AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ.

ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?
ಅಕ್ಷಯ್​ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Apr 05, 2021 | 6:48 PM

Share

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿರುವ ವಿಚಾರ ಭಾನುವಾರ ಖಚಿತವಾಗಿತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಜತೆಗೆ ಅವರು ಕ್ವಾರಂಟೈನ್​ ಆಗಿದ್ದರು. ಈಗ ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ‘ಇಂದು ಬೆಳಿಗ್ಗೆ ನನಗೆ ಕೋವಿಡ್​-19 ಪಾಸಿಟಿವ್​ ಆಗಿದೆ. ಎಲ್ಲ ನಿಯಮಗಳನ್ನು ಪಾಲಿಸಿ ನಾನು ತಕ್ಷಣ ಐಸೊಲೇಟ್​ ಆಗಿದ್ದೇನೆ. ಸದ್ಯ ಹೋಮ್​ ಕ್ವಾರಂಟೈನ್​ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ನೀವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರಿಕೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಾನು ಗುಣಮುಖನಾಗಿ ಬರುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದರು.

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಗುಣಮುಖನಾಗುತ್ತಿದ್ದೇನೆ. ಮುಂಜಾಗೃತಾ ಕ್ರಮವಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರವೇ ಮನೆಗೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸದಾ ಶೂಟಿಂಗ್​, ಡಬ್ಬಿಂಗ್​ ಎಂದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅಕ್ಷಯ್​ ಕುಮಾರ್​ ಅವರು ಇತ್ತೀಚೆಗೆ ‘ರಾಮ್​ ಸೇತು’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಅವರಿಗೆ ವೈರಸ್​ ಅಂಟಿದೆ ಎನ್ನಲಾಗುತ್ತಿದೆ. ಅನೇಕ ಸೆಲೆಬ್ರಿಟಿಗಳಿಗೆ ಇತ್ತೀಚೆಗೆ ಕೋವಿಡ್​-19 ಸೋಂಕು ತಗುಲಿದೆ. ಆಲಿಯಾ ಭಟ್​, ರಣಬೀರ್​ ಕಪೂರ್, ಪರೇಶ್​ ರಾವಲ್​, ಆಮೀರ್​ ಖಾನ್​, ಆರ್​. ಮಾಧವನ್​, ಮನೋಜ್​ ಭಾಜಪಾಯಿ ಸೇರಿದಂತೆ ಹಲವರಿಗೆ ಪಾಸಿಟಿವ್​ ಆಗಿತ್ತು.

ಇದನ್ನೂ ಓದಿ: Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

Follow Us
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್