AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannappa: ಮೊದಲ ಬಾರಿ ತೆಲುಗು ಸಿನಿಮಾ ಒಪ್ಪಿಕೊಂಡ ಅಕ್ಷಯ್​ ಕುಮಾರ್​

ಹಲವು ಸ್ಟಾರ್​ ಕಲಾವಿದರು ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ವಿಷ್ಣು ಮಂಚು ಪ್ರಮುಖ ಪಾತ್ರ ಮಾಡುತ್ತಿದ್ದು, ಇನ್ನುಳಿದ ಪಾತ್ರಗಳಿಗಾಗಿ ಸ್ಟಾರ್​ ಕಲಾವಿದರನ್ನು ಆಯ್ಕೆ ಮಾಡಲಾಗುತ್ತಿದೆ. ಬಾಲಿವುಡ್​ ಸೂಪರ್ ಸ್ಟಾರ್ ಅಕ್ಷಯ್​ ಕುಮಾರ್​ ಕೂಡ ಈ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ರಮೇಶ್​ ಬಾಲಾ ಮಾಹಿತಿ ಹಂಚಿಕೊಂಡಿದ್ದಾರೆ.

Kannappa: ಮೊದಲ ಬಾರಿ ತೆಲುಗು ಸಿನಿಮಾ ಒಪ್ಪಿಕೊಂಡ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್
ಮದನ್​ ಕುಮಾರ್​
|

Updated on: Apr 08, 2024 | 3:21 PM

Share

ಮುಖೇಶ್​ ಕುಮಾರ್​ ಸಿಂಗ್​ ನಿರ್ದೇಶನ ಮಾಡುತ್ತಿರುವ ತೆಲುಗಿನ ‘ಕಣ್ಣಪ್ಪ’ (Kannappa Movie) ಸಿನಿಮಾದ ಪಾತ್ರವರ್ಗ ಹಿರಿದಾಗುತ್ತಿದೆ. ವಿಷ್ಣು ಮಂಚು ಅವರು ಈ ಚಿತ್ರದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಪುರಾಣದ ಕಥೆಯನ್ನು ಆಧರಿಸಿ ಸಿದ್ಧವಾಗುತ್ತಿರುವ ಈ ಸಿನಿಮಾ ತಂಡಕ್ಕೆ ಈಗ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಸೇರ್ಪಡೆ ಆಗಿದ್ದಾರೆ. ವಿಶೇಷ ಏನೆಂದರೆ ಇದು ಅಕ್ಷಯ್​ ಕುಮಾರ್ ಒಪ್ಪಿಕೊಂಡ ಮೊದಲ ತೆಲುಗು ಸಿನಿಮಾ (Telugu Movie). ಹಾಗಾಗಿ ಅವರ ಅಭಿಮಾನಿಗಳಲ್ಲಿ ‘ಕಣ್ಣಪ್ಪ’ ಬಗ್ಗೆ ನಿರೀಕ್ಷೆ ಮೂಡುವಂತಾಗಿದೆ. ಬಾಲಿವುಡ್​ನಲ್ಲಿ ಹೀರೋ ಆಗಿ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಅಕ್ಷಯ್​ ಕುಮಾರ್​ ಅವರು ತೆಲುಗಿನ ‘ಕಣ್ಣಪ್ಪ’ ಚಿತ್ರದಲ್ಲಿ ಯಾವ ಪಾತ್ರ ಮಾಡಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇಂಡಸ್ಟ್ರಿ ಟ್ರ್ಯಾಕರ್​ ರಮೇಶ್​ ಬಾಲಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ. ‘ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ವಿಷ್ಣು ಮಂಚು ಅವರ ಮಹತ್ವಾಕಾಂಕ್ಷಿ ಸಿನಿಮಾವಾದ ‘ಕಣ್ಣಪ್ಪ’ ಚಿತ್ರದ ಪಾತ್ರವರ್ಗಕ್ಕೆ ಬಾಲಿವುಡ್​ನ ಸೂಪರ್​ ಸ್ಟಾರ್​ ಅಕ್ಷಯ್​ ಕುಮಾರ್​ ಸೇರ್ಪಡೆ ಆಗಿದ್ದಾರೆ. ಪ್ರಭಾಸ್​, ಪ್ರಭುದೇವ, ಮೋಹನ್​ಲಾಲ್​, ಶರತ್​ಕುಮಾರ್​ ಮುಂತಾದವರ ಬಳಿಕ ಅಕ್ಷಯ್​ ಕುಮಾರ್​ ಅವರ ಗ್ರ್ಯಾಂಡ್​ ಎಂಟ್ರಿ ಆಗಿದೆ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

ಅನೇಕ ಸ್ಟಾರ್​ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಕೂಡ ಒಂದು ಪಾತ್ರ ಮಾಡುತ್ತಾರೆ ಎಂದು ಸುದ್ದಿ ಆಗಿದೆ. ಮೋಹನ್ ಬಾಬು, ಮಧೂ, ಬ್ರಹ್ಮಾನಂದಂ, ಮುಖೇಶ್​ ರಿಷಿ, ಕುಶಾಲ್​ ಮುಂತಾದವರು ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಪಾತ್ರವರ್ಗದ ಕಾರಣದಿಂದ ‘ಕಣ್ಣಪ್ಪ’ ಸಿನಿಮಾ ಹೊಸ ಕ್ರೇಜ್​ ಸೃಷ್ಟಿ ಮಾಡಿದೆ.

ಇದನ್ನೂ ಓದಿ: ‘ಬದುಕುವ ಸಾಧ್ಯತೆ ಶೇ.30 ಮಾತ್ರ’: ಇದು ಅಕ್ಷಯ್​ ಕುಮಾರ್​ ಜೀವನದ ಅಪಾಯಕಾರಿ ಸ್ಟಂಟ್

ಬಾಲಿವುಡ್​ನಲ್ಲಿ ಅಕ್ಷಯ್​ ಕುಮಾರ್​ ಅವರು ಬ್ಯುಸಿ ಆಗಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರಿಗೆ ನಿರೀಕ್ಷಿತ ಮಟ್ಟದ ಗೆಲುವು ಸಿಕ್ಕಿಲ್ಲ. ಹಲವು ಸಿನಿಮಾಗಳು ಸೋಲು ಕಂಡಿವೆ. ಆದ್ದರಿಂದ ಅವರು ದಕ್ಷಿಣ ಭಾರತದ ಸಿನಿಮಾ ಒಪ್ಪಿಕೊಂಡಿರಬಹುದು ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಅಕ್ಷಯ್​ ಕುಮಾರ್​ ಅಭಿನಯಿಸಿರುವ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಏಪ್ರಿಲ್​ 10ರಂದು ಈದ್​ ಹಬ್ಬದ ಪ್ರಯುಕ್ತ ಬಿಡುಗಡೆ ಆಗಲಿದೆ. ಆ ಸಿನಿಮಾದಲ್ಲಿ ಅವರು ಟೈಗರ್​ ಶ್ರಾಫ್​ ಜೊತೆ ತೆರೆ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ