AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್-ಅಮಿತಾಭ್ ಅಲ್ಲ; ಬಾಲಿವುಡ್​ನ ಈ ದಂಪತಿಗಳು ಅತ್ಯಂತ ದುಬಾರಿ ಮನೆಯ ಒಡೆಯರು

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರು ಮುಂಬೈನಲ್ಲಿ 250 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಬಂಗಲೆಯನ್ನು ಖರೀದಿಸಿದ್ದಾರೆ. ಈ ಬಂಗಲೆಯನ್ನು ಅವರ ಮಗಳು ರಾಹಾ ಕಪೂರ್ ಹೆಸರಿನಲ್ಲಿ ನೋಂದಾಯಿಸಲಾಗುವುದು. ಇದು ಶಾರುಖ್ ಖಾನ್ ಅವರ ಮನ್ನತ್ ಮತ್ತು ಅಮಿತಾಭ್ ಬಚ್ಚನ್ ಅವರ ಜಲ್ಸಾಕ್ಕಿಂತಲೂ ದುಬಾರಿಯಾಗಿದೆ.

ಶಾರುಖ್-ಅಮಿತಾಭ್ ಅಲ್ಲ; ಬಾಲಿವುಡ್​ನ ಈ ದಂಪತಿಗಳು ಅತ್ಯಂತ ದುಬಾರಿ ಮನೆಯ ಒಡೆಯರು
ಬಾಲಿವುಡ್​ನ ಈ ದಂಪತಿಗಳು ಅತ್ಯಂತ ದುಬಾರಿ ಮನೆಯ ಒಡೆಯರು
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 14, 2025 | 8:12 AM

Share

ಬಾಲಿವುಡ್‌ನಲ್ಲಿ ಕಿಂಗ್ ಖಾನ್ ಶಾರುಖ್ ಅವರ ‘ಮನ್ನತ್’ ಬಂಗಲೆ ಮತ್ತು ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ‘ಜಲ್ಸಾ’ ಬಂಗಲೆ ಯಾವಾಗಲೂ ಸುದ್ದಿಯಲ್ಲಿರುತ್ತವೆ. ಆದರೆ ಈಗ ಈ ಇಬ್ಬರು ದೈತ್ಯರನ್ನು ಬಿಟ್ಟು ಬಾಲಿವುಡ್ (Bollywood) ತಾರಾ ದಂಪತಿಗಳು ತಮ್ಮ ಹೆಸರಿನಲ್ಲಿ ಅತ್ಯಂತ ದುಬಾರಿ ಮನೆಯನ್ನು ಖರೀದಿಸಿದ್ದಾರೆ. ವಿಶೇಷವೆಂದರೆ ಈ ಐಷಾರಾಮಿ ಬಂಗಲೆಯು ಅವರ ಎರಡು ವರ್ಷದ ಮಗಳ ಹೆಸರಿನಲ್ಲಿ ನೋಂದಾಯಿಸಲ್ಪಡಲಿದೆ. ಆ ಬಗ್ಗೆ ಇಲ್ಲಿದೆ ವಿವರ.

ನಾವು ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರ ಮನೆಯ ಬಗ್ಗೆ ಮಾತನಾಡುತ್ತಿದ್ದೇವೆ. ಮುಂಬೈನ ಪಾಲಿ ಹಿಲ್‌ ಪ್ರದೇಶದಲ್ಲಿ ಒಂದು ಭವ್ಯವಾದ ಬಂಗಲೆಯನ್ನು ನಿರ್ಮಿಸಲಾಗಿದೆ. ಈ ಬಂಗಲೆಗೆ ಕೃಷ್ಣ ರಾಜ್ ಬಂಗಲೆ ಎಂದು ಹೆಸರಿಸಲಾಗಿದೆ. ರಣಬೀರ್ ಅವರ ಅಜ್ಜಿ ಕೃಷ್ಣ ರಾಜ್ ಕಪೂರ್ ಅವರ ನೆನಪಿಗಾಗಿ ಈ ಬಂಗಲೆಯನ್ನು ನಿರ್ಮಿಸಲಾಗುತ್ತಿದೆ. ಈ ಮನೆ ಕಳೆದ ಕೆಲವು ವರ್ಷಗಳಿಂದ ಸುದ್ದಿಯಲ್ಲಿದೆ. ಏಕೆಂದರೆ ಇದರ ನಿರ್ಮಾಣ ಮತ್ತು ಬೆಲೆ ಬಹಳ ವಿಶೇಷವಾಗಿದೆ. ಈಗ ಈ ಮನೆ ಬಹುತೇಕ ಸಿದ್ಧವಾಗಿದೆ. ಇದು ಮುಂಬೈನ ಅತ್ಯಂತ ದುಬಾರಿ ಸೆಲೆಬ್ರಿಟಿ ಹೋಂ ಸ್ಟೇ ಆಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಈ ಬಂಗಲೆಯ ಬೆಲೆ ಸುಮಾರು 250 ಕೋಟಿ ರೂ. ಎಂದು ಹೇಳಲಾಗುತ್ತಿದೆ. ಇದಷ್ಟೇ ಅಲ್ಲ, ಈ ಆಸ್ತಿಯನ್ನು ರಣಬೀರ್-ಆಲಿಯಾ ದಂಪತಿ ತಮ್ಮ ಪ್ರೀತಿಯ ಮಗಳು ರಾಹಾ ಕಪೂರ್ ಹೆಸರಿನಲ್ಲಿ ನೋಂದಾಯಿಸಲಿದ್ದಾರೆ. ವರದಿಗಳ ಪ್ರಕಾರ, ಈ ಮನೆಯನ್ನು ದಂಪತಿಗಳು ತಮ್ಮ ಮಗಳಿಗೆ ಪರಂಪರೆಯ ಉಡುಗೊರೆಯಾಗಿ ಸಿದ್ಧಪಡಿಸುತ್ತಿದ್ದಾರೆ.

ಇದನ್ನೂ ಓದಿ
Image
ಸಲ್ಮಾನ್ ಖಾನ್​ ವೃತ್ತಿ ಜೀವನದ ಅತಿ ಕೆಟ್ಟ ಚಿತ್ರಗಳಿವು..
Image
ದಾಖಲೆ ಬೆಲೆಗೆ ‘ಘಾಟಿ’ ಚಿತ್ರದ ಹಕ್ಕು ಮಾರಾಟ
Image
‘ಸರಿಗಮಪ’ ಗೆಲುವಿನ ಬಳಿಕೆ ಮರೆಯದೇ ಪುನೀತ್ ಸಮಾಧಿಗೆ ಭೇಟಿ ನೀಡಿದ ಶಿವಾನಿ
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ

ಈ ಮನೆಯ ಅಡಿಪಾಯವನ್ನು ರಾಜ್ ಕಪೂರ್ ಸಮಯದಲ್ಲಿ ಹಾಕಲಾಯಿತು. ಅದಾದ ನಂತರ, ಈ ಆಸ್ತಿ  ರಿಷಿ ಕಪೂರ್ ಮತ್ತು ನೀತು ಕಪೂರ್​ಗೆ ಬಂತು. ರಣಬೀರ್ ಮತ್ತು ಆಲಿಯಾ ಅವರ ವಿವಾಹದ ನಂತರ, ಇಬ್ಬರೂ ಈ ಯೋಜನೆಯನ್ನು ಪೂರ್ಣಗೊಳಿಸಲು ನಿರ್ಧರಿಸಿದರು. ಆಧುನಿಕ ವಿನ್ಯಾಸದ ಜೊತೆ ಒಟ್ಟು ಆರು ಅಂತಸ್ತಿನ ರಚನೆಯನ್ನು ಈ ಕಟ್ಟಡ ಒಳಗೊಂಡಿದೆ.

ಇದನ್ನೂ ಓದಿ: ಆ ಮನೆ ಖರೀದಿಸುತ್ತೇನೆ: ಮನ್ನತ್ ಬಂಗಲೆ ನೋಡಿ ಪತ್ನಿಗೆ ಮೊದಲೇ ಮಾತು ಕೊಟ್ಟಿದ್ದ ಶಾರುಖ್

ಮನ್ನತ್ ಮತ್ತು ಜಲ್ಸಾ ಗಿಂತ ದುಬಾರಿಯೇ?

ಶಾರುಖ್ ಖಾನ್ ಅವರ ಮನ್ನತ್ ಬಂಗಲೆ ಸುಮಾರು 200 ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಅಮಿತಾಭ್​ ಬಚ್ಚನ್ ಅವರ ‘ಜಲ್ಸಾ’ ಬಂಗಲೆ ಸುಮಾರು 100 ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ರಣಬೀರ್-ಆಲಿಯಾ ಅವರ ಹೊಸ ಬಂಗಲೆ 250 ಕೋಟಿ ರೂಪಾಯಿ ಮೌಲ್ಯದ್ದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:10 am, Sat, 14 June 25

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ