AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್​-ಆಲಿಯಾಗೆ ಕೂಡಿ ಬರುತ್ತಿಲ್ಲ ಕಂಕಣ ಭಾಗ್ಯ; ಚಿಂತೆಗೊಳಗಾದ ಕುಟುಂಬದವರು

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು.

ರಣಬೀರ್​-ಆಲಿಯಾಗೆ ಕೂಡಿ ಬರುತ್ತಿಲ್ಲ ಕಂಕಣ ಭಾಗ್ಯ; ಚಿಂತೆಗೊಳಗಾದ ಕುಟುಂಬದವರು
ಆಲಿಯಾ ಭಟ್ - ರಣ್​​ಬೀರ್ ಕಪೂರ್
ರಾಜೇಶ್ ದುಗ್ಗುಮನೆ
|

Updated on: May 03, 2021 | 5:46 PM

Share

ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ ಪರಸ್ಪರ ಪ್ರೀತಿಸುವ ವಿಚಾರ ಜಗತ್​ಜಾಹೀರಾಗಿದೆ. ಆದರೆ, ಈ ವಿಚಾರವನ್ನು ಈ ಜೋಡಿ ಹೇಳಿಕೊಳ್ಳದಿದ್ದರೂ, ಫೋಟೋಗಳ ಮೂಲಕ ಎಲ್ಲವೂ ಸಾಬೀತಾಗಿದೆ. ಇತ್ತೀಚೆಗೆ ಈ ಜೋಡಿ ಮಾಲ್ಡೀವ್ಸ್​​ಗೆ ತೆರಳಿತ್ತು. ವಿಮಾನ ನಿಲ್ದಾಣದಲ್ಲಿ ಅವರು ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ರಣಬೀರ್​-ಆಲಿಯಾ ಮದುವೆ ಈಗಾಗಲೇ ಪೂರ್ಣಗೊಂಡಿರಬೇಕಿತ್ತು. ಆದರೆ, ನಾನಾ ಕಾರಣದಿಂದ ಇವರ ಮದುವೆ ಮುಂದೂಡಲ್ಪಡುತ್ತಿದೆ.

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ಆದರೆ, ಕೊರೊನಾ ಇವರ ಪ್ಲ್ಯಾನ್​ಅನ್ನು ತಲೆಕೆಳಗೆ ಮಾಡಿತ್ತು.

ಹೀಗಿರುವಾಗಲೇ 2020ರ ಏಪ್ರಿಲ್​ 30ರಂದು ರಣಬೀರ್​ ತಂದೆ ರಿಷಿ ಕಪೂರ್​ ಮೃತಪಟ್ಟಿದ್ದರು. ಇದು ಕಪೂರ್​ ಕುಟುಂಬಕ್ಕೆ ಆಘಾತ ಉಂಟು ಮಾಡಿತ್ತು. ಹೀಗಾಗಿ, ರಣಬೀರ್​ ಮದುವೆಯನ್ನು ಮುಂದೂಡಿದ್ದರು. ಈ ವರ್ಷ ಈ ಜೋಡಿ ಮದುವೆ ಆಗುವ ಆಲೋಚನೆಯಲ್ಲಿತ್ತು. ಆದರೆ, ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಿದೆ. ಭಾರತದಿಂದ ಬೇರೆ ದೇಶಗಳಿಗೆ ತೆರಳುವ ಫ್ಲೈಟ್​ಗಳ ಮೇಲೆ ನಿರ್ಬಂಧ ಹೇರಲಾಗಿದೆ. ಇದರಿಂದ, ಇವರ ವಿವಾಹ ಕಾರ್ಯಕ್ರಮ ಮತ್ತೆ ಮುಂದೂಡಲ್ಪಟ್ಟಿದೆ.

ದೇಶದೆಲ್ಲೆಡೆ ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಅಕ್ಷಯ್​ ಕುಮಾರ್​ ಸೇರಿದಂತೆ ಸಾಕಷ್ಟು ಸ್ಟಾರ್​ಗಳು ಕೊರೊನಾ ವಿರುದ್ಧ ಹೋರಾಡೋಕೆ ತಮ್ಮನ್ನು ತಾವು ಮುಡಿಪಿಟ್ಟಿದ್ದಾರೆ. ಇಂಥ ಕಷ್ಟದ ಸ್ಥಿತಿಯಲ್ಲಿ ಸೋನು ಸೂದ್​ ನೇರವಾಗಿ ಅಖಾಡಕ್ಕೆ ಇಳಿದು ಸಹಾಯ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ಆರ್ಥಿಕವಾಗಿ ಸಹಾಯ ಮಾಡುವ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಈ ಮಧ್ಯೆ ರಣಬೀರ್​ ಹಾಗೂ ಆಲಿಯಾ ಮಾಲ್ಡೀವ್ಸ್​ಗೆ ಹೋಗಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.

ಇದನ್ನೂ ಓದಿ: ಕೊರೊನಾದಿಂದ ಗುಣಮುಖರಾಗುತ್ತಿದ್ದಂತೆಯೇ ಮಾಲ್ಡೀವ್ಸ್​ಗೆ ಹಾರಿದ ರಣಬೀರ್ ಮತ್ತು ಆಲಿಯಾ; ಸಾಮಾಜಿಕ ಜಾಲತಾಣದಲ್ಲಿ ಫುಲ್​ ಟ್ರೋಲ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?