AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ರಿಮೇಕ್​ ಆದ ಕನ್ನಡದ ಹಿಟ್​ ಚಿತ್ರ; ಅಲಾಯಾಗೆ ಸಿಕ್ತು ಚಾನ್ಸ್​

ನಿರ್ಮಾಪಕಿ ಏಕ್ತಾ ಕಪೂರ್​ ಯು-ಟರ್ನ್​ ಚಿತ್ರವನ್ನು ಹಿಂದಿಗೆ ರಿಮೇಕ್​ ಮಾಡುತ್ತಿರುವುದಾಗಿ ಸೋಮವಾರ ಘೋಷಣೆ ಮಾಡಿದ್ದಾರೆ. ಆರಿಫ್​ ಖಾನ್​ ಹೆಸರಿನ ಯುವ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಬಾಲಿವುಡ್​ಗೆ ರಿಮೇಕ್​ ಆದ ಕನ್ನಡದ ಹಿಟ್​ ಚಿತ್ರ; ಅಲಾಯಾಗೆ ಸಿಕ್ತು ಚಾನ್ಸ್​
ಅಲಾಯಾ
TV9 Web
| Edited By: |

Updated on: Jul 05, 2021 | 4:18 PM

Share

‘ಜವಾನಿ ಜಾನೇಮನ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಟ್ಟ ನಟಿ ಅಲಾಯಾ ಎಫ್​ ಈಗ ಮತ್ತೊಂದು ಸಿನಿಮಾ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಕನ್ನಡದ ಯು-ಟರ್ನ್​ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ಕನ್ನಡದಲ್ಲಿ ಶ್ರದ್ಧಾ ಶ್ರೀನಾಥ್​ ಮಾಡಿದ್ದ ಪಾತ್ರದಲ್ಲಿ ಅಲಾಯಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರದಲ್ಲಿ ಕಾಣಿಸಿಕೊಳ್ಳೋಕೆ ಅವರು ಸಾಕಷ್ಟು ಎಗ್ಸೈಟ್​ ಆಗಿದ್ದಾರೆ.

ನಿರ್ಮಾಪಕಿ ಏಕ್ತಾ ಕಪೂರ್​ ಯು-ಟರ್ನ್​ ಚಿತ್ರವನ್ನು ಹಿಂದಿಗೆ ರಿಮೇಕ್​ ಮಾಡುತ್ತಿರುವುದಾಗಿ ಸೋಮವಾರ ಘೋಷಣೆ ಮಾಡಿದ್ದಾರೆ. ಆರಿಫ್​ ಖಾನ್​ ಹೆಸರಿನ ಯುವ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಅಲಾಯಾ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರ ಶೀಘ್ರವೇ ಸೆಟ್ಟೇರಲಿದೆ.

ಪವನ್​ ಕುಮಾರ್​ ನಿರ್ದೇಶನದ ಈ ಸಿನಿಮಾ 2016ರಲ್ಲಿ ಕನ್ನಡದಲ್ಲಿ ತೆರೆಗೆ ಬಂದು ಹಿಟ್​ ಆಗಿತ್ತು. 2017ರಲ್ಲಿ ಮಲಯಾಳಂನಲ್ಲಿ ಈ ಸಿನಿಮಾ ರಿಮೇಕ್​ ಆಗಿತ್ತು. 2018ರಲ್ಲಿ ತೆಲುಗು-ತಮಿಳು ಸೇರಿ ಒಟ್ಟು 8 ಭಾಷೆಗಳಲ್ಲಿ ಚಿತ್ರ ತೆರೆಗೆ ಬಂದಿದೆ.

ಪವನ್​ ಕುಮಾರ್​ ನಿರ್ದೇಶನದಲ್ಲಿ ಮೂಡಿ ಬಂದ ಯು-ಟರ್ನ್​, ರಸ್ತೆ ಸುರಕ್ಷತೆಯ ವಿಚಾರವನ್ನು ಇಟ್ಟುಕೊಂಡು ಹೆಣೆದ ಸಿನಿಮಾ. ರಸ್ತೆಯಲ್ಲಿ ಸಂಚರಿಸುವಾಗ ಎಲ್ಲೆಂದರಲ್ಲಿ ಯು ಟರ್ನ್​ ತೆಗೆದುಕೊಳ್ಳುವವರಿಗೆ ಈ ಸಿನಿಮಾ ಎಚ್ಚರಿಕೆ ಸಂದೇಶ ನೀಡಿತ್ತು. ಪವನ್​ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್, ರೋಜರ್​ ನಾರಾಯಣ್​, ರಾಧಿಕಾ ಚೇತನ್​, ದಿಲೀಪ್​ ರಾಜ್​ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ರಿಮೇಕ್​ ವಿಚಾರದಲ್ಲಿ ದಾಖಲೆ ಬರೆದ ಪವನ್​ ಕುಮಾರ್​ ಯು-ಟರ್ನ್​ ಸಿನಿಮಾ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!