AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ರಿಮೇಕ್​ ಆದ ಕನ್ನಡದ ಹಿಟ್​ ಚಿತ್ರ; ಅಲಾಯಾಗೆ ಸಿಕ್ತು ಚಾನ್ಸ್​

ನಿರ್ಮಾಪಕಿ ಏಕ್ತಾ ಕಪೂರ್​ ಯು-ಟರ್ನ್​ ಚಿತ್ರವನ್ನು ಹಿಂದಿಗೆ ರಿಮೇಕ್​ ಮಾಡುತ್ತಿರುವುದಾಗಿ ಸೋಮವಾರ ಘೋಷಣೆ ಮಾಡಿದ್ದಾರೆ. ಆರಿಫ್​ ಖಾನ್​ ಹೆಸರಿನ ಯುವ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಬಾಲಿವುಡ್​ಗೆ ರಿಮೇಕ್​ ಆದ ಕನ್ನಡದ ಹಿಟ್​ ಚಿತ್ರ; ಅಲಾಯಾಗೆ ಸಿಕ್ತು ಚಾನ್ಸ್​
ಅಲಾಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 05, 2021 | 4:18 PM

Share

‘ಜವಾನಿ ಜಾನೇಮನ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಟ್ಟ ನಟಿ ಅಲಾಯಾ ಎಫ್​ ಈಗ ಮತ್ತೊಂದು ಸಿನಿಮಾ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಕನ್ನಡದ ಯು-ಟರ್ನ್​ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ಕನ್ನಡದಲ್ಲಿ ಶ್ರದ್ಧಾ ಶ್ರೀನಾಥ್​ ಮಾಡಿದ್ದ ಪಾತ್ರದಲ್ಲಿ ಅಲಾಯಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರದಲ್ಲಿ ಕಾಣಿಸಿಕೊಳ್ಳೋಕೆ ಅವರು ಸಾಕಷ್ಟು ಎಗ್ಸೈಟ್​ ಆಗಿದ್ದಾರೆ.

ನಿರ್ಮಾಪಕಿ ಏಕ್ತಾ ಕಪೂರ್​ ಯು-ಟರ್ನ್​ ಚಿತ್ರವನ್ನು ಹಿಂದಿಗೆ ರಿಮೇಕ್​ ಮಾಡುತ್ತಿರುವುದಾಗಿ ಸೋಮವಾರ ಘೋಷಣೆ ಮಾಡಿದ್ದಾರೆ. ಆರಿಫ್​ ಖಾನ್​ ಹೆಸರಿನ ಯುವ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಅಲಾಯಾ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರ ಶೀಘ್ರವೇ ಸೆಟ್ಟೇರಲಿದೆ.

ಪವನ್​ ಕುಮಾರ್​ ನಿರ್ದೇಶನದ ಈ ಸಿನಿಮಾ 2016ರಲ್ಲಿ ಕನ್ನಡದಲ್ಲಿ ತೆರೆಗೆ ಬಂದು ಹಿಟ್​ ಆಗಿತ್ತು. 2017ರಲ್ಲಿ ಮಲಯಾಳಂನಲ್ಲಿ ಈ ಸಿನಿಮಾ ರಿಮೇಕ್​ ಆಗಿತ್ತು. 2018ರಲ್ಲಿ ತೆಲುಗು-ತಮಿಳು ಸೇರಿ ಒಟ್ಟು 8 ಭಾಷೆಗಳಲ್ಲಿ ಚಿತ್ರ ತೆರೆಗೆ ಬಂದಿದೆ.

ಪವನ್​ ಕುಮಾರ್​ ನಿರ್ದೇಶನದಲ್ಲಿ ಮೂಡಿ ಬಂದ ಯು-ಟರ್ನ್​, ರಸ್ತೆ ಸುರಕ್ಷತೆಯ ವಿಚಾರವನ್ನು ಇಟ್ಟುಕೊಂಡು ಹೆಣೆದ ಸಿನಿಮಾ. ರಸ್ತೆಯಲ್ಲಿ ಸಂಚರಿಸುವಾಗ ಎಲ್ಲೆಂದರಲ್ಲಿ ಯು ಟರ್ನ್​ ತೆಗೆದುಕೊಳ್ಳುವವರಿಗೆ ಈ ಸಿನಿಮಾ ಎಚ್ಚರಿಕೆ ಸಂದೇಶ ನೀಡಿತ್ತು. ಪವನ್​ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್, ರೋಜರ್​ ನಾರಾಯಣ್​, ರಾಧಿಕಾ ಚೇತನ್​, ದಿಲೀಪ್​ ರಾಜ್​ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ರಿಮೇಕ್​ ವಿಚಾರದಲ್ಲಿ ದಾಖಲೆ ಬರೆದ ಪವನ್​ ಕುಮಾರ್​ ಯು-ಟರ್ನ್​ ಸಿನಿಮಾ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು