AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ಜತೆ ನಟಿಸಲು ತುದಿಗಾಲಲ್ಲಿ ನಿಂತಿರುವ ಬಾಲಿವುಡ್ ತಾರೆಯರು; ಮನದಿಂಗಿತ ಹೇಳಿಕೊಂಡ ಆಲಿಯಾ ಭಟ್

Allu Arjun | Alia Bhatt: ಬಾಲಿವುಡ್ ನಟಿ ಆಲಿಯಾ ಭಟ್​ ಹಲವು ಹಿಟ್ ಚಿತ್ರಗಳನ್ನು ನೀಡಿದವರು. ಪ್ರಸ್ತುತ ದಕ್ಷಿಣ ಭಾರತ ಹಾಗೂ ಹಿಂದಿ ಚಿತ್ರರಂಗದಲ್ಲಿ ಅವರು ಬ್ಯುಸಿಯಾಗಿದ್ದಾರೆ. ‘ಪುಷ್ಪ’ ಚಿತ್ರವನ್ನು ವೀಕ್ಷಿಸಿರುವ ನಟಿ ಇದೀಗ ಹೊಸ ಬಯಕೆಯೊಂದನ್ನು ಮುಂದಿಟ್ಟಿದ್ದಾರೆ.

ಅಲ್ಲು ಅರ್ಜುನ್ ಜತೆ ನಟಿಸಲು ತುದಿಗಾಲಲ್ಲಿ ನಿಂತಿರುವ ಬಾಲಿವುಡ್ ತಾರೆಯರು; ಮನದಿಂಗಿತ ಹೇಳಿಕೊಂಡ ಆಲಿಯಾ ಭಟ್
ಆಲಿಯಾ ಭಟ್, ಅಲ್ಲು ಅರ್ಜುನ್
Follow us
TV9 Web
| Updated By: shivaprasad.hs

Updated on:Feb 11, 2022 | 3:03 PM

ಟಾಲಿವುಡ್​ ನಟ ಅಲ್ಲು ಅರ್ಜುನ್ (Allu Arjun) ‘ಪುಷ್ಪ: ದಿ ರೈಸ್’ (Pushpa: The Rise) ಚಿತ್ರದ ಮುಖಾಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬದಲಾಗಿದ್ದಾರೆ. ಅಷ್ಟೇ ಅಲ್ಲ, ದೇಶವನ್ನೂ ಮೀರಿ ಪುಷ್ಪದ ಕ್ರೇಜ್ ಹವಾ ಸೃಷ್ಟಿಸಿದೆ. ವಿವಿಧ ದೇಶಗಳ ಸೆಲೆಬ್ರಿಟಿಗಳು ಪುಷ್ಪ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ; ಡೈಲಾಗ್​ಗಳಿಗೆ ತಮ್ಮ ಲಿಪ್ ಸಿಂಕ್ ಮಾಡುತ್ತಿದ್ದಾರೆ. ಈ ಟ್ರೆಂಡ್ ಬಾಲಿವುಡ್​ ಚಿತ್ರರಂಗವನ್ನೂ ಬಿಟ್ಟಿಲ್ಲ. ಈಗಾಗಲೇ ಹಲವು ತಾರೆಯರು ‘ಪುಷ್ಪ’ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅಲ್ಲದೇ ತಾವು ಅಲ್ಲು ಅರ್ಜುನ್ ಫ್ಯಾನ್ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಇದೀಗ ಈ ಸಾಲಿಗೆ ಮತ್ತೋರ್ವ ಸೂಪರ್ ಹಿಟ್ ನಟಿ ಸೇರ್ಪಡೆಯಾಗಿದ್ದಾರೆ. ಅದು ಮತ್ಯಾರೂ ಅಲ್ಲ; ಆಲಿಯಾ ಭಟ್ (Alia Bhatt)! ಬಾಲಿವುಡ್​ನ ಯಶಸ್ವಿ ನಟಿಯರಲ್ಲಿ ಒಬ್ಬರಾಗಿರುವ ಆಲಿಯಾ, ಅಲ್ಲು ಅರ್ಜುನ್ ‘ಪುಷ್ಪ’ ಚಿತ್ರಕ್ಕೆ ಶಹಬ್ಬಾಸ್​ಗಿರಿ ನೀಡಿರುವುದಲ್ಲದೇ, ಅವರ ಫ್ಯಾನ್ ಆಗಿರುವುದಾಗಿ ಹೇಳಿಕೊಂಡಿದ್ದಾರೆ. ‘‘ನನ್ನ ಇಡೀ ಕುಟುಂಬ ಪುಷ್ಪ ಚಿತ್ರವನ್ನು ವೀಕ್ಷಿಸಿದೆ. ಎಲ್ಲರೂ ಅಲ್ಲು ಅರ್ಜುನ್ ಫ್ಯಾನ್ ಆಗಿದ್ದಾರೆ’’ ಎಂದು ಆಲಿಯಾ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

‘ಆಲೂ, ನೀನು ಅಲ್ಲು ಜತೆ ತೆರೆ ಹಂಚಿಕೊಳ್ಳೋದು ಯಾವಾಗ?’; ಆಲಿಯಾಗೆ ಕುಟುಂಬದವರ ಪ್ರಶ್ನೆ

‘ಪುಷ್ಪ’ ಚಿತ್ರ ನೋಡಿದ ಆಲಿಯಾ ಕುಟುಂಬದವರು ಕೇವಲ ಅಲ್ಲು ಅರ್ಜುನ್ ನಟನೆಯನ್ನು ಹೊಗಳಿ ಸುಮ್ಮನಾಗಿಲ್ಲ. ಬದಲಾಗಿ ಆಲಿಯಾಗೆ ಹೊಸ ಪ್ರಶ್ನೆ ಮುಂದಿಟ್ಟಿದ್ದಾರೆ. ಇದನ್ನು ಆಲಿಯಾ ಸ್ವತಃ ಹೇಳಿಕೊಂಡಿದ್ದಾರೆ. ‘ಆಲೂ, ನೀನು ಅಲ್ಲು ಜತೆ ಕೆಲಸ ಮಾಡುವುದು ಯಾವಾಗ?’ ಎಂದು ಕುಟುಂಬಸ್ಥರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಆಲಿಯಾ ಹೇಳಿಕೊಂಡಿದ್ದಾರೆ. ಇಷ್ಟೇ ಅಲ್ಲ, ಆಲಿಯಾ ತಮ್ಮ ಮನದಿಂಗಿತವನ್ನೂ ಹೇಳಿಕೊಂಡಿದ್ದಾರೆ. ಒಂದು ವೇಳೆ ಅಲ್ಲು ಅರ್ಜುನ್ ಜತೆ ಕೆಲಸ ಮಾಡುವ ಅವಕಾಶ ಸಿಕ್ಕರೆ ನನಗೆ ಬಹಳ ಖುಷಿಯಾಗುತ್ತದೆ ಎಂದು ಅವರು ಹೇಳಿಕೊಂಡಿದ್ದಾರೆ.

‘ಪುಷ್ಪ’ವನ್ನು ಹೊಗಳಿದ ಅನುಪಮ್ ಖೇರ್:

ಬಾಲಿವುಡ್​ನ ಹಿರಿಯ ನಟ ಅನುಪಮ್ ಖೇರ್ ಪುಷ್ಪ ಚಿತ್ರವನ್ನು ಹೊಗಳಿದ್ದಾರೆ. ಪುಷ್ಪ ಚಿತ್ರ ಪಕ್ಕಾ ಪೈಸಾ ವಸೂಲ್ ಎಂದು ಕರೆದಿರುವ ಅನುಪಮ್, ಅಲ್ಲು ಅರ್ಜುನ್ ಜತೆ ನಟಿಸುವ ಆಕಾಂಕ್ಷೆಯನ್ನೂ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇಡೀ ತಂಡಕ್ಕೆ ಅಭಿನಂದನೆಗಳನ್ನು ಹೇಳಿದ್ದಾರೆ ಅನುಪಮ್.

ಅನುಪಮ್ ಖೇರ್ ಹಂಚಿಕೊಂಡಿರುವ ಟ್ವೀಟ್:

‘ಪುಷ್ಪ’ ಚಿತ್ರ ಅಲ್ಲು ಅರ್ಜುನ್ ವೃತ್ತಿ ಜೀವನದ ದೊಡ್ಡ ಬ್ಲಾಕ್ ಬಸ್ಟರ್ ಚಿತ್ರವಾಗಿ ದಾಖಲಾಗಿದೆ. ಹಿಂದಿ ಅವತರಣಿಕೆಯೊಂದೇ ನೂರು ಕೋಟಿಗೂ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ಚಿತ್ರದ ಒಟ್ಟಾರೆ ಕಲೆಕ್ಷನ್ 300 ಕೋಟಿ ದಾಟಿದೆ ಎಂದು ವರದಿಗಳು ಹೇಳಿವೆ. ‘ಪುಷ್ಪ’ದ ಎರಡನೇ ಭಾಗ ‘ಪುಷ್ಪ: ದಿ ರೂಲ್’ಗೆ ಸಿದ್ಧತೆಗಳು ನಡೆಯುತ್ತಿದ್ದು, ಮಾರ್ಚ್​ನಿಂದ ಸೆಟ್ಟೇರುವ ನಿರೀಕ್ಷೆ ಇದೆ.

ಇದನ್ನೂ ಓದಿ:

Rashmika Mandanna: ನಿಮ್ಮನ್ನು ಮದುವೆ ಆಗುವವರು ತುಂಬಾನೇ ಲಕ್ಕಿ ಎಂದ ರಶ್ಮಿಕಾ ಮಂದಣ್ಣ

‘ಪರಭಾಷೆಯ ಯಾವ ಚಿತ್ರಕ್ಕೂ ಕಮ್ಮಿ ಇಲ್ಲ ಜೇಮ್ಸ್​ ಟೀಸರ್​’; ಹಾಡಿ ಹೊಗಳಿದ ಪುನೀತ್​ ಫ್ಯಾನ್ಸ್​

Published On - 2:57 pm, Fri, 11 February 22

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್