ಸ್ವಾತಂತ್ರ್ಯ ದಿನಾಚರಣೆಗೆ ಅಕ್ಷಯ್​ ಕುಮಾರ್​ ಕಡೆಯಿಂದ ಸಿಗಲಿದೆ ಗಿಫ್ಟ್​; ಲೀಕ್​ ಆಯ್ತು ಬಿಗ್​ ನ್ಯೂಸ್​

Sooryavanshi Release Date: ದೀಪಾವಳಿ ಹಬ್ಬದ ಸಮಯದಲ್ಲಿ ಸೂರ್ಯವಂಶಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗಿತ್ತು. ಆದರೆ ಈಗ ಅದಕ್ಕೂ ಮುನ್ನವೇ ರಿಲೀಸ್​ ಮಾಡುವ ಬಗ್ಗೆ ಪ್ಲ್ಯಾನ್​ ನಡೆಯುತ್ತಿದೆ ಎಂಬ ಮಾಹಿತಿ ಹರಿದಾಡುತ್ತಿದೆ.

ಸ್ವಾತಂತ್ರ್ಯ ದಿನಾಚರಣೆಗೆ ಅಕ್ಷಯ್​ ಕುಮಾರ್​ ಕಡೆಯಿಂದ ಸಿಗಲಿದೆ ಗಿಫ್ಟ್​; ಲೀಕ್​ ಆಯ್ತು ಬಿಗ್​ ನ್ಯೂಸ್​
ಅಕ್ಷಯ್​ ಕುಮಾರ್​
Follow us
| Updated By: ಮದನ್​ ಕುಮಾರ್​

Updated on: Jun 26, 2021 | 8:14 AM

ಸಮಯಕ್ಕೆ ಸಿಕ್ಕಾಪಟ್ಟೆ ಬೆಲೆ ಕೊಡುತ್ತಾರೆ ನಟ ಅಕ್ಷಯ್​ ಕುಮಾರ್​. ಅದೇ ಕಾರಣಕ್ಕಾಗಿ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಮಾಡುತ್ತಿರುತ್ತಾರೆ. ಆದರೆ ಕೊರೊನಾ ವೈರಸ್​ ಹಾವಳಿಯಿಂದಾಗಿ ಒಂದೂವರೆ ವರ್ಷದಿಂದ ಈಚೆಗೆ ಅವರ ವೇಗಕ್ಕೆ ಕೊಂಚ ಬ್ರೇಕ್​ ಬಿದ್ದಿದೆ. ಸದ್ಯ ಅವರು ಹಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಪೈಕಿ ಬಿಡುಗಡೆಗೆ ಸಿದ್ಧವಾಗಿರುವ ‘ಸೂರ್ಯವಂಶಿ’ ಬಗ್ಗೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಈ ಚಿತ್ರದ ಬಗ್ಗೆ ಒಂದು ಸುದ್ದಿ ಸೋರಿಕೆ ಆಗಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2020ರ ಆರಂಭದಲ್ಲೇ ‘ಸೂರ್ಯವಂಶಿ’ ರಿಲೀಸ್​ ಆಗಬೇಕಿತ್ತು. ಆದರೆ ಆ ಸಮಯದಲ್ಲಿ ಕೊರೊನಾ ವೈರಸ್​ ಕಾಟ ಶುರು ಆಗಿದ್ದರಿಂದ ಸಿನಿಮಾ ಬಿಡುಗಡೆ ಸಾಧ್ಯವಾಗಲಿಲ್ಲ. ನಂತರ ಲಾಕ್​ಡೌನ್​ ಪರಿಣಾಮ ಚಿತ್ರಮಂದಿರಗಳು ಬಂದ್​ ಆಗಿ, ಅನಿರ್ಧಿಷ್ಟಾವಧಿಗೆ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ‘ಸೂರ್ಯವಂಶಿ’ ಬಿಡುಗಡೆಗಾಗಿ ಸೂಕ್ತ ದಿನಾಂಕವನ್ನು ಚಿತ್ರತಂಡ ಫಿಕ್ಸ್​ ಮಾಡಿದೆ ಎಂಬ ಮಾತು ಕೇಳಿಬಂದಿದೆ.

ಸದ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗುತ್ತಿದೆ. ಹಾಗಾಗಿ ನಿಧಾನಕ್ಕೆ ಚಿತ್ರಮಂದಿರಗಳನ್ನು ತೆರೆಯುವ ಸಾಧ್ಯತೆ ಇದೆ. ಈ ವರ್ಷ ದೀಪಾವಳಿ ಹಬ್ಬದ ಸಮಯದಲ್ಲಿ ಸೂರ್ಯವಂಶಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗಿತ್ತು. ಆದರೆ ಈಗ ಅದಕ್ಕೂ ಮುನ್ನವೇ ರಿಲೀಸ್​ ಮಾಡುವ ಬಗ್ಗೆ ಪ್ಲ್ಯಾನ್​ ನಡೆಯುತ್ತಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಆಗಸ್ಟ್​ ಎರಡನೇ ವಾರದಲ್ಲಿ ‘ಸೂರ್ಯವಂಶಿ’ ರಿಲೀಸ್​ ಆದರೆ ಸೂಕ್ತ ಎಂಬ ಅಭಿಪ್ರಾಯ ಚಿತ್ರತಂಡದ ಸದಸ್ಯರಿಂದ ವ್ಯಕ್ತವಾಗಿದೆ ಎನ್ನಲಾಗಿದೆ.

ಈ ಚಿತ್ರದ ಕಥೆಯಲ್ಲಿ ದೇಶಭಕ್ತಿಯ ಅಂಶಗಳು ಕೂಡ ಇದೆ. ಹಾಗಾಗಿ ಸ್ವಾತಂತ್ರ್ಯ ದಿನಾಚರಣೆಯ ಆಸುಪಾಸಿನಲ್ಲಿ ಬಿಡುಗಡೆ ಆಗುವ ಸಾಧ್ಯತೆ ದಟ್ಟವಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ಅಧಿಕೃತ ಮಾಹಿತಿ ಹೊರಬೀಳಲು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ಕತ್ರಿನಾ ಕೈಫ್​ ನಟಿಸಿದ್ದಾರೆ. ರೋಹಿತ್​ ಶೆಟ್ಟಿ ನಿರ್ದೇಶನ ಮಾಡಿದ್ದು, ಅಜಯ್​ ದೇವಗನ್ ಹಾಗೂ ರಣವೀರ್​ ಸಿಂಗ್​ ಕೂಡ ಅಭಿನಯಿಸಿದ್ದಾರೆ.

ಅಕ್ಷಯ್ ಕುಮಾರ್​ ನಟನೆಯ ‘ಬೆಲ್​ ಬಾಟಂ’ ಚಿತ್ರ ಕೂಡ ಬಿಡುಗಡೆಗೆ ಸಜ್ಜಾಗಿದೆ. ಅತರಂಗಿ ರೇ, ರಾಮ್​ ಸೇತು, ರಕ್ಷಾ ಬಂದನ್​, ಬಚ್ಚನ್​ ಪಾಂಡೆ ಸೇರಿದಂತೆ ಹಲವಾರು ಸಿನಿಮಾಗಳು ಅಕ್ಷಯ್​ ಕುಮಾರ್​ ಕೈಯಲ್ಲಿವೆ.

ಇದನ್ನೂ ಓದಿ:

ಬಾಲಿವುಡ್ ಪಾರ್ಟಿಗಳೆಂದರೆ ಅಕ್ಷಯ್​ ಕುಮಾರ್​​ಗೆ ಅಲರ್ಜಿ? ಇದರ ಹಿಂದಿದೆ ಇಂಟರೆಸ್ಟಿಂಗ್​ ವಿಚಾರ

Akshay Kumar: ಪಾಕಿಸ್ತಾನದ ಬಗ್ಗೆ ಅಕ್ಷಯ್​ ಕುಮಾರ್​ ಪ್ರೀತಿಯ ಮಾತು; ವಿಡಿಯೋ ವೈರಲ್​ ಮಾಡಿದ ಕಮಾಲ್​ ಖಾನ್​

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ