AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​​ನಲ್ಲಿ ಕುದುರೆ ಮೇಯಿಸಿದ ಅಕ್ಷಯ್, ಬಕರಾ ಆದ ಹಾಸ್ಯನಟ ರಾಜ್​ಪಾಲ್

Akshay Kumar movie: ಅಕ್ಷಯ್ ಕುಮಾರ್ ಅವರು ಹಾಸ್ಯ ಪ್ರಧಾನ ಆಕ್ಷನ್ ಸಿನಿಮಾ ‘ವೆಲ್​​ಕಮ್ ಟು ಜಂಗಲ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಭಾರಿ ತಾರಾಗಣ ಇರುವ ಹಾಸ್ಯ ಪ್ರಧಾನ ಸಿನಿಮಾ ಇದಾಗಿದ್ದು, ಅಕ್ಷಯ್ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರುಗಳು ಇದ್ದು, ಇವರ ಜೊತೆಗೆ ಹಲವು ಹಾಸ್ಯ ನಟರು ಸಹ ನಟಿಸುತ್ತಿದ್ದಾರೆ. ಇದೀಗ ನಟ ಅಕ್ಷಯ್ ಕುಮಾರ್, ಸಿನಿಮಾ ಶೂಟಿಂಗ್ ವೇಳೆ ತಾವು ಹಿರಿಯ ಹಾಸ್ಯ ನಟನ ಮೇಲೆ ಮಾಡಿದ ಪ್ರ್ಯಾಂಕ್​​ನ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

ಶೂಟಿಂಗ್​​ನಲ್ಲಿ ಕುದುರೆ ಮೇಯಿಸಿದ ಅಕ್ಷಯ್, ಬಕರಾ ಆದ ಹಾಸ್ಯನಟ ರಾಜ್​ಪಾಲ್
Akshay Kumar
ಮಂಜುನಾಥ ಸಿ.
|

Updated on: Jun 05, 2026 | 4:38 PM

Share

ಅಕ್ಷಯ್ ಕುಮಾರ್​ (Akshay Kumar) ವರ್ಷಕ್ಕೆ ಅತಿ ಹೆಚ್ಚು ಸಿನಿಮಾ ಮಾಡುವ ಭಾರತದ ಸ್ಟಾರ್ ನಟ. ಇತರೆ ಸ್ಟಾರ್ ನಟರುಗಳು ಒಂದು ಸಿನಿಮಾ ಮಾಡಲು ಎರಡು-ಮೂರು ವರ್ಷ ತೆಗೆದುಕೊಂಡರೆ, ಅಕ್ಷಯ್ ಕುಮಾರ್ ಒಂದೇ ವರ್ಷದಲ್ಲಿ ಮೂರು ನಾಲ್ಕು ಸಿನಿಮಾ ಮುಗಿಸಿ ಇನ್ನೆರಡರ ಶೂಟಿಂಗ್ ಪ್ರಾರಂಭಿಸಿರುತ್ತಾರೆ. ಶೂಟಿಂಗ್ ವಿಷಯದಲ್ಲಿ ಬಲು ಶಿಸ್ತಿನ ವ್ಯಕ್ತಿ ಆಗಿರುವ ಅಕ್ಷಯ್ ಕುಮಾರ್, ಬೆಳಿಗ್ಗೆ 6 ಗಂಟೆಗೆ ಶೂಟಿಂಗ್ ಆರಂಭಿಸಿದರೆ ಸಂಜೆ 4 ಅಥವಾ 5 ಕ್ಕೆ ಮುಗಿಸಿ ಬಿಡುತ್ತಾರೆ. ಶೂಟಿಂಗ್ ಸಮಯದಲ್ಲಿಯೂ ಸಹ ಬಲು ಸಕ್ರಿಯರಾಗಿರುವ ಅಕ್ಷಯ್, ಸಹ ನಟರನ್ನು ಬಕರಾ ಮಾಡುತ್ತಾ ತಮಾಷೆ ಮಾಡುತ್ತಿರುತ್ತಾರೆ.

ಇದೀಗ ಅಕ್ಷಯ್ ಕುಮಾರ್ ಅವರು ಹಾಸ್ಯ ಪ್ರಧಾನ ಆಕ್ಷನ್ ಸಿನಿಮಾ ‘ವೆಲ್​​ಕಮ್ ಟು ಜಂಗಲ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಭಾರಿ ತಾರಾಗಣ ಇರುವ ಹಾಸ್ಯ ಪ್ರಧಾನ ಸಿನಿಮಾ ಇದಾಗಿದ್ದು, ಅಕ್ಷಯ್ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರುಗಳು ಇದ್ದು, ಇವರ ಜೊತೆಗೆ ಹಲವು ಹಾಸ್ಯ ನಟರು ಸಹ ನಟಿಸುತ್ತಿದ್ದಾರೆ. ಇದೀಗ ನಟ ಅಕ್ಷಯ್ ಕುಮಾರ್, ಸಿನಿಮಾ ಶೂಟಿಂಗ್ ವೇಳೆ ತಾವು ಹಿರಿಯ ಹಾಸ್ಯ ನಟನ ಮೇಲೆ ಮಾಡಿದ ಪ್ರ್ಯಾಂಕ್​​ನ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

ಶೂಟಿಂಗ್ ವೇಳೆ ಅಕ್ಷಯ್ ಕುಮಾರ್, ಕುದುರೆ ಮೇಯಿಸಿದ್ದಾರೆ. ಆದರೆ ಕುದುರೆಗೆ ಹುಲ್ಲು ತಿನ್ನಿಸಿಲ್ಲ ಬದಲಿಗೆ ಸಹ ನಟನ ಕೂದಲನ್ನೇ ತಿನ್ನಿಸಿದ್ದಾರೆ. ಹಿರಿಯ ಹಾಸ್ಯ ನಟ ರಾಜ್​ಪಾಲ್ ಯಾದವ್ ಶೂಟಿಂಗ್ ವೇಳೆ ಯಾರೊಟ್ಟಿಗೋ ಮಾತನಾಡುತ್ತಾ ನಿಂತಿದ್ದಾಗ, ಅಲ್ಲಿಗೆ ಕುದುರೆ ಹಿಡಿದು ಬರುವ ಅಕ್ಷಯ್ ಕುಮಾರ್, ರಾಜ್​​ಪಾಲ್ ಧರಿಸಿದ್ದ ನಕಲಿ ಕೂದಲಿನ ವಿಗ್ ಅನ್ನು ತಿನ್ನುವಂತೆ ಕುದುರೆಗೆ ಹೇಳಿದ್ದಾರೆ, ಕೂಡಲೇ ಆ ಕುದುರೆ ರಾಪ್​​ಪಾಲ್​ ಯಾದವ್ ಅವರ ವಿಗ್​​ಗೆ ಬಾಯಿ ಹಾಕಿದೆ. ತಲೆಗೆ ಏನೋ ತಾಗಿದಂತಾಗಿ ಹಿಂದೆ ತಿರುಗಿ ನೋಡಿದ ರಾಜ್​​ಪಾಲ್ ಯಾದವ್ ಕುದುರೆಯನ್ನು ನೋಡಿ ಹೌಹಾರಿದ್ದಾರೆ. ಇದನ್ನು ನೋಡಿ ಅಕ್ಷಯ್ ಕುಮಾರ್​​​ಗೆ ನಗುವೋ ನಗು.

View this post on Instagram

A post shared by Akshay Kumar (@akshaykumar)

ವಿಶೇಷವೆಂದರೆ ವಿಡಿಯೋನಲ್ಲಿ ರಾಜ್​​ಪಾಲ್ ಪಕ್ಕದಲ್ಲೇ ಪರೇಶ್ ರಾವಲ್ ಸಹ ಇದ್ದಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಮತ್ತು ಪರೇಶ್ ರಾವಲ್ ನಡುವೆ ಎಲ್ಲವೂ ಸರಿ ಇಲ್ಲ. ಅಕ್ಷಯ್ ನಿರ್ಮಾಣ ಮಾಡುತ್ತಿದ್ದ ‘ಹೇರಾ ಪೇರಿ 3’ ಸಿನಿಮಾನಲ್ಲಿ ತಾವು ನಟಿಸುವುದಿಲ್ಲ ಎಂದು ಪರೇಶ್ ಹೇಳಿದ್ದರು. ಸಂಧಾನದ ಬಳಿಕ ಒಪ್ಪಿಗೆ ಸೂಚಿಸಿದ್ದರಾದರೂ ಈಗ ಮತ್ತೆ ಸಿನಿಮಾದಿಂದ ಹೊರಗೆ ಹೋಗಿದ್ದು, ಪಡೆದಿದ್ದ ಅಡ್ವಾನ್ಸ್ ಮೊತ್ತವನ್ನು ಬಡ್ಡಿ ಸಮೇತ ಹಿಂತಿರುಗಿಸಿದ್ದಾರೆ. ಅಲ್ಲದೆ, ಸಂದರ್ಶನವೊಂದರಲ್ಲಿ ಅಕ್ಷಯ್ ನನ್ನ ಗೆಳೆಯ ಅಲ್ಲ ಸಹ ನಟ ಅಷ್ಟೆ ಎಂದು ಹೇಳಿಕೆ ಸಹ ನೀಡಿದ್ದರು.

ಈಗ ಅಕ್ಷಯ್ ಕುಮಾರ್ ಹಂಚಿಕೊಂಡಿರುವ ವಿಡಿಯೋನಲ್ಲಿ ಅಕ್ಷಯ್ ಕುಮಾರ್ ಮಾಡಿರುವ ಪ್ರ್ಯಾಂಕ್ ನೋಡಿ ಪರೇಶ್ ರಾವಲ್ ಸಹ ಮನಸಾರೆ ನಕ್ಕಿದ್ದಾರೆ. ವಿಡಿಯೋ ನೋಡಿದರೆ ಅಕ್ಷಯ್ ಮತ್ತು ಪರೇಶ್ ರಾವಲ್ ತಮ್ಮ ನಡುವೆ ಇದ್ದ ಮನಸ್ಥಾಪವನ್ನು ಮರೆತಂತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!