AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ.

ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?
ಅಕ್ಷಯ್​ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Apr 05, 2021 | 6:48 PM

Share

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿರುವ ವಿಚಾರ ಭಾನುವಾರ ಖಚಿತವಾಗಿತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಜತೆಗೆ ಅವರು ಕ್ವಾರಂಟೈನ್​ ಆಗಿದ್ದರು. ಈಗ ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ‘ಇಂದು ಬೆಳಿಗ್ಗೆ ನನಗೆ ಕೋವಿಡ್​-19 ಪಾಸಿಟಿವ್​ ಆಗಿದೆ. ಎಲ್ಲ ನಿಯಮಗಳನ್ನು ಪಾಲಿಸಿ ನಾನು ತಕ್ಷಣ ಐಸೊಲೇಟ್​ ಆಗಿದ್ದೇನೆ. ಸದ್ಯ ಹೋಮ್​ ಕ್ವಾರಂಟೈನ್​ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ನೀವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರಿಕೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಾನು ಗುಣಮುಖನಾಗಿ ಬರುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದರು.

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಗುಣಮುಖನಾಗುತ್ತಿದ್ದೇನೆ. ಮುಂಜಾಗೃತಾ ಕ್ರಮವಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರವೇ ಮನೆಗೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸದಾ ಶೂಟಿಂಗ್​, ಡಬ್ಬಿಂಗ್​ ಎಂದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅಕ್ಷಯ್​ ಕುಮಾರ್​ ಅವರು ಇತ್ತೀಚೆಗೆ ‘ರಾಮ್​ ಸೇತು’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಅವರಿಗೆ ವೈರಸ್​ ಅಂಟಿದೆ ಎನ್ನಲಾಗುತ್ತಿದೆ. ಅನೇಕ ಸೆಲೆಬ್ರಿಟಿಗಳಿಗೆ ಇತ್ತೀಚೆಗೆ ಕೋವಿಡ್​-19 ಸೋಂಕು ತಗುಲಿದೆ. ಆಲಿಯಾ ಭಟ್​, ರಣಬೀರ್​ ಕಪೂರ್, ಪರೇಶ್​ ರಾವಲ್​, ಆಮೀರ್​ ಖಾನ್​, ಆರ್​. ಮಾಧವನ್​, ಮನೋಜ್​ ಭಾಜಪಾಯಿ ಸೇರಿದಂತೆ ಹಲವರಿಗೆ ಪಾಸಿಟಿವ್​ ಆಗಿತ್ತು.

ಇದನ್ನೂ ಓದಿ: Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು