AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​ ಜನ್ಮದಿನಕ್ಕೆ RRR ನಿರ್ದೇಶಕ ರಾಜಮೌಳಿ ಕಡೆಯಿಂದ ಭರ್ಜರಿ ಗಿಫ್ಟ್​! ಫ್ಯಾನ್ಸ್​ ಫಿದಾ

Alia Bhatt Birthday: ಬಾಲಿವುಡ್​ನ ಖ್ಯಾತ ನಟಿ ಆಲಿಯಾ ಭಟ್​ ಅವರಿಗೆ ಮಾ.15ರಂದು ಜನ್ಮದಿನದ ಸಂಭ್ರಮ. ಆ ಸಂಭ್ರಮವನ್ನು ನಿರ್ದೇಶಕ ರಾಜಮೌಳಿ ದ್ವಿಗುಣಗೊಳಿಸಿದ್ದಾರೆ.

ಆಲಿಯಾ ಭಟ್​ ಜನ್ಮದಿನಕ್ಕೆ RRR ನಿರ್ದೇಶಕ ರಾಜಮೌಳಿ ಕಡೆಯಿಂದ ಭರ್ಜರಿ ಗಿಫ್ಟ್​! ಫ್ಯಾನ್ಸ್​ ಫಿದಾ
ಆಲಿಯಾ ಭಟ್​- ರಾಜಮೌಳಿ
Follow us
ಮದನ್​ ಕುಮಾರ್​
|

Updated on: Mar 15, 2021 | 1:26 PM

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿ ಆಲಿಯಾ ಭಟ್​ ಅವರಿಗೆ ಸೋಮವಾರ (ಮಾ.15) ಹುಟ್ಟುಹಬ್ಬದ ಸಡಗರ. 28ನೇ ವಸಂತಕ್ಕೆ ಕಾಲಿಟ್ಟಿರುವ ಈ ಬೆಡಗಿಗೆ ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ಶುಭಕೋರುತ್ತಿದ್ದಾರೆ. ಅಲ್ಲದೆ, ಎಸ್​.ಎಸ್. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ತಂಡದಿಂದ ಆಲಿಯಾ ಪಾತ್ರದ ಫಸ್ಟ್​ ಲುಕ್​ ಬಿಡುಗಡೆ ಆಗಿದೆ.

ಈವರೆಗೂ ಬಾಲಿವುಡ್​ನಲ್ಲಿ ಮಿಂಚಿರುವ ಆಲಿಯಾ ಭಟ್​, ಇದೇ ಮೊದಲ ಬಾರಿಗೆ RRR ಸಿನಿಮಾ ಮೂಲಕ ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ. ಬಹುನಿರೀಕ್ಷಿತ ಸಿನಿಮಾದ ಮೂಲಕ ಆಲಿಯಾ ದಕ್ಷಿಣದತ್ತ ಹೆಜ್ಜೆ ಹಾಕುತ್ತಿರುವುದರಿಂದ ಅವರ ಪಾತ್ರದ ಬಗ್ಗೆ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಕುತೂಹಲ ಇದೆ. ಸೀತಾ ಎಂಬ ಪಾತ್ರಕ್ಕೆ ಆಲಿಯಾ ಬಣ್ಣ ಹಚ್ಚುತ್ತಿದ್ದಾರೆ. ಅವರ ಗೆಟಪ್​ ಹೇಗಿರಲಿದೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ. ರಾಜಮೌಳಿ ಅವರು ಸೀತಾ ಪಾತ್ರದ ಫಸ್ಟ್​ಲುಕ್​ ಬಿಡುಗಡೆ ಮಾಡಿದ್ದಾರೆ.

ಫಸ್ಟ್​ಲುಕ್​ ಪೋಸ್ಟರ್​ ಮೂಲಕ ಆಲಿಯಾಗೆ ಆರ್​ಆರ್​ಆರ್​ ತಂಡ ಶುಭಾಶಯ ಕೋರಿದೆ. ಸೀರೆ ಮತ್ತು ಆಭರಣ ಧರಿಸಿ ಸಾಂಪ್ರದಾಯಿಕ ಗೆಟಪ್​ನಲ್ಲಿ ಆಲಿಯಾ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳು ಈ ಪೋಸ್ಟರ್​ ಕಂಡು ಫಿದಾ ಆಗಿದ್ದಾರೆ. ಬಾಹುಬಲಿ, ಮಗಧೀರ, ಮುಂತಾದ ಸಿನಿಮಾಗಳಲ್ಲಿ ಮಹಿಳಾ ಪಾತ್ರಗಳನ್ನು ಅದ್ದೂರಿಯಾಗಿ ತೋರಿಸಿದ್ದ ರಾಜಮೌಳಿ ಅವರು ಆರ್​ಆರ್​ಆರ್​ ಚಿತ್ರದಲ್ಲಿ ಆಲಿಯಾರನ್ನು ಇನ್ನೆಷ್ಟು ಅದ್ಭುತವಾಗಿ ತೋರಿಸಲಿದ್ದಾರೆ ಎಂಬ ನಿರೀಕ್ಷೆ ಮೂಡಿದೆ.

ಈ ಚಿತ್ರದಲ್ಲಿ ಜ್ಯೂನಿಯರ್ ಎನ್​ಟಿಆರ್ ಮತ್ತು ರಾಮ್​ ಚರಣ್​ ನಾಯಕರಾಗಿ ನಟಿಸಿದ್ದಾರೆ. ಕೊರೊನಾ ವೈರಸ್​ ಕಾರಣದಿಂದ ಚಿತ್ರದ ಕೆಲಸಗಳು ವಿಳಂಬ ಆಗಿದ್ದವು. ಕಳೆದ ವರ್ಷ ಡಿಸೆಂಬರ್​ನಲ್ಲಿ ಆಲಿಯಾ ಭಟ್​ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು. ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಬೃಹತ್​ ಸೆಟ್​ಗಳನ್ನು ನಿರ್ಮಿಸಿ, ಅದರಲ್ಲಿ ಚಿತ್ರೀಕರಣ ಮಾಡಲಾಗಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ಇದೇ ವರ್ಷ ಅಕ್ಟೋಬರ್​ 13ರಂದು ‘ಆರ್​ಆರ್​ಆರ್​’ ತೆರೆಕಾಣಲಿದೆ. ಚಿತ್ರದ ಇನ್ನೊಂದು ಮುಖ್ಯ ಪಾತ್ರದಲ್ಲಿ ಅಜಯ್​ ದೇವಗನ್​ ಕೂಡ ನಟಿಸಿದ್ದಾರೆ.

ಆಲಿಯಾ ಭಟ್​ ಅವರ ಫಸ್ಟ್​ಲುಕ್​ ಪೋಸ್ಟರ್​ ಹಂಚಿಕೊಂಡ ನಿರ್ದೇಶಕ ರಾಜಮೌಳಿ

ಇದನ್ನೂ ಓದಿ: ಬಿಟೌನ್​ನಲ್ಲಿ ಮದುವೆ ಗುಸುಗುಸು: ಮೌನ ಮುರಿದ ಆಲಿಯಾ ಭಟ್ ಮದುವೆ ಬಗ್ಗೆ ಹೇಳಿದ್ದೇನು?

RRR ಸಿನಿಮಾದ ಶೂಟಿಂಗ್‌ ಗಿಂತ ಗ್ರಾಫಿಕ್ಸ್‌ಗೇ ಅತಿಹೆಚ್ಚು ಹಣ ಖರ್ಚಾ.. ತೆರೆಮೇಲೆ ಹುಟ್ಟಲಿದೆ ಅದ್ಭುತ ದೃಶ್ಯ ವೈಭವ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ