ರಣಬೀರ್​-ಆಲಿಯಾಗೆ ಕೂಡಿ ಬರುತ್ತಿಲ್ಲ ಕಂಕಣ ಭಾಗ್ಯ; ಚಿಂತೆಗೊಳಗಾದ ಕುಟುಂಬದವರು

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು.

ರಣಬೀರ್​-ಆಲಿಯಾಗೆ ಕೂಡಿ ಬರುತ್ತಿಲ್ಲ ಕಂಕಣ ಭಾಗ್ಯ; ಚಿಂತೆಗೊಳಗಾದ ಕುಟುಂಬದವರು
ಆಲಿಯಾ ಭಟ್ - ರಣ್​​ಬೀರ್ ಕಪೂರ್

Updated on: May 03, 2021 | 5:46 PM

ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ ಪರಸ್ಪರ ಪ್ರೀತಿಸುವ ವಿಚಾರ ಜಗತ್​ಜಾಹೀರಾಗಿದೆ. ಆದರೆ, ಈ ವಿಚಾರವನ್ನು ಈ ಜೋಡಿ ಹೇಳಿಕೊಳ್ಳದಿದ್ದರೂ, ಫೋಟೋಗಳ ಮೂಲಕ ಎಲ್ಲವೂ ಸಾಬೀತಾಗಿದೆ. ಇತ್ತೀಚೆಗೆ ಈ ಜೋಡಿ ಮಾಲ್ಡೀವ್ಸ್​​ಗೆ ತೆರಳಿತ್ತು. ವಿಮಾನ ನಿಲ್ದಾಣದಲ್ಲಿ ಅವರು ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ರಣಬೀರ್​-ಆಲಿಯಾ ಮದುವೆ ಈಗಾಗಲೇ ಪೂರ್ಣಗೊಂಡಿರಬೇಕಿತ್ತು. ಆದರೆ, ನಾನಾ ಕಾರಣದಿಂದ ಇವರ ಮದುವೆ ಮುಂದೂಡಲ್ಪಡುತ್ತಿದೆ.

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ಆದರೆ, ಕೊರೊನಾ ಇವರ ಪ್ಲ್ಯಾನ್​ಅನ್ನು ತಲೆಕೆಳಗೆ ಮಾಡಿತ್ತು.

ಹೀಗಿರುವಾಗಲೇ 2020ರ ಏಪ್ರಿಲ್​ 30ರಂದು ರಣಬೀರ್​ ತಂದೆ ರಿಷಿ ಕಪೂರ್​ ಮೃತಪಟ್ಟಿದ್ದರು. ಇದು ಕಪೂರ್​ ಕುಟುಂಬಕ್ಕೆ ಆಘಾತ ಉಂಟು ಮಾಡಿತ್ತು. ಹೀಗಾಗಿ, ರಣಬೀರ್​ ಮದುವೆಯನ್ನು ಮುಂದೂಡಿದ್ದರು. ಈ ವರ್ಷ ಈ ಜೋಡಿ ಮದುವೆ ಆಗುವ ಆಲೋಚನೆಯಲ್ಲಿತ್ತು. ಆದರೆ, ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಿದೆ. ಭಾರತದಿಂದ ಬೇರೆ ದೇಶಗಳಿಗೆ ತೆರಳುವ ಫ್ಲೈಟ್​ಗಳ ಮೇಲೆ ನಿರ್ಬಂಧ ಹೇರಲಾಗಿದೆ. ಇದರಿಂದ, ಇವರ ವಿವಾಹ ಕಾರ್ಯಕ್ರಮ ಮತ್ತೆ ಮುಂದೂಡಲ್ಪಟ್ಟಿದೆ.

ದೇಶದೆಲ್ಲೆಡೆ ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಅಕ್ಷಯ್​ ಕುಮಾರ್​ ಸೇರಿದಂತೆ ಸಾಕಷ್ಟು ಸ್ಟಾರ್​ಗಳು ಕೊರೊನಾ ವಿರುದ್ಧ ಹೋರಾಡೋಕೆ ತಮ್ಮನ್ನು ತಾವು ಮುಡಿಪಿಟ್ಟಿದ್ದಾರೆ. ಇಂಥ ಕಷ್ಟದ ಸ್ಥಿತಿಯಲ್ಲಿ ಸೋನು ಸೂದ್​ ನೇರವಾಗಿ ಅಖಾಡಕ್ಕೆ ಇಳಿದು ಸಹಾಯ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ಆರ್ಥಿಕವಾಗಿ ಸಹಾಯ ಮಾಡುವ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಈ ಮಧ್ಯೆ ರಣಬೀರ್​ ಹಾಗೂ ಆಲಿಯಾ ಮಾಲ್ಡೀವ್ಸ್​ಗೆ ಹೋಗಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.

ಇದನ್ನೂ ಓದಿ: ಕೊರೊನಾದಿಂದ ಗುಣಮುಖರಾಗುತ್ತಿದ್ದಂತೆಯೇ ಮಾಲ್ಡೀವ್ಸ್​ಗೆ ಹಾರಿದ ರಣಬೀರ್ ಮತ್ತು ಆಲಿಯಾ; ಸಾಮಾಜಿಕ ಜಾಲತಾಣದಲ್ಲಿ ಫುಲ್​ ಟ್ರೋಲ್

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us