AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್​ಟೇಕರ್​ ಜತೆ ಗುದ್ದಾಡಿದ್ದ ಅಕ್ಷಯ್​ ಕುಮಾರ್​? ಫೋಟೋ ಹಂಚಿಕೊಂಡ ನಟ  

ಅಂಡರ್​ಟೇಕರ್​ ಅವರನ್ನು ಸೋಲಿಸುವ ದೃಶ್ಯವೊಂದು ‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾದಲ್ಲಿ ಬರುತ್ತದೆ. ಈಗ ಚಿತ್ರ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮೀಮ್​ಗ​ಳು ಹರಿದಾಡುತ್ತಿವೆ.

ಅಂಡರ್​ಟೇಕರ್​ ಜತೆ ಗುದ್ದಾಡಿದ್ದ ಅಕ್ಷಯ್​ ಕುಮಾರ್​? ಫೋಟೋ ಹಂಚಿಕೊಂಡ ನಟ  
‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾದ ದೃಶ್ಯ
ರಾಜೇಶ್ ದುಗ್ಗುಮನೆ
|

Updated on:Jun 13, 2021 | 8:43 PM

Share

ಅಕ್ಷಯ್​ ಕುಮಾರ್​ ನಟನೆಯ ‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾ ತೆರೆಗೆ ಬಂದು 25 ವರ್ಷ ಕಳೆದಿದೆ. ಈ ಸಿನಿಮಾ ಅಭಿಮಾನಿಗಳಿಂದ ಅದ್ಭುತ ರೆಸ್ಪಾನ್ಸ್​ ಪಡೆದುಕೊಂಡಿತ್ತು. ಈ ಚಿತ್ರ ಅಕ್ಷಯ್​ ಕುಮಾರ್​ ಅವರ ಸಿನಿಮಾ ಕರಿಯರ್​ಗೆ ಒಳ್ಳೆಯ ಮೈಲೇಜ್​ ನೀಡಿತ್ತು. ಈ ಸಿನಿಮಾವನ್ನು ಅಕ್ಷಯ್​ ಕುಮಾರ್​ ನೆನಪಿಸಿಕೊಂಡಿದ್ದಾರೆ. ಅಲ್ಲದೆ, ಅಚ್ಚರಿಯ ವಿಚಾರ ಕೂಡ ಹಂಚಿಕೊಂಡಿದ್ದಾರೆ.

ಅಂಡರ್​ಟೇಕರ್​ ಅವರನ್ನು ಸೋಲಿಸುವ ದೃಶ್ಯವೊಂದು ‘ಖಿಲಾಡಿಯೋಂಕಾ ಕಾ ಖಿಲಾಡಿ’ ಸಿನಿಮಾದಲ್ಲಿ ಬರುತ್ತದೆ. ಈಗ ಚಿತ್ರ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮೀಮ್​ಗ​ಳು ಹರಿದಾಡುತ್ತಿವೆ. ಈ ಮೀಮ್​ನಲ್ಲಿ ಅಂಡರ್​ಟೇಕರ್​ ಅವರನ್ನು ಸೋಲಿಸಿದವರು ಯಾರ್ಯಾರು ಎಂಬುದನನ್ನು ತೋರಿಸುವ ವೇಳೆ ಅಕ್ಷಯ್​ ಕುಮಾರ್​ ಫೋಟೋ ಕೂಡ ಇತ್ತು.

ಹಾಗಾದರೆ, ನಿಜವಾಗಲೂ ಅಕ್ಷಯ್​ ಕುಮಾರ್​ ಅವರು ಅಂಡರ್​ಟೇಕರ್​ ವಿರುದ್ಧ ಹೋರಾಡಿದ್ದರಾ? ಅದಕ್ಕೂ ಉತ್ತರವಿದೆ. ‘ನಾನು ನಿಜವಾಗಲೂ ಅಂಡರ್​ಟೇಕರ್​ ಜತೆ ಸೆಣೆಸಿಲ್ಲ. ವ್ರೆಸ್ಲರ್​ ಬ್ರಿಯಾನ್​ ಲೀ ಅವರು ಅಂಡರ್​ಟೇಕರ್​ ಆಗಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು’ ಎಂದಿದ್ದಾರೆ.

ಅಕ್ಷಯ್​ ಕುಮಾರ್​ ಅವರು ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಯಶ್​ ರಾಜ್​ ಫಿಲ್ಮ್ಸ್ ನಿರ್ಮಿಸುತ್ತಿರುವ ‘ಪೃಥ್ವಿರಾಜ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಾಡೆಲ್​ ಮಾನುಷಿ ಚಿಲ್ಲರ್​ ಅವರು ಸನ್ಯೋಗಿತಾ ಪಾತ್ರ ನಿರ್ವಹಿಸುತ್ತಿದ್ದು, ಈ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚೆಗೆ ಸಿನಿಮಾ ಟೈಟಲ್​ ಬದಲಿಸುವಂತೆ ಕರಣಿ ಸೇನಾದವರು ಪಟ್ಟು ಹಿಡಿದಿದ್ದರು. ಅಕ್ಷಯ್​ ಕುಮಾರ್​ ನಟನೆಯ ಸೂರ್ಯವಂಶಿ ಸಿನಿಮಾ ರಿಲೀಸ್​ಗೆ ರೆಡಿ ಇದೆ.

ಇದನ್ನೂ ಓದಿ: ‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ

Published On - 8:41 pm, Sun, 13 June 21

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು