AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್​ಟೇಕರ್​ ಜತೆ ಗುದ್ದಾಡಿದ್ದ ಅಕ್ಷಯ್​ ಕುಮಾರ್​? ಫೋಟೋ ಹಂಚಿಕೊಂಡ ನಟ  

ಅಂಡರ್​ಟೇಕರ್​ ಅವರನ್ನು ಸೋಲಿಸುವ ದೃಶ್ಯವೊಂದು ‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾದಲ್ಲಿ ಬರುತ್ತದೆ. ಈಗ ಚಿತ್ರ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮೀಮ್​ಗ​ಳು ಹರಿದಾಡುತ್ತಿವೆ.

ಅಂಡರ್​ಟೇಕರ್​ ಜತೆ ಗುದ್ದಾಡಿದ್ದ ಅಕ್ಷಯ್​ ಕುಮಾರ್​? ಫೋಟೋ ಹಂಚಿಕೊಂಡ ನಟ  
‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾದ ದೃಶ್ಯ
Follow us
ರಾಜೇಶ್ ದುಗ್ಗುಮನೆ
|

Updated on:Jun 13, 2021 | 8:43 PM

ಅಕ್ಷಯ್​ ಕುಮಾರ್​ ನಟನೆಯ ‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾ ತೆರೆಗೆ ಬಂದು 25 ವರ್ಷ ಕಳೆದಿದೆ. ಈ ಸಿನಿಮಾ ಅಭಿಮಾನಿಗಳಿಂದ ಅದ್ಭುತ ರೆಸ್ಪಾನ್ಸ್​ ಪಡೆದುಕೊಂಡಿತ್ತು. ಈ ಚಿತ್ರ ಅಕ್ಷಯ್​ ಕುಮಾರ್​ ಅವರ ಸಿನಿಮಾ ಕರಿಯರ್​ಗೆ ಒಳ್ಳೆಯ ಮೈಲೇಜ್​ ನೀಡಿತ್ತು. ಈ ಸಿನಿಮಾವನ್ನು ಅಕ್ಷಯ್​ ಕುಮಾರ್​ ನೆನಪಿಸಿಕೊಂಡಿದ್ದಾರೆ. ಅಲ್ಲದೆ, ಅಚ್ಚರಿಯ ವಿಚಾರ ಕೂಡ ಹಂಚಿಕೊಂಡಿದ್ದಾರೆ.

ಅಂಡರ್​ಟೇಕರ್​ ಅವರನ್ನು ಸೋಲಿಸುವ ದೃಶ್ಯವೊಂದು ‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾದಲ್ಲಿ ಬರುತ್ತದೆ. ಈಗ ಚಿತ್ರ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮೀಮ್​ಗ​ಳು ಹರಿದಾಡುತ್ತಿವೆ. ಈ ಮೀಮ್​ನಲ್ಲಿ ಅಂಡರ್​ಟೇಕರ್​ ಅವರನ್ನು ಸೋಲಿಸಿದವರು ಯಾರ್ಯಾರು ಎಂಬುದನನ್ನು ತೋರಿಸುವ ವೇಳೆ ಅಕ್ಷಯ್​ ಕುಮಾರ್​ ಫೋಟೋ ಕೂಡ ಇತ್ತು.

ಹಾಗಾದರೆ, ನಿಜವಾಗಲೂ ಅಕ್ಷಯ್​ ಕುಮಾರ್​ ಅವರು ಅಂಡರ್​ಟೇಕರ್​ ವಿರುದ್ಧ ಹೋರಾಡಿದ್ದರಾ? ಅದಕ್ಕೂ ಉತ್ತರವಿದೆ. ‘ನಾನು ನಿಜವಾಗಲೂ ಅಂಡರ್​ಟೇಕರ್​ ಜತೆ ಸೆಣೆಸಿಲ್ಲ. ವ್ರೆಸ್ಲರ್​ ಬ್ರಿಯಾನ್​ ಲೀ ಅವರು ಅಂಡರ್​ಟೇಕರ್​ ಆಗಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು’ ಎಂದಿದ್ದಾರೆ.

ಅಕ್ಷಯ್​ ಕುಮಾರ್​ ಅವರು ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಯಶ್​ ರಾಜ್​ ಫಿಲ್ಮ್ಸ್ ನಿರ್ಮಿಸುತ್ತಿರುವ ‘ಪೃಥ್ವಿರಾಜ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಾಡೆಲ್​ ಮಾನುಷಿ ಚಿಲ್ಲರ್​ ಅವರು ಸನ್ಯೋಗಿತಾ ಪಾತ್ರ ನಿರ್ವಹಿಸುತ್ತಿದ್ದು, ಈ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚೆಗೆ ಸಿನಿಮಾ ಟೈಟಲ್​ ಬದಲಿಸುವಂತೆ ಕರಣಿ ಸೇನಾದವರು ಪಟ್ಟು ಹಿಡಿದಿದ್ದರು. ಅಕ್ಷಯ್​ ಕುಮಾರ್​ ನಟನೆಯ ಸೂರ್ಯವಂಶಿ ಸಿನಿಮಾ ರಿಲೀಸ್​ಗೆ ರೆಡಿ ಇದೆ.

ಇದನ್ನೂ ಓದಿ: ‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ

Published On - 8:41 pm, Sun, 13 June 21

ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ