AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್​ಟೇಕರ್​ ಜತೆ ಗುದ್ದಾಡಿದ್ದ ಅಕ್ಷಯ್​ ಕುಮಾರ್​? ಫೋಟೋ ಹಂಚಿಕೊಂಡ ನಟ  

ಅಂಡರ್​ಟೇಕರ್​ ಅವರನ್ನು ಸೋಲಿಸುವ ದೃಶ್ಯವೊಂದು ‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾದಲ್ಲಿ ಬರುತ್ತದೆ. ಈಗ ಚಿತ್ರ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮೀಮ್​ಗ​ಳು ಹರಿದಾಡುತ್ತಿವೆ.

ಅಂಡರ್​ಟೇಕರ್​ ಜತೆ ಗುದ್ದಾಡಿದ್ದ ಅಕ್ಷಯ್​ ಕುಮಾರ್​? ಫೋಟೋ ಹಂಚಿಕೊಂಡ ನಟ  
‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾದ ದೃಶ್ಯ
ರಾಜೇಶ್ ದುಗ್ಗುಮನೆ
|

Updated on:Jun 13, 2021 | 8:43 PM

Share

ಅಕ್ಷಯ್​ ಕುಮಾರ್​ ನಟನೆಯ ‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾ ತೆರೆಗೆ ಬಂದು 25 ವರ್ಷ ಕಳೆದಿದೆ. ಈ ಸಿನಿಮಾ ಅಭಿಮಾನಿಗಳಿಂದ ಅದ್ಭುತ ರೆಸ್ಪಾನ್ಸ್​ ಪಡೆದುಕೊಂಡಿತ್ತು. ಈ ಚಿತ್ರ ಅಕ್ಷಯ್​ ಕುಮಾರ್​ ಅವರ ಸಿನಿಮಾ ಕರಿಯರ್​ಗೆ ಒಳ್ಳೆಯ ಮೈಲೇಜ್​ ನೀಡಿತ್ತು. ಈ ಸಿನಿಮಾವನ್ನು ಅಕ್ಷಯ್​ ಕುಮಾರ್​ ನೆನಪಿಸಿಕೊಂಡಿದ್ದಾರೆ. ಅಲ್ಲದೆ, ಅಚ್ಚರಿಯ ವಿಚಾರ ಕೂಡ ಹಂಚಿಕೊಂಡಿದ್ದಾರೆ.

ಅಂಡರ್​ಟೇಕರ್​ ಅವರನ್ನು ಸೋಲಿಸುವ ದೃಶ್ಯವೊಂದು ‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾದಲ್ಲಿ ಬರುತ್ತದೆ. ಈಗ ಚಿತ್ರ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮೀಮ್​ಗ​ಳು ಹರಿದಾಡುತ್ತಿವೆ. ಈ ಮೀಮ್​ನಲ್ಲಿ ಅಂಡರ್​ಟೇಕರ್​ ಅವರನ್ನು ಸೋಲಿಸಿದವರು ಯಾರ್ಯಾರು ಎಂಬುದನನ್ನು ತೋರಿಸುವ ವೇಳೆ ಅಕ್ಷಯ್​ ಕುಮಾರ್​ ಫೋಟೋ ಕೂಡ ಇತ್ತು.

ಹಾಗಾದರೆ, ನಿಜವಾಗಲೂ ಅಕ್ಷಯ್​ ಕುಮಾರ್​ ಅವರು ಅಂಡರ್​ಟೇಕರ್​ ವಿರುದ್ಧ ಹೋರಾಡಿದ್ದರಾ? ಅದಕ್ಕೂ ಉತ್ತರವಿದೆ. ‘ನಾನು ನಿಜವಾಗಲೂ ಅಂಡರ್​ಟೇಕರ್​ ಜತೆ ಸೆಣೆಸಿಲ್ಲ. ವ್ರೆಸ್ಲರ್​ ಬ್ರಿಯಾನ್​ ಲೀ ಅವರು ಅಂಡರ್​ಟೇಕರ್​ ಆಗಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು’ ಎಂದಿದ್ದಾರೆ.

ಅಕ್ಷಯ್​ ಕುಮಾರ್​ ಅವರು ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಯಶ್​ ರಾಜ್​ ಫಿಲ್ಮ್ಸ್ ನಿರ್ಮಿಸುತ್ತಿರುವ ‘ಪೃಥ್ವಿರಾಜ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಾಡೆಲ್​ ಮಾನುಷಿ ಚಿಲ್ಲರ್​ ಅವರು ಸನ್ಯೋಗಿತಾ ಪಾತ್ರ ನಿರ್ವಹಿಸುತ್ತಿದ್ದು, ಈ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚೆಗೆ ಸಿನಿಮಾ ಟೈಟಲ್​ ಬದಲಿಸುವಂತೆ ಕರಣಿ ಸೇನಾದವರು ಪಟ್ಟು ಹಿಡಿದಿದ್ದರು. ಅಕ್ಷಯ್​ ಕುಮಾರ್​ ನಟನೆಯ ಸೂರ್ಯವಂಶಿ ಸಿನಿಮಾ ರಿಲೀಸ್​ಗೆ ರೆಡಿ ಇದೆ.

ಇದನ್ನೂ ಓದಿ: ‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ

Published On - 8:41 pm, Sun, 13 June 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!