AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

Covid-19: ಕೊರೊನಾ ವೈರಸ್​ ಬಗ್ಗೆ ಜಾಗೃತಿ ಮೂಡಿಸಲು ಅಕ್ಷಯ್​ ಕುಮಾರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಪ್ರಯತ್ನಿಸಿದ್ದರು. ಈಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.

Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
| Updated By: preethi shettigar|

Updated on: Apr 04, 2021 | 10:15 AM

Share

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ ಅವರಿಗೆ ಕೊರೊನಾ ವೈರಸ್​ ಪಾಸಿಟಿವ್​ ಆಗಿದೆ. ಈ ವಿಚಾರವನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಖಚಿತಪಡಿಸಿದ್ದಾರೆ. ಅಲ್ಲದೆ, ಎಲ್ಲರೂ ಸುರಕ್ಷಿತವಾಗಿರುವಂತೆ ಮನವಿ ಮಾಡಿಕೊಂಡಿದ್ದಾರೆ. ಸದಾ ಶೂಟಿಂಗ್​, ಡಬ್ಬಿಂಗ್​ ಎಂದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅಕ್ಷಯ್​ ಕುಮಾರ್​ ಅವರು ಇತ್ತೀಚೆಗೆ ‘ರಾಮ್​ ಸೇತು’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈಗ ಅವರು ಕ್ವಾರಂಟೈನ್​ ಆಗಿದ್ದಾರೆ. 

‘ಇಂದು ಬೆಳಿಗ್ಗೆ ನನಗೆ ಕೋವಿಡ್​-19 ಪಾಸಿಟಿವ್​ ಆಗಿದೆ. ಎಲ್ಲ ನಿಯಮಗಳನ್ನು ಪಾಲಿಸಿ ನಾನು ತಕ್ಷಣ ಐಸೊಲೇಟ್​ ಆಗಿದ್ದೇನೆ. ಸದ್ಯ ಹೋಮ್​ ಕ್ವಾರಂಟೈನ್​ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ನೀವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರಿಕೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಾನು ಗುಣಮುಖನಾಗಿ ಬರುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದಾರೆ.

ಕೋವಿಡ್​-19 ಹಾವಳಿಯಿಂದ ಇಡೀ ದೇಶವೇ ಲಾಕ್​ಡೌನ್​ ಆಗಿ ಕಷ್ಟ ಅನುಭವಿಸುತ್ತಿದ್ದ ದಿನಗಳಲ್ಲಿ ಅಕ್ಷಯ್​ ಕುಮಾರ್​ ಅವರು ಬರೋಬ್ಬರಿ 25 ಕೋಟಿ ರೂಪಾಯಿಗಳನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದರು. ಆಗ ಅವರಿಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಅಲ್ಲದೆ, ಕೊರೊನಾ ವೈರಸ್​ ಬಗ್ಗೆ ಜಾಗೃತಿ ಮೂಡಿಸಲು ಅವರು ಸೋಶಿಯಲ್​ ಮೀಡಿಯಾ ಮೂಲಕ ಪ್ರಯತ್ನಿಸಿದ್ದರು. ಈಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.

ಅಕ್ಷಯ್​ ಕುಮಾರ್​ ಬೇಗ ಗುಣಮುಖರಾಗಲಿ ಎಂದು ಕೋಟ್ಯಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಸಿನಿಮಾ ಕೆಲಸಗಳನ್ನು ತುಂಬ ವೇಗವಾಗಿ ಮುಗಿಸುವುದರಲ್ಲಿ ಅಕ್ಷಯ್​ ಕುಮಾರ್​ ಫೇಮಸ್​. ಲಾಕ್​ಡೌನ್​ ಸಡಿಲಿಕೆ ನಂತರ ಅವರು ‘ಬೆಲ್​ ಬಾಟಂ’ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದರು. ಇತ್ತೀಚೆಗಷ್ಟೇ ‘ರಾಮ್​ ಸೇತು’ ಸಿನಿಮಾದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದರು. ಆದರೆ ಈಗ ಕೋವಿಡ್​ ಪಾಸಿಟಿವ್​ ಆಗಿರುವುದರಿಂದ ಕ್ವಾರಂಟೈನ್​ ಆಗಿ ವಿಶ್ರಾಂತಿ ತೆಗೆದುಕೊಳ್ಳುವುದು ಅನಿವಾರ್ಯ ಆಗಿದೆ.

ಅನೇಕ ಸೆಲೆಬ್ರಿಟಿಗಳಿಗೆ ಇತ್ತೀಚೆಗೆ ಕೋವಿಡ್​-19 ಸೋಂಕು ತಗುಲಿದೆ. ಆಲಿಯಾ ಭಟ್​, ರಣಬೀರ್​ ಕಪೂರ್, ಪರೇಶ್​ ರಾವಲ್​, ಆಮೀರ್​ ಖಾನ್​, ಆರ್​. ಮಾಧವನ್​, ಮನೋಜ್​ ಭಾಜಪಾಯಿ ಸೇರಿದಂತೆ ಹಲವರಿಗೆ ಪಾಸಿಟಿವ್​ ಆಗಿತ್ತು.

ಇದನ್ನೂ ಓದಿ: Ram Setu: ರಾಮ ಸೇತುವೆ ವಿಚಾರದಲ್ಲಿ ಮುಂದುವರಿಯಲು ಅಭಿಮಾನಿಗಳ ಅಭಿಪ್ರಾಯ ಕೇಳುತ್ತಿರುವ ನಟ ಅಕ್ಷಯ್​ ಕುಮಾರ್​!

(Akshay Kumar tested positive for coronavirus and now is home quarantine)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!