AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ನಿರ್ಮಾಪಕರನ್ನು ಸಂಪೂರ್ಣವಾಗಿ ನಿಯಂತ್ರಿಸಿದ ಅಲ್ಲು ಅರ್ಜುನ್; ‘ಶಹಜಾದಾ’ ಚಿತ್ರಕ್ಕೆ ಲಾಭ

ಈ ಚಿತ್ರದ ರಿಲೀಸ್​ ಸಂದರ್ಭದಲ್ಲಿ ‘ಅಲ ವೈಕುಂಠಪುರಮುಲೋ’ ಹಿಂದಿ ವರ್ಷನ್ ಯೂಟ್ಯೂಬ್​ನಲ್ಲಿ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಲಾಗಿತ್ತು. ಇದು ಕಾರ್ತಿಕ್ ಆರ್ಯನ್ ಚಿತ್ರಕ್ಕೆ ಹಿನ್ನಡೆ ತಂದಿತ್ತು.

ಬಾಲಿವುಡ್​ ನಿರ್ಮಾಪಕರನ್ನು ಸಂಪೂರ್ಣವಾಗಿ ನಿಯಂತ್ರಿಸಿದ ಅಲ್ಲು ಅರ್ಜುನ್; ‘ಶಹಜಾದಾ’ ಚಿತ್ರಕ್ಕೆ ಲಾಭ
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Feb 06, 2023 | 7:26 AM

Share

ಬಾಲಿವುಡ್​ನ ಗೋಲ್ಡ್​ಮೈನ್ ನಿರ್ಮಾಣ ಸಂಸ್ಥೆ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರವನ್ನು (Pushpa Movie) ಹಿಂದಿಯಲ್ಲಿ ರಿಲೀಸ್ ಮಾಡಿ ಒಳ್ಳೆಯ ಲಾಭ ಕಂಡಿತ್ತು. ಈ ಸಿನಿಮಾ ಬಾಲಿವುಡ್​ನಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಹಣ ಬಾಚಿತ್ತು. ಈಗ ‘ಅಲ ವೈಕುಂಠಪುರಮುಲೋ’ (Ala Vaikunthapurramuloo) ಸಿನಿಮಾನ ಥಿಯೇಟರ್​ನಲ್ಲಿ ರಿಲೀಸ್ ಮಾಡಲು ಗೋಲ್ಡ್​ಮೈನ್ ಪ್ಲ್ಯಾನ್ ಮಾಡಿದ್ದರು. ಬಳಿಕ ಅದು ಕ್ಯಾನ್ಸಲ್ ಆಗಿತ್ತು. ಈ ಚಿತ್ರವನ್ನು ಯೂಟ್ಯೂಬ್​ನಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇತ್ತು. ಆದರೆ, ಈಗ ಅದು ಕೂಡ ರದ್ದಾಗಿದೆ. ಇದಕ್ಕೆ ಅಲ್ಲು ಅರ್ಜುನ್ ಕಾರಣ ಎನ್ನಲಾಗಿದೆ.

‘ಅಲ ವೈಕುಂಠಪುರಮುಲೋ’ ಸಿನಿಮಾ ನೋಡಿ ಮೆಚ್ಚಿಕೊಂಡಿರುವ ಹಿಂದಿ ಮಂದಿ ಅದನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ರಿಮೇಕ್ ಮಾಡಿದ್ದಾರೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ. ತೆಲುಗಿನಲ್ಲಿ ತ್ರಿವಿಕ್ರಂ ಶ್ರೀನಿವಾಸ್ ಆ್ಯಕ್ಷನ್ ಕಟ್ ಹೇಳಿದ್ದ ಈ ಚಿತ್ರಕ್ಕೆ ಹಿಂದಿಯಲ್ಲಿ ರೋಹಿತ್ ಧವನ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ರಿಲೀಸ್​ ಸಂದರ್ಭದಲ್ಲಿ ‘ಅಲ ವೈಕುಂಠಪುರಮುಲೋ’ ಹಿಂದಿ ವರ್ಷನ್ ಯೂಟ್ಯೂಬ್​ನಲ್ಲಿ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಲಾಗಿತ್ತು. ಇದು ಕಾರ್ತಿಕ್ ಆರ್ಯನ್ ಚಿತ್ರಕ್ಕೆ ಹಿನ್ನಡೆ ತಂದಿತ್ತು.

ಆದರೆ, ಇದನ್ನು ಅಲ್ಲು ಅರ್ಜುನ್ ಅವರು ತಡೆದಿದ್ದಾರೆ. ‘ಅಲ ವೈಕುಂಠಪುರಮುಲೋ’ ರಿಲೀಸ್ ಮಾಡಲು ಮುಂದಾದ ಗೋಲ್ಡ್​ಮೈನ್ ಕಂಪನಿಯವರ ಜತೆ ಅಲ್ಲು ಅರ್ಜುನ್ ಮಾತನಾಡಿದ್ದಾರೆ. ‘ಶೆಹಜಾದ’ ತಂಡದವರು ಈ ಬಗ್ಗೆ ಅಲ್ಲು ಅರ್ಜುನ್ ಬಳಿ ಮನವಿ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ಅವರೇ ಮಾತುಕತೆಗೆ ಇಳಿದಿದ್ದಾರೆ. ಈ ಮಾತುಕತೆ ಯಶಸ್ವಿ ಆಗಿದೆ.

ಇದನ್ನೂ ಓದಿ
Image
150 ಕೋಟಿ ರೂ. ಬಾಚಿದ ‘ಭೂಲ್​ ಭುಲಯ್ಯ 2’; ಬಾಲಿವುಡ್​ ಗುಂಪುಗಾರಿಕೆಗೆ ತಕ್ಕ ಉತ್ತರ ನೀಡಿದ ನಟ
Image
ಮೂರೇ ದಿನಕ್ಕೆ ಅರ್ಧಶತಕ ಬಾರಿಸಿದ ಕಾರ್ತಿಕ್ ಆರ್ಯನ್ ಸಿನಿಮಾ; ಬಾಲಿವುಡ್​ಗೆ ಸಿಕ್ತು ಹೊಸ ಬೂಸ್ಟ್​
Image
ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ
Image
ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

ಇದನ್ನೂ ಓದಿ:  ಮುಂದಿನ ಸಂಕ್ರಾಂತಿಗೆ ಬಾಕ್ಸ್ ಆಫೀಸ್​ನಲ್ಲಿ ಅಲ್ಲು ಅರ್ಜುನ್​-ರಾಮ್ ಚರಣ್ ಮಧ್ಯೆ ಫೈಟ್​?

‘ಪುಷ್ಪ’ ಚಿತ್ರದಿಂದ ಅಲ್ಲು ಅರ್ಜುನ್ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ‘ಪುಷ್ಪ 2’ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಒಳ್ಳೆಯ ಕಮಾಯಿ ಮಾಡಿದೆ. ಇದರ ಜತೆ ‘ಶಹಜಾದ’ ಬರುತ್ತಿದೆ. ಈ ಸಂದರ್ಭದಲ್ಲಿ ‘ಅಲ ವೈಕುಂಠಪುರಮುಲೋ’ ಸಿನಿಮಾದ ಹಿಂದಿ ವರ್ಷನ್ ರಿಲೀಸ್ ಮಾಡಿದರೆ ಹೆಚ್ಚು ವೀಕ್ಷಣೆ ಪಡೆಯಬಹುದು ಅನ್ನೋದು ಗೋಲ್ಡ್​ಮೈನ್ ಅವರ ಆಲೋಚನೆ ಆಗಿತ್ತು. ಆದರೆ, ಈಗ ಅದು ವಿಫಲ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!