AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಘೋಷಿಸಿದ ಅಕ್ಷಯ್ ಕುಮಾರ್; ‘ವೆಲ್​ಕಮ್ ​3’ ಚಿತ್ರದಲ್ಲಿ ಸ್ಟಾರ್ಸ್ ದಂಡು

‘ವೆಲ್​ಕಮ್’ ಹಾಗೂ ‘ವೆಲ್​ಕಮ್ 2’ ಸಿನಿಮಾ ಯಶಸ್ಸಿನ ಬಳಿಕ ‘ವೆಲ್​ಕಮ್ 3’ ಸಿನಿಮಾ ತೆರೆಗೆ ತರಲು ಸಿದ್ಧತೆ ನಡೆದಿದೆ. ಈ ಚಿತ್ರದ ಪಾತ್ರವರ್ಗ ಹಿರಿದಾಗಿದೆ. ಅಕ್ಷಯ್ ಕುಮಾರ್, ಸಂಜಯ್ ದತ್, ಅರ್ಷದ್ ವಾರ್ಸಿ, ದಿಶಾ ಪಟಾಣಿ, ರವೀನಾ ಟಂಡನ್, ಲಾರಾ ದತ್ತ, ಪರೇಶ್ ರಾವಲ್ ಸೇರಿ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ.

ಹೊಸ ಸಿನಿಮಾ ಘೋಷಿಸಿದ ಅಕ್ಷಯ್ ಕುಮಾರ್; ‘ವೆಲ್​ಕಮ್ ​3’ ಚಿತ್ರದಲ್ಲಿ ಸ್ಟಾರ್ಸ್ ದಂಡು
ವೆಲ್​ಕಮ್ 3 ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on: Sep 10, 2023 | 10:24 AM

ನಟ ಅಕ್ಷಯ್ ಕುಮಾರ್ (Akshay Kumar) ಅವರು ಸಾಲು ಸಾಲು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇರುತ್ತದೆ. ಈಗ ಅವರ ಬರ್ತ್​ಡೇ ದಿನ (ಸೆಪ್ಟೆಂಬರ್ 9) ‘ವೆಲ್​ಕಮ್ 3’ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಸ್ಟಾರ್ಸ್ ದಂಡಿದೆ. ಈ ಚಿತ್ರಕ್ಕೆ ‘ವೆಲ್​ಕಮ್ ಟು ದಿ ಜಂಗಲ್’ ಎಂದು ಶೀರ್ಷಿಕೆ ಇಡಲಾಗಿದೆ. ಟೈಟಲ್ ಟೀಸರ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ. ಈ ಸಿನಿಮಾ ಕ್ರಿಸ್​ಮಸ್ ಪ್ರಯುಕ್ತ 2024ರ ಡಿಸೆಂಬರ್ 20ರಂದು ರಿಲೀಸ್ ಆಗಲಿದೆ.

ಹಿರಿದಾಗಿದೆ ‘ವೆಲ್​ಕಮ್ 3’ ಸಿನಿಮಾದ ಪಾತ್ರವರ್ಗ

‘ವೆಲ್​ಕಮ್’ ಹಾಗೂ ‘ವೆಲ್​ಕಮ್ 2’ ಸಿನಿಮಾ ಯಶಸ್ಸಿನ ಬಳಿಕ ‘ವೆಲ್​ಕಮ್ 3’ ಸಿನಿಮಾ ತೆರೆಗೆ ತರಲು ಸಿದ್ಧತೆ ನಡೆದಿದೆ. ಈ ಚಿತ್ರದ ಪಾತ್ರವರ್ಗ ಹಿರಿದಾಗಿದೆ. ಅಕ್ಷಯ್ ಕುಮಾರ್, ಸಂಜಯ್ ದತ್, ಅರ್ಷದ್ ವಾರ್ಸಿ, ದಿಶಾ ಪಟಾಣಿ, ರವೀನಾ ಟಂಡನ್, ಲಾರಾ ದತ್ತ, ಪರೇಶ್ ರಾವಲ್ ಸೇರಿ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್-ಅಕ್ಷಯ್ ಕುಮಾರ್ ಒಟ್ಟಾಗಿ ತೆರೆ ಹಂಚಿಕೊಳ್ಳದಿರಲು ಈ ಘಟನೆಯೇ ಕಾರಣ..

‘ವೆಲ್​ಕಮ್ 3’ ಸಿನಿಮಾ ಬಗ್ಗೆ

‘ವೆಲ್​ಕಮ್ 3’ ಸಿನಿಮಾಗೆ ಅಹ್ಮದ್ ಖಾನ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಪಾತ್ರವರ್ಗ ಎಲ್ಲರ ಗಮನ ಸೆಳೆಯುತ್ತಿದೆ. ಜಿಯೋ ಸ್ಟುಡಿಯೋ ಹಾಗೂ ಬೇಸ್ ಇಂಡಸ್ಟ್ರೀಸ್ ಗ್ರೂಪ್ ‘ವೆಲ್​ಕಮ್ 3’ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. ಜ್ಯೋತಿ ದೇಶಪಾಂಡೆ, ಫಿರೋಜ್ ನಾಡಿಯಾದ್ವಾಲಾ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ