AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ರಿಮೇಕ್​ ಆದ ಕನ್ನಡದ ಹಿಟ್​ ಚಿತ್ರ; ಅಲಾಯಾಗೆ ಸಿಕ್ತು ಚಾನ್ಸ್​

ನಿರ್ಮಾಪಕಿ ಏಕ್ತಾ ಕಪೂರ್​ ಯು-ಟರ್ನ್​ ಚಿತ್ರವನ್ನು ಹಿಂದಿಗೆ ರಿಮೇಕ್​ ಮಾಡುತ್ತಿರುವುದಾಗಿ ಸೋಮವಾರ ಘೋಷಣೆ ಮಾಡಿದ್ದಾರೆ. ಆರಿಫ್​ ಖಾನ್​ ಹೆಸರಿನ ಯುವ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಬಾಲಿವುಡ್​ಗೆ ರಿಮೇಕ್​ ಆದ ಕನ್ನಡದ ಹಿಟ್​ ಚಿತ್ರ; ಅಲಾಯಾಗೆ ಸಿಕ್ತು ಚಾನ್ಸ್​
ಅಲಾಯಾ
TV9 Web
| Edited By: |

Updated on: Jul 05, 2021 | 4:18 PM

Share

‘ಜವಾನಿ ಜಾನೇಮನ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಟ್ಟ ನಟಿ ಅಲಾಯಾ ಎಫ್​ ಈಗ ಮತ್ತೊಂದು ಸಿನಿಮಾ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಕನ್ನಡದ ಯು-ಟರ್ನ್​ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ಕನ್ನಡದಲ್ಲಿ ಶ್ರದ್ಧಾ ಶ್ರೀನಾಥ್​ ಮಾಡಿದ್ದ ಪಾತ್ರದಲ್ಲಿ ಅಲಾಯಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರದಲ್ಲಿ ಕಾಣಿಸಿಕೊಳ್ಳೋಕೆ ಅವರು ಸಾಕಷ್ಟು ಎಗ್ಸೈಟ್​ ಆಗಿದ್ದಾರೆ.

ನಿರ್ಮಾಪಕಿ ಏಕ್ತಾ ಕಪೂರ್​ ಯು-ಟರ್ನ್​ ಚಿತ್ರವನ್ನು ಹಿಂದಿಗೆ ರಿಮೇಕ್​ ಮಾಡುತ್ತಿರುವುದಾಗಿ ಸೋಮವಾರ ಘೋಷಣೆ ಮಾಡಿದ್ದಾರೆ. ಆರಿಫ್​ ಖಾನ್​ ಹೆಸರಿನ ಯುವ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಅಲಾಯಾ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರ ಶೀಘ್ರವೇ ಸೆಟ್ಟೇರಲಿದೆ.

ಪವನ್​ ಕುಮಾರ್​ ನಿರ್ದೇಶನದ ಈ ಸಿನಿಮಾ 2016ರಲ್ಲಿ ಕನ್ನಡದಲ್ಲಿ ತೆರೆಗೆ ಬಂದು ಹಿಟ್​ ಆಗಿತ್ತು. 2017ರಲ್ಲಿ ಮಲಯಾಳಂನಲ್ಲಿ ಈ ಸಿನಿಮಾ ರಿಮೇಕ್​ ಆಗಿತ್ತು. 2018ರಲ್ಲಿ ತೆಲುಗು-ತಮಿಳು ಸೇರಿ ಒಟ್ಟು 8 ಭಾಷೆಗಳಲ್ಲಿ ಚಿತ್ರ ತೆರೆಗೆ ಬಂದಿದೆ.

ಪವನ್​ ಕುಮಾರ್​ ನಿರ್ದೇಶನದಲ್ಲಿ ಮೂಡಿ ಬಂದ ಯು-ಟರ್ನ್​, ರಸ್ತೆ ಸುರಕ್ಷತೆಯ ವಿಚಾರವನ್ನು ಇಟ್ಟುಕೊಂಡು ಹೆಣೆದ ಸಿನಿಮಾ. ರಸ್ತೆಯಲ್ಲಿ ಸಂಚರಿಸುವಾಗ ಎಲ್ಲೆಂದರಲ್ಲಿ ಯು ಟರ್ನ್​ ತೆಗೆದುಕೊಳ್ಳುವವರಿಗೆ ಈ ಸಿನಿಮಾ ಎಚ್ಚರಿಕೆ ಸಂದೇಶ ನೀಡಿತ್ತು. ಪವನ್​ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್, ರೋಜರ್​ ನಾರಾಯಣ್​, ರಾಧಿಕಾ ಚೇತನ್​, ದಿಲೀಪ್​ ರಾಜ್​ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ರಿಮೇಕ್​ ವಿಚಾರದಲ್ಲಿ ದಾಖಲೆ ಬರೆದ ಪವನ್​ ಕುಮಾರ್​ ಯು-ಟರ್ನ್​ ಸಿನಿಮಾ

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?