AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಅಕ್ಷಯ್ ಕುಮಾರ್ ತಾಯಿಯ ಸ್ಥಿತಿ ಗಂಭೀರ; ಇಂಗ್ಲೆಂಡ್​ನಿಂದ ಶೂಟಿಂಗ್ ಬಿಟ್ಟು ಬಂದ ನಟ

ಕಳೆದೊಂದು ತಿಂಗಳಿನಿಂದ ತಮ್ಮ ಸಿಂಡ್ರೆಲಾ ಸಿನಿಮಾ ಶೂಟಿಂಗ್​ಗಾಗಿ ಇಂಗ್ಲೆಂಡ್​ ಪ್ರವಾಸದಲ್ಲಿದ್ದ ಅಕ್ಷಯ್ ಕುಮಾರ್ ತಾಯಿಯ ಆರೋಗ್ಯ ವಿಚಾರಿಸಲು ಇಂದು ಮುಂಜಾನೆ ಮುಂಬೈಗೆ ವಾಪಾಸಾಗಿದ್ದಾರೆ.

Akshay Kumar: ಅಕ್ಷಯ್ ಕುಮಾರ್ ತಾಯಿಯ ಸ್ಥಿತಿ ಗಂಭೀರ; ಇಂಗ್ಲೆಂಡ್​ನಿಂದ ಶೂಟಿಂಗ್ ಬಿಟ್ಟು ಬಂದ ನಟ
ಮುಂಬೈಗೆ ಬಂದಿಳಿದ ಅಕ್ಷಯ್ ಕುಮಾರ್
TV9 Web
| Edited By: |

Updated on: Sep 06, 2021 | 8:44 PM

Share

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ತಾಯಿಯ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದೊಂದು ತಿಂಗಳಿನಿಂದ ತಮ್ಮ ಸಿಂಡ್ರೆಲಾ ಸಿನಿಮಾ ಶೂಟಿಂಗ್​ಗಾಗಿ ಇಂಗ್ಲೆಂಡ್​ ಪ್ರವಾಸದಲ್ಲಿದ್ದ ಅಕ್ಷಯ್ ಕುಮಾರ್ ಇಂದು ಮುಂಜಾನೆ ಮುಂಬೈಗೆ ವಾಪಾಸಾಗಿದ್ದಾರೆ. ಸಿನಿಮಾದ ಶೂಟಿಂಗನ್ನು ಅರ್ಧಕ್ಕೇ ನಿಲ್ಲಿಸಿ ಮುಂಬೈಗೆ ಬಂದಿರುವ ನಟ ಅಕ್ಷಯ್ ಕುಮಾರ್ ಹೀರಾನಂದಾನಿ ಆಸ್ಪತ್ರೆಗೆ ತೆರಳಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ.

ಅಕ್ಷಯ್ ಕುಮಾರ್ ತಮ್ಮ ತಾಯಿ ಅರುಣಾ ಭಾಟಿಯಾ ಅವರೊಂದಿಗೆ ಬಹಳ ಆಪ್ತ ಸಂಬಂಧ ಹೊಂದಿದ್ದರು. ಹೀಗಾಗಿ, ಅಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಯುತ್ತಿದ್ದಂತೆ ಇಂಗ್ಲೆಂಡ್​ನಿಂದ ವಾಪಾಸ್ ಬಂದಿದ್ದಾರೆ. ಕೆಲವು ದಿನಗಳಿಂದ ಅರುಣಾ ಭಾಟಿಯಾ ಅವರಿಗೆ ಅನಾರೋಗ್ಯ ಕಾಡುತ್ತಿತ್ತು. ಹೀಗಾಗಿ, ಎರಡು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ತನ್ನ ಅಗತ್ಯವಿಲ್ಲದ ಸಿಂಡ್ರೆಲಾ ಸಿನಿಮಾದ ಬೇರೆ ಸೀನ್​ಗಳನ್ನು ಶೂಟ್ ಮಾಡಿಕೊಳ್ಳಲು ಅಕ್ಷಯ್ ಕುಮಾರ್ ತಮ್ಮ ಸಿನಿಮಾದ ನಿರ್ಮಾಪಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಇಡೀ ಚಿತ್ರತಂಡ ಕೆಲವು ವಾರಗಳಿಂದ ಇಂಗ್ಲೆಂಡ್​ನಲ್ಲಿ ಶೂಟಿಂಗ್​ನಲ್ಲಿ ಬ್ಯುಸಿಯಾಗಿದೆ. ಹೀಗಾಗಿ, ತಾಯಿಯ ಆರೋಗ್ಯ ನೋಡಿಕೊಂಡು ಬೇಗ ವಾಪಾಸ್ ಬರುವುದಾಗಿ ಅವರು ನಿರ್ದೇಶಕರಿಗೆ ತಿಳಿಸಿ ತುರ್ತಾಗಿ ಮುಂಬೈಗೆ ವಾಪಾಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷ ಸಾಲು ಸಾಲು ಚಿತ್ರಗಳ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವ ಅಕ್ಷಯ್ ಕುಮಾರ್ ಅವರ ಕೆಲವು ಸಿನಿಮಾಗಳು ಈಗಾಗಲೇ ರಿಲೀಸ್ ಆಗಿವೆ. ಈಗಾಗಲೇ ಸಾರಾ ಅಲಿ ಖಾನ್ ಮತ್ತು ಧನುಷ್ ಜೊತೆಗೆ ಅತ್ರಂಗಿ ರೇ ಸಿನಿಮಾದ ಶೂಟಿಂಗ್ ಮುಗಿಸಿರುವ ಅಕ್ಷಯ್ ಕುಮಾರ್ ಬಚ್ಚನ್ ಪಾಂಡೆ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಹಾಗೇ, ಪೃಥ್ವಿರಾಜ್ ಚೌಹಾಣ್ ಅವರ ಜೀವನಕಥೆಯನ್ನು ಆಧರಿಸಿದ ಪೃಥ್ವಿರಾಜ್ ಸಿನಿಮಾದಲ್ಲಿ ಕೂಡ ಅಕ್ಷಯ್ ಕುಮಾರ್ ನಟಿಸಲಿದ್ದಾರೆ. ಬಳಿಕ ರೋಹಿತ್ ಶೆಟ್ಟಿಯ ಸೂರ್ಯವಂಶಿ ಸಿನಿಮಾ ಈ ವರ್ಷ ರಿಲೀಸ್ ಆಗುವ ಸಾಧ್ಯತೆಯಿದೆ. ಇದಿಷ್ಟೇ ಅಲ್ಲದೆ ರಕ್ಷಾಬಂಧನ ಮತ್ತು ರಾಮ್ ಸೇತು ಸಿನಿಮಾಗಳನ್ನು ಕೂಡ ಅಕ್ಷಯ್ ಕುಮಾರ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: Akshay Kumar: ಅಕ್ಷಯ್ ಕುಮಾರ್ ಆಡಿದ ಒಂದೇ ಮಾತಿಗೆ ಬಾಯ್ಮುಚ್ಚಿದ ಕಪಿಲ್ ಶರ್ಮಾ

Sidharth Shukla: ಸಿದ್ಧಾರ್ಥ್ ಶುಕ್ಲಾ ನಿಧನಕ್ಕೆ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಬಾಲಿವುಡ್ ತಾರೆಯರ ಸಂತಾಪ

(Akshay Kumar Flies back TO Mumbai From UK as Because his Mother Health is Critical and in ICU)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ