AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ.

ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?
ಅಕ್ಷಯ್​ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Apr 05, 2021 | 6:48 PM

Share

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿರುವ ವಿಚಾರ ಭಾನುವಾರ ಖಚಿತವಾಗಿತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಜತೆಗೆ ಅವರು ಕ್ವಾರಂಟೈನ್​ ಆಗಿದ್ದರು. ಈಗ ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ‘ಇಂದು ಬೆಳಿಗ್ಗೆ ನನಗೆ ಕೋವಿಡ್​-19 ಪಾಸಿಟಿವ್​ ಆಗಿದೆ. ಎಲ್ಲ ನಿಯಮಗಳನ್ನು ಪಾಲಿಸಿ ನಾನು ತಕ್ಷಣ ಐಸೊಲೇಟ್​ ಆಗಿದ್ದೇನೆ. ಸದ್ಯ ಹೋಮ್​ ಕ್ವಾರಂಟೈನ್​ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ನೀವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರಿಕೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಾನು ಗುಣಮುಖನಾಗಿ ಬರುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದರು.

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಗುಣಮುಖನಾಗುತ್ತಿದ್ದೇನೆ. ಮುಂಜಾಗೃತಾ ಕ್ರಮವಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರವೇ ಮನೆಗೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸದಾ ಶೂಟಿಂಗ್​, ಡಬ್ಬಿಂಗ್​ ಎಂದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅಕ್ಷಯ್​ ಕುಮಾರ್​ ಅವರು ಇತ್ತೀಚೆಗೆ ‘ರಾಮ್​ ಸೇತು’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಅವರಿಗೆ ವೈರಸ್​ ಅಂಟಿದೆ ಎನ್ನಲಾಗುತ್ತಿದೆ. ಅನೇಕ ಸೆಲೆಬ್ರಿಟಿಗಳಿಗೆ ಇತ್ತೀಚೆಗೆ ಕೋವಿಡ್​-19 ಸೋಂಕು ತಗುಲಿದೆ. ಆಲಿಯಾ ಭಟ್​, ರಣಬೀರ್​ ಕಪೂರ್, ಪರೇಶ್​ ರಾವಲ್​, ಆಮೀರ್​ ಖಾನ್​, ಆರ್​. ಮಾಧವನ್​, ಮನೋಜ್​ ಭಾಜಪಾಯಿ ಸೇರಿದಂತೆ ಹಲವರಿಗೆ ಪಾಸಿಟಿವ್​ ಆಗಿತ್ತು.

ಇದನ್ನೂ ಓದಿ: Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು