AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

Covid-19: ಕೊರೊನಾ ವೈರಸ್​ ಬಗ್ಗೆ ಜಾಗೃತಿ ಮೂಡಿಸಲು ಅಕ್ಷಯ್​ ಕುಮಾರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಪ್ರಯತ್ನಿಸಿದ್ದರು. ಈಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.

Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
| Edited By: |

Updated on: Apr 04, 2021 | 10:15 AM

Share

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ ಅವರಿಗೆ ಕೊರೊನಾ ವೈರಸ್​ ಪಾಸಿಟಿವ್​ ಆಗಿದೆ. ಈ ವಿಚಾರವನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಖಚಿತಪಡಿಸಿದ್ದಾರೆ. ಅಲ್ಲದೆ, ಎಲ್ಲರೂ ಸುರಕ್ಷಿತವಾಗಿರುವಂತೆ ಮನವಿ ಮಾಡಿಕೊಂಡಿದ್ದಾರೆ. ಸದಾ ಶೂಟಿಂಗ್​, ಡಬ್ಬಿಂಗ್​ ಎಂದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅಕ್ಷಯ್​ ಕುಮಾರ್​ ಅವರು ಇತ್ತೀಚೆಗೆ ‘ರಾಮ್​ ಸೇತು’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈಗ ಅವರು ಕ್ವಾರಂಟೈನ್​ ಆಗಿದ್ದಾರೆ. 

‘ಇಂದು ಬೆಳಿಗ್ಗೆ ನನಗೆ ಕೋವಿಡ್​-19 ಪಾಸಿಟಿವ್​ ಆಗಿದೆ. ಎಲ್ಲ ನಿಯಮಗಳನ್ನು ಪಾಲಿಸಿ ನಾನು ತಕ್ಷಣ ಐಸೊಲೇಟ್​ ಆಗಿದ್ದೇನೆ. ಸದ್ಯ ಹೋಮ್​ ಕ್ವಾರಂಟೈನ್​ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ನೀವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರಿಕೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಾನು ಗುಣಮುಖನಾಗಿ ಬರುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದಾರೆ.

ಕೋವಿಡ್​-19 ಹಾವಳಿಯಿಂದ ಇಡೀ ದೇಶವೇ ಲಾಕ್​ಡೌನ್​ ಆಗಿ ಕಷ್ಟ ಅನುಭವಿಸುತ್ತಿದ್ದ ದಿನಗಳಲ್ಲಿ ಅಕ್ಷಯ್​ ಕುಮಾರ್​ ಅವರು ಬರೋಬ್ಬರಿ 25 ಕೋಟಿ ರೂಪಾಯಿಗಳನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದರು. ಆಗ ಅವರಿಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಅಲ್ಲದೆ, ಕೊರೊನಾ ವೈರಸ್​ ಬಗ್ಗೆ ಜಾಗೃತಿ ಮೂಡಿಸಲು ಅವರು ಸೋಶಿಯಲ್​ ಮೀಡಿಯಾ ಮೂಲಕ ಪ್ರಯತ್ನಿಸಿದ್ದರು. ಈಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.

ಅಕ್ಷಯ್​ ಕುಮಾರ್​ ಬೇಗ ಗುಣಮುಖರಾಗಲಿ ಎಂದು ಕೋಟ್ಯಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಸಿನಿಮಾ ಕೆಲಸಗಳನ್ನು ತುಂಬ ವೇಗವಾಗಿ ಮುಗಿಸುವುದರಲ್ಲಿ ಅಕ್ಷಯ್​ ಕುಮಾರ್​ ಫೇಮಸ್​. ಲಾಕ್​ಡೌನ್​ ಸಡಿಲಿಕೆ ನಂತರ ಅವರು ‘ಬೆಲ್​ ಬಾಟಂ’ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದರು. ಇತ್ತೀಚೆಗಷ್ಟೇ ‘ರಾಮ್​ ಸೇತು’ ಸಿನಿಮಾದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದರು. ಆದರೆ ಈಗ ಕೋವಿಡ್​ ಪಾಸಿಟಿವ್​ ಆಗಿರುವುದರಿಂದ ಕ್ವಾರಂಟೈನ್​ ಆಗಿ ವಿಶ್ರಾಂತಿ ತೆಗೆದುಕೊಳ್ಳುವುದು ಅನಿವಾರ್ಯ ಆಗಿದೆ.

ಅನೇಕ ಸೆಲೆಬ್ರಿಟಿಗಳಿಗೆ ಇತ್ತೀಚೆಗೆ ಕೋವಿಡ್​-19 ಸೋಂಕು ತಗುಲಿದೆ. ಆಲಿಯಾ ಭಟ್​, ರಣಬೀರ್​ ಕಪೂರ್, ಪರೇಶ್​ ರಾವಲ್​, ಆಮೀರ್​ ಖಾನ್​, ಆರ್​. ಮಾಧವನ್​, ಮನೋಜ್​ ಭಾಜಪಾಯಿ ಸೇರಿದಂತೆ ಹಲವರಿಗೆ ಪಾಸಿಟಿವ್​ ಆಗಿತ್ತು.

ಇದನ್ನೂ ಓದಿ: Ram Setu: ರಾಮ ಸೇತುವೆ ವಿಚಾರದಲ್ಲಿ ಮುಂದುವರಿಯಲು ಅಭಿಮಾನಿಗಳ ಅಭಿಪ್ರಾಯ ಕೇಳುತ್ತಿರುವ ನಟ ಅಕ್ಷಯ್​ ಕುಮಾರ್​!

(Akshay Kumar tested positive for coronavirus and now is home quarantine)

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು