AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾರ್ಜುನ ಜನ್ಮದಿನ: ಸ್ವಾರ್ಥಕ್ಕಾಗಿ ಪ್ರಕಾಶ್​ ರೈ ಪಾರ್ಟಿ? ಮಾ ಚುನಾವಣೆ ಹೊಸ್ತಿಲಲ್ಲಿ ಹೊಸ ಆರೋಪ

Akkineni Nagarjuna Birthday: ಪ್ರಕಾಶ್​ ರೈ ಪರವಾಗಿ ಪ್ರಚಾರ ಮಾಡುತ್ತಿರುವ ಸಮೀರ್​ ಅವರು ಬಿಗ್​ ಬಾಸ್​ನ ಎಲ್ಲ ಮಾಜಿ ಸ್ಪರ್ಧಿಗಳನ್ನು ನಾಗಾರ್ಜುನ ಅವರ ಬರ್ತ್​ಡೇ ಪಾರ್ಟಿಗೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ. ಸಮೀರ್​ ಆಹ್ವಾನ ನೀಡಿದ್ದಾರೆ ಎನ್ನಲಾದ ಮೆಸೇಜ್​ ವೈರಲ್​ ಆಗುತ್ತಿದೆ.

ನಾಗಾರ್ಜುನ ಜನ್ಮದಿನ: ಸ್ವಾರ್ಥಕ್ಕಾಗಿ ಪ್ರಕಾಶ್​ ರೈ ಪಾರ್ಟಿ? ಮಾ ಚುನಾವಣೆ ಹೊಸ್ತಿಲಲ್ಲಿ ಹೊಸ ಆರೋಪ
ಅಕ್ಕಿನೇನಿ ನಾಗಾರ್ಜುನ, ಪ್ರಕಾಶ್​ ರಾಜ್
TV9 Web
| Edited By: |

Updated on: Aug 29, 2021 | 8:15 AM

Share

ಟಾಲಿವುಡ್​ನ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರಿಗೆ ಇಂದು (ಆ.29) ಹುಟ್ಟುಹಬ್ಬದ ಸಂಭ್ರಮ. ಅಪಾರ ಸಂಖ್ಯೆಯ ಅಭಿಮಾನಿಗಳು, ಸೆಲೆಬ್ರಿಟಿಗಳು, ಸ್ನೇಹಿತರು, ವಿವಿಧ ಕ್ಷೇತ್ರದ ಗಣ್ಯರು ನಾಗಾರ್ಜುನ ಅವರಿಗೆ ಜನ್ಮದಿನದ ಶುಭಕೋರುತ್ತಿದ್ದಾರೆ. ಈ ನಡುವೆ ಪ್ರಕಾಶ್​ ರೈ (Prakash Rai) ಅವರ ಮೇಲೆ ಒಂದು ಆರೋಪ ಕೇಳಿಬಂದಿದೆ. ಮುಂಬರುವ ಮೂವೀ ಆರ್ಟಿಸ್ಟ್ ಅಸೋಸಿಯೇಷನ್ (MAA)​ ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ನಾಗಾರ್ಜುನ ಜನ್ಮದಿನವನ್ನು ಪ್ರಕಾಶ್​ ರೈ ಆಚರಿಸಿದ್ದಾರೆ ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟಾಲಿವುಡ್​ ಅಂಗಳದಲ್ಲಿ ಸುದ್ದಿ ಹರಿದಾಡುತ್ತಿದೆ.

ಎಲ್ಲರಿಗೂ ತಿಳಿದಿರುವಂತೆ ತೆಲುಗು ಬಿಗ್​ ಬಾಸ್​ಗೆ ನಾಗಾರ್ಜುನ ನಿರೂಪಕರಾಗಿದ್ದಾರೆ. ಸೆ.5ರಂದು ಹೊಸ ಸೀಸನ್​ ಕೂಡ ಆರಂಭ ಆಗಲಿದೆ. ಈ ಹಿಂದಿನ ನಾಲ್ಕು ಸೀಸನ್​ಗಳಲ್ಲಿ ಭಾಗವಹಿಸಿರುವ ಎಲ್ಲ ಸ್ಪರ್ಧಿಗಳನ್ನು ಆಹ್ವಾನಿಸಿ, ಆ.28ರ ರಾತ್ರಿ ಪ್ರಕಾಶ್​ ರಾಜ್​ ಆಫೀಸ್​ನಲ್ಲಿ ನಾಗಾರ್ಜುನ​ ಅವರ ಬರ್ತ್​ಡೇ ಪಾರ್ಟಿ ಮಾಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ಪ್ರಕಾಶ್​ ರೈ ಪರವಾಗಿ ಪ್ರಚಾರ ಮಾಡುತ್ತಿರುವ ಸಮೀರ್​ ಅವರು ಬಿಗ್​ ಬಾಸ್​ನ ಎಲ್ಲ ಮಾಜಿ ಸ್ಪರ್ಧಿಗಳಿಗೆ ಈ ಕುರಿತು ಆಹ್ವಾನ ನೀಡಿದ್ದಾರೆ ಎನ್ನಲಾದ ಮೆಸೇಜ್​ ವೈರಲ್​ ಆಗುತ್ತಿದೆ.

ಪ್ರಕಾಶ್​ ರೈ ಮೂಲತಃ ತೆಲುಗಿನವರಲ್ಲ ಎಂಬ ಕಾರಣಕ್ಕೆ ಅವರು ಮೂವೀ ಆರ್ಟಿಸ್ಟ್ ಅಸೋಸಿಯೇಷನ್​ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಅನೇಕರು ತಕರಾರು ತೆಗೆದಿದ್ದಾರೆ. ಅದರ ನಡುವೆಯೂ ಅವರಿಗೆ ಹಲವರ ಬೆಂಬಲ ಸಿಗುತ್ತಿದೆ. ಇನ್ನಷ್ಟು ಜನರನ್ನು ತಮ್ಮತ್ತ ಸೆಳೆದುಕೊಳ್ಳುವ ಉದ್ದೇಶದಿಂದಲೇ ಪ್ರಕಾಶ್​ ರೈ ಅವರು ಈ ಬರ್ತ್​ಡೇ ಪಾರ್ಟಿಯನ್ನು ಆಯೋಜಿಸಿದ್ದರು ಎಂಬ ಆರೋಪ ಕೇಳಿಬರುತ್ತಿದೆ.

ಸದ್ಯ ಈ ಯಾವ ವಿಚಾರಗಳಿಗೂ ಪ್ರಕಾಶ್​ ರೈ ಪ್ರತಿಕ್ರಿಯೆ ನೀಡಿಲ್ಲ. ನಾಗಾರ್ಜುನ ಕೂಡ ಏನನ್ನೂ ಹೇಳಿಲ್ಲ. ಸದ್ಯ ಅವರು ಬಿಗ್​ ಬಾಸ್​ ತೆಲುಗು ಸೀಸನ್​ 5ರ ನಿರೂಪಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸೆ.5ರಂದು ಅದ್ದೂರಿಯಾಗಿ ಸ್ಟಾರ್​ ಮಾ ವಾಹಿನಿಯಲ್ಲಿ ಈ ರಿಯಾಲಿಟಿ ಶೋ ಆರಂಭ ಆಗಲಿದೆ. ಈಗಾಗಲೇ ಬಿಡುಗಡೆ ಆಗಿರುವ ಪ್ರೋಮೋಗಳು ವೈರಲ್​ ಆಗಿವೆ. ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಕೂಡ ಹರಿದಾಡುತ್ತಿದೆ. ಅಂತಿಮವಾಗಿ ಯಾರಿಗೆಲ್ಲ ಈ ಬಾರಿ ಬಿಗ್​ ಬಾಸ್​ ಮನೆ ಪ್ರವೇಶಿಸುವ ಅವಕಾಶ ಸಿಗಲಿದೆ ಎಂಬುದು ಸೆ.5ರ ಸಂಜೆ ಜಗಜ್ಜಾಹೀರಾಗಲಿದೆ.

ಇದನ್ನೂ ಓದಿ:

Prakash Raj: ಮಕ್ಕಳ ಎದುರಲ್ಲೇ ಪ್ರಕಾಶ್​ ರೈ ಮತ್ತೊಮ್ಮೆ ಮದುವೆ; ಇಲ್ಲಿವೆ ಖುಷಿಯ ಕ್ಷಣದ ಫೋಟೋಗಳು

ಸರ್ಜರಿ ಬಳಿಕ​ ಚಿರಂಜೀವಿ ಜೊತೆ ಪ್ರಕಾಶ್​ ರೈ ಫೋಟೋ ವೈರಲ್​; ಇನ್ನಷ್ಟು ಹೆಚ್ಚಿತು ಅನುಮಾನ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ