಣ

Nagarjuna: ಇಷ್ಟೆಲ್ಲಾ ಸಾಧನೆ ಮಾಡಿರೋ ನಾಗಾರ್ಜುನರನ್ನ ಬೇರೆಡೆ ಹೇಗೆ ಗುರುತಿಸುತ್ತಾರೆ? ಅಚ್ಚರಿಯ ವಿಚಾರ ಹಂಚಿಕೊಂಡ ನಟ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ