AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ರಿಮೇಕ್​ ಆದ ಕನ್ನಡದ ಹಿಟ್​ ಚಿತ್ರ; ಅಲಾಯಾಗೆ ಸಿಕ್ತು ಚಾನ್ಸ್​

ನಿರ್ಮಾಪಕಿ ಏಕ್ತಾ ಕಪೂರ್​ ಯು-ಟರ್ನ್​ ಚಿತ್ರವನ್ನು ಹಿಂದಿಗೆ ರಿಮೇಕ್​ ಮಾಡುತ್ತಿರುವುದಾಗಿ ಸೋಮವಾರ ಘೋಷಣೆ ಮಾಡಿದ್ದಾರೆ. ಆರಿಫ್​ ಖಾನ್​ ಹೆಸರಿನ ಯುವ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಬಾಲಿವುಡ್​ಗೆ ರಿಮೇಕ್​ ಆದ ಕನ್ನಡದ ಹಿಟ್​ ಚಿತ್ರ; ಅಲಾಯಾಗೆ ಸಿಕ್ತು ಚಾನ್ಸ್​
ಅಲಾಯಾ
TV9 Web
| Edited By: |

Updated on: Jul 05, 2021 | 4:18 PM

Share

‘ಜವಾನಿ ಜಾನೇಮನ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಟ್ಟ ನಟಿ ಅಲಾಯಾ ಎಫ್​ ಈಗ ಮತ್ತೊಂದು ಸಿನಿಮಾ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಕನ್ನಡದ ಯು-ಟರ್ನ್​ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ಕನ್ನಡದಲ್ಲಿ ಶ್ರದ್ಧಾ ಶ್ರೀನಾಥ್​ ಮಾಡಿದ್ದ ಪಾತ್ರದಲ್ಲಿ ಅಲಾಯಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರದಲ್ಲಿ ಕಾಣಿಸಿಕೊಳ್ಳೋಕೆ ಅವರು ಸಾಕಷ್ಟು ಎಗ್ಸೈಟ್​ ಆಗಿದ್ದಾರೆ.

ನಿರ್ಮಾಪಕಿ ಏಕ್ತಾ ಕಪೂರ್​ ಯು-ಟರ್ನ್​ ಚಿತ್ರವನ್ನು ಹಿಂದಿಗೆ ರಿಮೇಕ್​ ಮಾಡುತ್ತಿರುವುದಾಗಿ ಸೋಮವಾರ ಘೋಷಣೆ ಮಾಡಿದ್ದಾರೆ. ಆರಿಫ್​ ಖಾನ್​ ಹೆಸರಿನ ಯುವ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಅಲಾಯಾ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರ ಶೀಘ್ರವೇ ಸೆಟ್ಟೇರಲಿದೆ.

ಪವನ್​ ಕುಮಾರ್​ ನಿರ್ದೇಶನದ ಈ ಸಿನಿಮಾ 2016ರಲ್ಲಿ ಕನ್ನಡದಲ್ಲಿ ತೆರೆಗೆ ಬಂದು ಹಿಟ್​ ಆಗಿತ್ತು. 2017ರಲ್ಲಿ ಮಲಯಾಳಂನಲ್ಲಿ ಈ ಸಿನಿಮಾ ರಿಮೇಕ್​ ಆಗಿತ್ತು. 2018ರಲ್ಲಿ ತೆಲುಗು-ತಮಿಳು ಸೇರಿ ಒಟ್ಟು 8 ಭಾಷೆಗಳಲ್ಲಿ ಚಿತ್ರ ತೆರೆಗೆ ಬಂದಿದೆ.

ಪವನ್​ ಕುಮಾರ್​ ನಿರ್ದೇಶನದಲ್ಲಿ ಮೂಡಿ ಬಂದ ಯು-ಟರ್ನ್​, ರಸ್ತೆ ಸುರಕ್ಷತೆಯ ವಿಚಾರವನ್ನು ಇಟ್ಟುಕೊಂಡು ಹೆಣೆದ ಸಿನಿಮಾ. ರಸ್ತೆಯಲ್ಲಿ ಸಂಚರಿಸುವಾಗ ಎಲ್ಲೆಂದರಲ್ಲಿ ಯು ಟರ್ನ್​ ತೆಗೆದುಕೊಳ್ಳುವವರಿಗೆ ಈ ಸಿನಿಮಾ ಎಚ್ಚರಿಕೆ ಸಂದೇಶ ನೀಡಿತ್ತು. ಪವನ್​ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್, ರೋಜರ್​ ನಾರಾಯಣ್​, ರಾಧಿಕಾ ಚೇತನ್​, ದಿಲೀಪ್​ ರಾಜ್​ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ರಿಮೇಕ್​ ವಿಚಾರದಲ್ಲಿ ದಾಖಲೆ ಬರೆದ ಪವನ್​ ಕುಮಾರ್​ ಯು-ಟರ್ನ್​ ಸಿನಿಮಾ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್