ಅಲ್ಲು ಅರ್ಜುನ್ ಜತೆ ನಟಿಸಲು ತುದಿಗಾಲಲ್ಲಿ ನಿಂತಿರುವ ಬಾಲಿವುಡ್ ತಾರೆಯರು; ಮನದಿಂಗಿತ ಹೇಳಿಕೊಂಡ ಆಲಿಯಾ ಭಟ್

Allu Arjun | Alia Bhatt: ಬಾಲಿವುಡ್ ನಟಿ ಆಲಿಯಾ ಭಟ್​ ಹಲವು ಹಿಟ್ ಚಿತ್ರಗಳನ್ನು ನೀಡಿದವರು. ಪ್ರಸ್ತುತ ದಕ್ಷಿಣ ಭಾರತ ಹಾಗೂ ಹಿಂದಿ ಚಿತ್ರರಂಗದಲ್ಲಿ ಅವರು ಬ್ಯುಸಿಯಾಗಿದ್ದಾರೆ. ‘ಪುಷ್ಪ’ ಚಿತ್ರವನ್ನು ವೀಕ್ಷಿಸಿರುವ ನಟಿ ಇದೀಗ ಹೊಸ ಬಯಕೆಯೊಂದನ್ನು ಮುಂದಿಟ್ಟಿದ್ದಾರೆ.

ಅಲ್ಲು ಅರ್ಜುನ್ ಜತೆ ನಟಿಸಲು ತುದಿಗಾಲಲ್ಲಿ ನಿಂತಿರುವ ಬಾಲಿವುಡ್ ತಾರೆಯರು; ಮನದಿಂಗಿತ ಹೇಳಿಕೊಂಡ ಆಲಿಯಾ ಭಟ್
ಆಲಿಯಾ ಭಟ್, ಅಲ್ಲು ಅರ್ಜುನ್
Follow us
| Updated By: shivaprasad.hs

Updated on:Feb 11, 2022 | 3:03 PM

ಟಾಲಿವುಡ್​ ನಟ ಅಲ್ಲು ಅರ್ಜುನ್ (Allu Arjun) ‘ಪುಷ್ಪ: ದಿ ರೈಸ್’ (Pushpa: The Rise) ಚಿತ್ರದ ಮುಖಾಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬದಲಾಗಿದ್ದಾರೆ. ಅಷ್ಟೇ ಅಲ್ಲ, ದೇಶವನ್ನೂ ಮೀರಿ ಪುಷ್ಪದ ಕ್ರೇಜ್ ಹವಾ ಸೃಷ್ಟಿಸಿದೆ. ವಿವಿಧ ದೇಶಗಳ ಸೆಲೆಬ್ರಿಟಿಗಳು ಪುಷ್ಪ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ; ಡೈಲಾಗ್​ಗಳಿಗೆ ತಮ್ಮ ಲಿಪ್ ಸಿಂಕ್ ಮಾಡುತ್ತಿದ್ದಾರೆ. ಈ ಟ್ರೆಂಡ್ ಬಾಲಿವುಡ್​ ಚಿತ್ರರಂಗವನ್ನೂ ಬಿಟ್ಟಿಲ್ಲ. ಈಗಾಗಲೇ ಹಲವು ತಾರೆಯರು ‘ಪುಷ್ಪ’ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅಲ್ಲದೇ ತಾವು ಅಲ್ಲು ಅರ್ಜುನ್ ಫ್ಯಾನ್ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಇದೀಗ ಈ ಸಾಲಿಗೆ ಮತ್ತೋರ್ವ ಸೂಪರ್ ಹಿಟ್ ನಟಿ ಸೇರ್ಪಡೆಯಾಗಿದ್ದಾರೆ. ಅದು ಮತ್ಯಾರೂ ಅಲ್ಲ; ಆಲಿಯಾ ಭಟ್ (Alia Bhatt)! ಬಾಲಿವುಡ್​ನ ಯಶಸ್ವಿ ನಟಿಯರಲ್ಲಿ ಒಬ್ಬರಾಗಿರುವ ಆಲಿಯಾ, ಅಲ್ಲು ಅರ್ಜುನ್ ‘ಪುಷ್ಪ’ ಚಿತ್ರಕ್ಕೆ ಶಹಬ್ಬಾಸ್​ಗಿರಿ ನೀಡಿರುವುದಲ್ಲದೇ, ಅವರ ಫ್ಯಾನ್ ಆಗಿರುವುದಾಗಿ ಹೇಳಿಕೊಂಡಿದ್ದಾರೆ. ‘‘ನನ್ನ ಇಡೀ ಕುಟುಂಬ ಪುಷ್ಪ ಚಿತ್ರವನ್ನು ವೀಕ್ಷಿಸಿದೆ. ಎಲ್ಲರೂ ಅಲ್ಲು ಅರ್ಜುನ್ ಫ್ಯಾನ್ ಆಗಿದ್ದಾರೆ’’ ಎಂದು ಆಲಿಯಾ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

‘ಆಲೂ, ನೀನು ಅಲ್ಲು ಜತೆ ತೆರೆ ಹಂಚಿಕೊಳ್ಳೋದು ಯಾವಾಗ?’; ಆಲಿಯಾಗೆ ಕುಟುಂಬದವರ ಪ್ರಶ್ನೆ

‘ಪುಷ್ಪ’ ಚಿತ್ರ ನೋಡಿದ ಆಲಿಯಾ ಕುಟುಂಬದವರು ಕೇವಲ ಅಲ್ಲು ಅರ್ಜುನ್ ನಟನೆಯನ್ನು ಹೊಗಳಿ ಸುಮ್ಮನಾಗಿಲ್ಲ. ಬದಲಾಗಿ ಆಲಿಯಾಗೆ ಹೊಸ ಪ್ರಶ್ನೆ ಮುಂದಿಟ್ಟಿದ್ದಾರೆ. ಇದನ್ನು ಆಲಿಯಾ ಸ್ವತಃ ಹೇಳಿಕೊಂಡಿದ್ದಾರೆ. ‘ಆಲೂ, ನೀನು ಅಲ್ಲು ಜತೆ ಕೆಲಸ ಮಾಡುವುದು ಯಾವಾಗ?’ ಎಂದು ಕುಟುಂಬಸ್ಥರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಆಲಿಯಾ ಹೇಳಿಕೊಂಡಿದ್ದಾರೆ. ಇಷ್ಟೇ ಅಲ್ಲ, ಆಲಿಯಾ ತಮ್ಮ ಮನದಿಂಗಿತವನ್ನೂ ಹೇಳಿಕೊಂಡಿದ್ದಾರೆ. ಒಂದು ವೇಳೆ ಅಲ್ಲು ಅರ್ಜುನ್ ಜತೆ ಕೆಲಸ ಮಾಡುವ ಅವಕಾಶ ಸಿಕ್ಕರೆ ನನಗೆ ಬಹಳ ಖುಷಿಯಾಗುತ್ತದೆ ಎಂದು ಅವರು ಹೇಳಿಕೊಂಡಿದ್ದಾರೆ.

‘ಪುಷ್ಪ’ವನ್ನು ಹೊಗಳಿದ ಅನುಪಮ್ ಖೇರ್:

ಬಾಲಿವುಡ್​ನ ಹಿರಿಯ ನಟ ಅನುಪಮ್ ಖೇರ್ ಪುಷ್ಪ ಚಿತ್ರವನ್ನು ಹೊಗಳಿದ್ದಾರೆ. ಪುಷ್ಪ ಚಿತ್ರ ಪಕ್ಕಾ ಪೈಸಾ ವಸೂಲ್ ಎಂದು ಕರೆದಿರುವ ಅನುಪಮ್, ಅಲ್ಲು ಅರ್ಜುನ್ ಜತೆ ನಟಿಸುವ ಆಕಾಂಕ್ಷೆಯನ್ನೂ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇಡೀ ತಂಡಕ್ಕೆ ಅಭಿನಂದನೆಗಳನ್ನು ಹೇಳಿದ್ದಾರೆ ಅನುಪಮ್.

ಅನುಪಮ್ ಖೇರ್ ಹಂಚಿಕೊಂಡಿರುವ ಟ್ವೀಟ್:

‘ಪುಷ್ಪ’ ಚಿತ್ರ ಅಲ್ಲು ಅರ್ಜುನ್ ವೃತ್ತಿ ಜೀವನದ ದೊಡ್ಡ ಬ್ಲಾಕ್ ಬಸ್ಟರ್ ಚಿತ್ರವಾಗಿ ದಾಖಲಾಗಿದೆ. ಹಿಂದಿ ಅವತರಣಿಕೆಯೊಂದೇ ನೂರು ಕೋಟಿಗೂ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ಚಿತ್ರದ ಒಟ್ಟಾರೆ ಕಲೆಕ್ಷನ್ 300 ಕೋಟಿ ದಾಟಿದೆ ಎಂದು ವರದಿಗಳು ಹೇಳಿವೆ. ‘ಪುಷ್ಪ’ದ ಎರಡನೇ ಭಾಗ ‘ಪುಷ್ಪ: ದಿ ರೂಲ್’ಗೆ ಸಿದ್ಧತೆಗಳು ನಡೆಯುತ್ತಿದ್ದು, ಮಾರ್ಚ್​ನಿಂದ ಸೆಟ್ಟೇರುವ ನಿರೀಕ್ಷೆ ಇದೆ.

ಇದನ್ನೂ ಓದಿ:

Rashmika Mandanna: ನಿಮ್ಮನ್ನು ಮದುವೆ ಆಗುವವರು ತುಂಬಾನೇ ಲಕ್ಕಿ ಎಂದ ರಶ್ಮಿಕಾ ಮಂದಣ್ಣ

‘ಪರಭಾಷೆಯ ಯಾವ ಚಿತ್ರಕ್ಕೂ ಕಮ್ಮಿ ಇಲ್ಲ ಜೇಮ್ಸ್​ ಟೀಸರ್​’; ಹಾಡಿ ಹೊಗಳಿದ ಪುನೀತ್​ ಫ್ಯಾನ್ಸ್​

Published On - 2:57 pm, Fri, 11 February 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ