AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಅಕ್ಷಯ್ ಕುಮಾರ್ ತಾಯಿಯ ಸ್ಥಿತಿ ಗಂಭೀರ; ಇಂಗ್ಲೆಂಡ್​ನಿಂದ ಶೂಟಿಂಗ್ ಬಿಟ್ಟು ಬಂದ ನಟ

ಕಳೆದೊಂದು ತಿಂಗಳಿನಿಂದ ತಮ್ಮ ಸಿಂಡ್ರೆಲಾ ಸಿನಿಮಾ ಶೂಟಿಂಗ್​ಗಾಗಿ ಇಂಗ್ಲೆಂಡ್​ ಪ್ರವಾಸದಲ್ಲಿದ್ದ ಅಕ್ಷಯ್ ಕುಮಾರ್ ತಾಯಿಯ ಆರೋಗ್ಯ ವಿಚಾರಿಸಲು ಇಂದು ಮುಂಜಾನೆ ಮುಂಬೈಗೆ ವಾಪಾಸಾಗಿದ್ದಾರೆ.

Akshay Kumar: ಅಕ್ಷಯ್ ಕುಮಾರ್ ತಾಯಿಯ ಸ್ಥಿತಿ ಗಂಭೀರ; ಇಂಗ್ಲೆಂಡ್​ನಿಂದ ಶೂಟಿಂಗ್ ಬಿಟ್ಟು ಬಂದ ನಟ
ಮುಂಬೈಗೆ ಬಂದಿಳಿದ ಅಕ್ಷಯ್ ಕುಮಾರ್
TV9 Web
| Updated By: ಸುಷ್ಮಾ ಚಕ್ರೆ|

Updated on: Sep 06, 2021 | 8:44 PM

Share

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ತಾಯಿಯ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದೊಂದು ತಿಂಗಳಿನಿಂದ ತಮ್ಮ ಸಿಂಡ್ರೆಲಾ ಸಿನಿಮಾ ಶೂಟಿಂಗ್​ಗಾಗಿ ಇಂಗ್ಲೆಂಡ್​ ಪ್ರವಾಸದಲ್ಲಿದ್ದ ಅಕ್ಷಯ್ ಕುಮಾರ್ ಇಂದು ಮುಂಜಾನೆ ಮುಂಬೈಗೆ ವಾಪಾಸಾಗಿದ್ದಾರೆ. ಸಿನಿಮಾದ ಶೂಟಿಂಗನ್ನು ಅರ್ಧಕ್ಕೇ ನಿಲ್ಲಿಸಿ ಮುಂಬೈಗೆ ಬಂದಿರುವ ನಟ ಅಕ್ಷಯ್ ಕುಮಾರ್ ಹೀರಾನಂದಾನಿ ಆಸ್ಪತ್ರೆಗೆ ತೆರಳಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ.

ಅಕ್ಷಯ್ ಕುಮಾರ್ ತಮ್ಮ ತಾಯಿ ಅರುಣಾ ಭಾಟಿಯಾ ಅವರೊಂದಿಗೆ ಬಹಳ ಆಪ್ತ ಸಂಬಂಧ ಹೊಂದಿದ್ದರು. ಹೀಗಾಗಿ, ಅಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಯುತ್ತಿದ್ದಂತೆ ಇಂಗ್ಲೆಂಡ್​ನಿಂದ ವಾಪಾಸ್ ಬಂದಿದ್ದಾರೆ. ಕೆಲವು ದಿನಗಳಿಂದ ಅರುಣಾ ಭಾಟಿಯಾ ಅವರಿಗೆ ಅನಾರೋಗ್ಯ ಕಾಡುತ್ತಿತ್ತು. ಹೀಗಾಗಿ, ಎರಡು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ತನ್ನ ಅಗತ್ಯವಿಲ್ಲದ ಸಿಂಡ್ರೆಲಾ ಸಿನಿಮಾದ ಬೇರೆ ಸೀನ್​ಗಳನ್ನು ಶೂಟ್ ಮಾಡಿಕೊಳ್ಳಲು ಅಕ್ಷಯ್ ಕುಮಾರ್ ತಮ್ಮ ಸಿನಿಮಾದ ನಿರ್ಮಾಪಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಇಡೀ ಚಿತ್ರತಂಡ ಕೆಲವು ವಾರಗಳಿಂದ ಇಂಗ್ಲೆಂಡ್​ನಲ್ಲಿ ಶೂಟಿಂಗ್​ನಲ್ಲಿ ಬ್ಯುಸಿಯಾಗಿದೆ. ಹೀಗಾಗಿ, ತಾಯಿಯ ಆರೋಗ್ಯ ನೋಡಿಕೊಂಡು ಬೇಗ ವಾಪಾಸ್ ಬರುವುದಾಗಿ ಅವರು ನಿರ್ದೇಶಕರಿಗೆ ತಿಳಿಸಿ ತುರ್ತಾಗಿ ಮುಂಬೈಗೆ ವಾಪಾಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷ ಸಾಲು ಸಾಲು ಚಿತ್ರಗಳ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವ ಅಕ್ಷಯ್ ಕುಮಾರ್ ಅವರ ಕೆಲವು ಸಿನಿಮಾಗಳು ಈಗಾಗಲೇ ರಿಲೀಸ್ ಆಗಿವೆ. ಈಗಾಗಲೇ ಸಾರಾ ಅಲಿ ಖಾನ್ ಮತ್ತು ಧನುಷ್ ಜೊತೆಗೆ ಅತ್ರಂಗಿ ರೇ ಸಿನಿಮಾದ ಶೂಟಿಂಗ್ ಮುಗಿಸಿರುವ ಅಕ್ಷಯ್ ಕುಮಾರ್ ಬಚ್ಚನ್ ಪಾಂಡೆ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಹಾಗೇ, ಪೃಥ್ವಿರಾಜ್ ಚೌಹಾಣ್ ಅವರ ಜೀವನಕಥೆಯನ್ನು ಆಧರಿಸಿದ ಪೃಥ್ವಿರಾಜ್ ಸಿನಿಮಾದಲ್ಲಿ ಕೂಡ ಅಕ್ಷಯ್ ಕುಮಾರ್ ನಟಿಸಲಿದ್ದಾರೆ. ಬಳಿಕ ರೋಹಿತ್ ಶೆಟ್ಟಿಯ ಸೂರ್ಯವಂಶಿ ಸಿನಿಮಾ ಈ ವರ್ಷ ರಿಲೀಸ್ ಆಗುವ ಸಾಧ್ಯತೆಯಿದೆ. ಇದಿಷ್ಟೇ ಅಲ್ಲದೆ ರಕ್ಷಾಬಂಧನ ಮತ್ತು ರಾಮ್ ಸೇತು ಸಿನಿಮಾಗಳನ್ನು ಕೂಡ ಅಕ್ಷಯ್ ಕುಮಾರ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: Akshay Kumar: ಅಕ್ಷಯ್ ಕುಮಾರ್ ಆಡಿದ ಒಂದೇ ಮಾತಿಗೆ ಬಾಯ್ಮುಚ್ಚಿದ ಕಪಿಲ್ ಶರ್ಮಾ

Sidharth Shukla: ಸಿದ್ಧಾರ್ಥ್ ಶುಕ್ಲಾ ನಿಧನಕ್ಕೆ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಬಾಲಿವುಡ್ ತಾರೆಯರ ಸಂತಾಪ

(Akshay Kumar Flies back TO Mumbai From UK as Because his Mother Health is Critical and in ICU)

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ