AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾಕಾಳಿ’ ಚಿತ್ರದಲ್ಲಿ ಶುಕ್ರಾಚಾರ್ಯನಾಗಿ ಅಕ್ಷಯ್ ಖನ್ನಾ ಅಬ್ಬರ: ಹೊಸ ಲುಕ್ ವೈರಲ್

ಖ್ಯಾತ ನಟ ಅಕ್ಷಯ್ ಖನ್ನಾ ಅವರಿಗೆ ಬಾಲಿವುಡ್ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಬೇಡಿಕೆ ಇದೆ. ‘ಮಹಾಕಾಳಿ’ ಸಿನಿಮಾದಲ್ಲಿ ಅವರು ಶುಕ್ರಾಚಾರ್ಯನಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ಪಾತ್ರದ ಝಲಕ್ ತೋರಿಸಲು ಹೊಸ ಫೋಟೋ ಹಂಚಿಕೊಳ್ಳಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಲುಕ್ ನೋಡಿ ಫ್ಯಾನ್ಸ್ ವಾವ್ ಎನ್ನುತ್ತಿದ್ದಾರೆ.

‘ಮಹಾಕಾಳಿ’ ಚಿತ್ರದಲ್ಲಿ ಶುಕ್ರಾಚಾರ್ಯನಾಗಿ ಅಕ್ಷಯ್ ಖನ್ನಾ ಅಬ್ಬರ: ಹೊಸ ಲುಕ್ ವೈರಲ್
Akshaye Khanna
ಮದನ್​ ಕುಮಾರ್​
|

Updated on: Aug 19, 2026 | 7:26 PM

Share

ಬಾಲಿವುಡ್‌ನ ಪ್ರತಿಭಾವಂತ ನಟ ಅಕ್ಷಯ್ ಖನ್ನಾ (Akshaye Khanna) ಅವರು ತಮ್ಮ ವೈವಿಧ್ಯಮಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ‘ದೃಶ್ಯಂ 2’, ‘ಚಾವಾ’ ಹಾಗೂ ‘ಧುರಂಧರ್’ ಸಿನಿಮಾಗಳ ಯಶಸ್ಸಿನ ನಂತರ ಇದೀಗ ಅವರು ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಪ್ರಶಾಂತ್ ವರ್ಮಾ ನಿರ್ದೇಶನದ ಬಹುನಿರೀಕ್ಷಿತ ‘ಮಹಾಕಾಳಿ’ (Mahakali) ಚಿತ್ರದ ಮೂಲಕ ಅಕ್ಷಯ್ ಟಾಲಿವುಡ್‌ಗೆ ಎಂಟ್ರಿ ಕೊಡುತ್ತಿದ್ದು, ಚಿತ್ರದಲ್ಲಿ ಅವರ ಶುಕ್ರಾಚಾರ್ಯನ ಪಾತ್ರದ ಫಸ್ಟ್ ಲುಕ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಚಿತ್ರತಂಡ ‘24th August – The End Begins’ ಎಂದು ಬರೆದುಕೊಂಡು ಅಕ್ಷಯ್ ಖನ್ನಾ ಅವರ ಖಡಕ್ ಲುಕ್ ಹಂಚಿಕೊಂಡಿದ್ದು, ಆಗಸ್ಟ್ 24ರಂದು ಸಿನಿಮಾದ ವಿಶೇಷ ಗ್ಲಿಂಪ್ಸ್ ಬಿಡುಗಡೆಯಾಗಲಿದೆ ಎಂದು ಘೋಷಿಸಿದೆ. ಈ ಪೋಸ್ಟ್ ಜೊತೆ ಹಂಚಿಕೊಂಡಿರುವ ಪೋಸ್ಟರ್​ನಲ್ಲಿ ಅಕ್ಷಯ್ ಖನ್ನಾ ಅವರ ಲುಕ್ ಗಮನ ಸೆಳೆಯುತ್ತಿದೆ. ಸಿನಿಮಾ ಬಗ್ಗೆ ಕೌತುಕ ಹೆಚ್ಚುವಂತಾಗಿದೆ.

ಗುರುತಿಸಲಾಗದ ಲುಕ್​ನಲ್ಲಿ ಅಕ್ಷಯ್ ಖನ್ನಾ

ಹಿಂದೂ ಪುರಾಣಗಳಲ್ಲಿ ಅಸುರರ ಗುರುವಾದ ಶುಕ್ರಾಚಾರ್ಯನ ಗಂಭೀರ ಹಾಗೂ ಶಕ್ತಿಶಾಲಿ ಪಾತ್ರವನ್ನು ಅಕ್ಷಯ್ ಖನ್ನಾ ಪೋಷಿಸುತ್ತಿದ್ದಾರೆ. ಹಂಚಿಕೊಳ್ಳಲಾದ ಫೋಟೋದಲ್ಲಿ ಉದ್ದನೆಯ ಗಡ್ಡ, ಸಿಕ್ಕು ಗಂಟಿಕ್ಕಿದ ಕೂಡಲು, ಹಣೆಯ ಮೇಲೆ ಪ್ರಖರವಾದ ತಿಲಕ ಹಾಗೂ ಸಾಂಪ್ರದಾಯಿಕ ಆಭರಣಗಳೊಂದಿಗೆ ಅಕ್ಷಯ್ ಖನ್ನಾ ಅವರು ಗುರುತಿಸಲಾಗದಷ್ಟು ಬದಲಾಗಿದ್ದಾರೆ. ಅವರ ಈ ಭೀಕರ ಹಾಗೂ ತೇಜಸ್ವಿ ಲುಕ್ ಅಭಿಮಾನಿಗಳಲ್ಲಿ ಸಿನಿಮಾ ಮೇಲಿನ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ.

ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್

‘ಹನು-ಮಾನ್’ ಸಿನಿಮಾದ ಅಭೂತಪೂರ್ವ ಯಶಸ್ಸಿನ ನಂತರ ನಿರ್ದೇಶಕ ಪ್ರಶಾಂತ್ ವರ್ಮಾ ಭಾರತೀಯ ಪೌರಾಣಿಕ ಕಥೆಗಳನ್ನು ಆಧುನಿಕ ತಂತ್ರಜ್ಞಾನ ಹಾಗೂ ವಿಎಫ್‌ಎಕ್ಸ್‌ ಜೊತೆ ಸಂಯೋಜಿಸಿ ‘ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್’ ಬೆಳೆಸುತ್ತಿದ್ದಾರೆ. ಈ ಸರಣಿಯಲ್ಲಿ ‘ಮಹಾಕಾಳಿ’ ಪ್ರಮುಖ ಚಿತ್ರವಾಗಿದ್ದು, ಆರ್.ಕೆ.ಡಿ. ಸ್ಟುಡಿಯೋಸ್ ನಿರ್ಮಾಣ ಮಾಡುತ್ತಿದೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ ಅಕ್ಷಯ್ ಖನ್ನಾ ಸಿನಿಮಾಗಳ ಕಲೆಕ್ಷನ್ 2 ಸಾವಿರ ಕೋಟಿ ರೂಪಾಯಿ!

ಈ ವರ್ಷ ಅಕ್ಷಯ್ ಖನ್ನಾ ಅವರ ಜನ್ಮದಿನದಂದು ಪ್ರಶಾಂತ್ ವರ್ಮಾ ಶುಭಕೋರುತ್ತಾ, ‘ಅಕ್ಷಯ್ ಖನ್ನಾ ಅವರ ನಟನೆಗೆ ಯಾವುದೇ ಗದ್ದಲದ ಹಂಗಿಲ್ಲ. ಅವರ ಪ್ರಭಾವಶಾಲಿ ನಟನೆ ಮತ್ತು ಸ್ಕ್ರೀನ್ ಪ್ರೆಸೆನ್ಸ್ ಅದ್ಭುತ. ಅವರೊಂದಿಗೆ ಕೆಲಸ ಮಾಡುತ್ತಿರುವುದು ನನಗೆ ಸಂದ ಗೌರವ’ ಎಂದು ಹೊಗಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?