AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ.

ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?
ಅಕ್ಷಯ್​ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Apr 05, 2021 | 6:48 PM

Share

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿರುವ ವಿಚಾರ ಭಾನುವಾರ ಖಚಿತವಾಗಿತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಜತೆಗೆ ಅವರು ಕ್ವಾರಂಟೈನ್​ ಆಗಿದ್ದರು. ಈಗ ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ‘ಇಂದು ಬೆಳಿಗ್ಗೆ ನನಗೆ ಕೋವಿಡ್​-19 ಪಾಸಿಟಿವ್​ ಆಗಿದೆ. ಎಲ್ಲ ನಿಯಮಗಳನ್ನು ಪಾಲಿಸಿ ನಾನು ತಕ್ಷಣ ಐಸೊಲೇಟ್​ ಆಗಿದ್ದೇನೆ. ಸದ್ಯ ಹೋಮ್​ ಕ್ವಾರಂಟೈನ್​ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ನೀವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರಿಕೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಾನು ಗುಣಮುಖನಾಗಿ ಬರುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದರು.

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಗುಣಮುಖನಾಗುತ್ತಿದ್ದೇನೆ. ಮುಂಜಾಗೃತಾ ಕ್ರಮವಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರವೇ ಮನೆಗೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸದಾ ಶೂಟಿಂಗ್​, ಡಬ್ಬಿಂಗ್​ ಎಂದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅಕ್ಷಯ್​ ಕುಮಾರ್​ ಅವರು ಇತ್ತೀಚೆಗೆ ‘ರಾಮ್​ ಸೇತು’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಅವರಿಗೆ ವೈರಸ್​ ಅಂಟಿದೆ ಎನ್ನಲಾಗುತ್ತಿದೆ. ಅನೇಕ ಸೆಲೆಬ್ರಿಟಿಗಳಿಗೆ ಇತ್ತೀಚೆಗೆ ಕೋವಿಡ್​-19 ಸೋಂಕು ತಗುಲಿದೆ. ಆಲಿಯಾ ಭಟ್​, ರಣಬೀರ್​ ಕಪೂರ್, ಪರೇಶ್​ ರಾವಲ್​, ಆಮೀರ್​ ಖಾನ್​, ಆರ್​. ಮಾಧವನ್​, ಮನೋಜ್​ ಭಾಜಪಾಯಿ ಸೇರಿದಂತೆ ಹಲವರಿಗೆ ಪಾಸಿಟಿವ್​ ಆಗಿತ್ತು.

ಇದನ್ನೂ ಓದಿ: Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ