AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾರನ್ನು ಹಿಂದಿಕ್ಕಿ ‘ತುಂಬಾಡ್’ ಪ್ರಪಂಚ ಪ್ರವೇಶಿಸಿದ ಆಲಿಯಾ ಭಟ್

Alia Bhatt movie: ಒಟಿಟಿಗಳಲ್ಲಿ, ಪೈರಸಿ ಸೈಟ್​​ಗಳ ಮೂಲಕ ಹೆಚ್ಚು-ಹೆಚ್ಚು ಜನರಿಗೆ ತಲುಪಿ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿತು ‘ತುಂಬಾಡ್’ ಸಿನಿಮಾ. ಇತ್ತೀಚೆಗಷ್ಟೆ ಸಿನಿಮಾ ಮರು ಬಿಡುಗಡೆ ಆಗಿ, ದಾಖಲೆ ಮೊತ್ತದ ಗಳಿಕೆ ಮಾಡಿತು. ಇದೀಗ ಸಿನಿಮಾದ ಸೀಕ್ವೆಲ್ ನಿರ್ಮಾಣ ಆಗುತ್ತಿದ್ದು, ನಟಿ ಆಲಿಯಾ ಭಟ್ ಮುಖ್ಯ ಪಾತ್ರಕ್ಕೆ ಆಯ್ಕೆ ಆಗಿರುವುದು ವಿಶೇಷ.

ಸಮಂತಾರನ್ನು ಹಿಂದಿಕ್ಕಿ ‘ತುಂಬಾಡ್’ ಪ್ರಪಂಚ ಪ್ರವೇಶಿಸಿದ ಆಲಿಯಾ ಭಟ್
Thumbadd
ಮಂಜುನಾಥ ಸಿ.
|

Updated on: Jul 14, 2026 | 11:05 AM

Share

‘ತುಂಬಾಡ್’ (Tumbbad) ಭಾರತೀಯ ಚಿತ್ರರಂಗದ ಕಲ್ಟ್ ಕ್ಲಾಸಿಕ್ ಸಿನಿಮಾ. ನಾನಾ ಅಡೆತಡೆಗಳು, ಸಮಸ್ಯೆಗಳ ಬಳಿಕ 2018 ರಲ್ಲಿ ಬಿಡುಗಡೆ ಆದ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಒಳ್ಳೆಯ ಪ್ರದರ್ಶನ ಕಾಣಲಿಲ್ಲ, ಆದರೆ ಕಾಲ ಸರಿದಂತೆ ಸಿನಿಮಾ ತಮ್ಮ ನಿಜವಾದ ಪ್ರೇಕ್ಷಕರನ್ನು ಹುಡುಕಿಕೊಂಡಿತು. ಒಟಿಟಿಗಳಲ್ಲಿ, ಪೈರಸಿ ಸೈಟ್​​ಗಳ ಮೂಲಕ ಹೆಚ್ಚು-ಹೆಚ್ಚು ಜನರಿಗೆ ತಲುಪಿ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿತು. ಇತ್ತೀಚೆಗಷ್ಟೆ ಸಿನಿಮಾ ಮರು ಬಿಡುಗಡೆ ಆಗಿ, ದಾಖಲೆ ಮೊತ್ತದ ಗಳಿಕೆ ಮಾಡಿತು. ಇದೀಗ ಸಿನಿಮಾದ ಸೀಕ್ವೆಲ್ ನಿರ್ಮಾಣ ಆಗುತ್ತಿದ್ದು, ನಟಿ ಆಲಿಯಾ ಭಟ್ ಮುಖ್ಯ ಪಾತ್ರಕ್ಕೆ ಆಯ್ಕೆ ಆಗಿರುವುದು ವಿಶೇಷ.

‘ತುಂಬಾಡ್ 2’ ನಿರ್ಮಾಣ ಆಗಲಿರುವ ಸುದ್ದಿ ಹಳತೇ ಆಗಿದೆ. ಆದರೆ ಸಿನಿಮಾನಲ್ಲಿ ನಟಿಸಲಿರುವ ನಟಿ ಯಾರೆಂಬುದರ ಬಗ್ಗೆ ಸಾಕಷ್ಟು ಗೊಂದಲುಗಳು ಸೃಷ್ಟಿ ಆಗಿದ್ದವು. ಸಮಂತಾ ಋತ್ ಪ್ರಭು ಹೆಸರು ಮುಖ್ಯವಾಗಿ ಕೇಳಿ ಬಂದಿತ್ತು. ಸಮಂತಾರ ಪತಿಯೇ ‘ತುಂಬಾಡ್ 2’ ನಿರ್ಮಾಣ ಮಾಡಲಿದ್ದಾರೆ ಎಂಬ ಸುದ್ದಿಯೂ ಗಟ್ಟಿಯಾಗಿ ಹರಿದಾಡಿತ್ತು. ಈ ನಡುವೆ ನಟಿ ಜಾನ್ಹವಿ ಕಪೂರ್ ಹೆಸರು ಸಹ ಕೇಳಿ ಬಂದಿತ್ತು. ಆದರೆ ಇದೀಗ ಆಲಿಯಾ ಭಟ್ ಅವರು ಅಧಿಕೃತವಾಗಿ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.

ಜನಪ್ರಿಯ ಹಾರರ್ ಚಿತ್ರ ‘ತುಂಬಾಡ್’ನ ಬಹುನಿರೀಕ್ಷಿತ ಮುಂದುವರಿದ ಭಾಗದಲ್ಲಿ ಆಲಿಯಾ ನಟಿಸುತ್ತಿರುವುದನ್ನು ಚಿತ್ರದ ನಾಯಕ ನಟ ಮತ್ತು ನಿರ್ಮಾಪಕ ಸೋಹಮ್ ಶಾ ಖಚಿತಪಡಿಸಿದ್ದಾರೆ. ಸೋಹಮ್ ಶಾ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಆಲಿಯಾ ಅವರ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರನ್ನು ಈ ಚಿತ್ರಕ್ಕೆ ಸ್ವಾಗತಿಸಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸೋಹಮ್ ಶಾ, ‘ಒಂದು ಹೊಸ ಅಧ್ಯಾಯ ತೆರೆದುಕೊಳ್ಳುತ್ತಿದೆ. ‘ತುಂಬಾಡ್ 2’ಗೆ ಸ್ವಾಗತ ಆಲಿಯಾ ಭಟ್ ‘ಪ್ರಳಯ ಬರುತ್ತದೆ’. ಚಿತ್ರಮಂದಿರಗಳಲ್ಲಿ ಭೇಟಿಯಾಗೋಣ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:‘ಆಲ್ಫಾ’ ಸಿನಿಮಾ ಶೂಟಿಂಗ್ ವಿಡಿಯೋ ಹಂಚಿಕೊಂಡ ಆಲಿಯಾ ಭಟ್

‘ತುಂಬಾಡ್ 2’ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಕ್ಕೆ ಕಾರಣವನ್ನು ವಿವರಿಸಿದ ಆಲಿಯಾ ಭಟ್, ತಾವು ಮೊದಲ ಭಾಗದ ಸಿನಿಮಾವನ್ನು ನೋಡಿ ಬಹಳ ಪ್ರಭಾವಿತರಾಗಿದ್ದಾಗಿ ತಿಳಿಸಿದ್ದಾರೆ. ‘ನಾನು ‘ತುಂಬಾಡ್’ ನೋಡಿದಾಗಿನಿಂದಲೂ ಅದು ನನ್ನ ಮನಸ್ಸಿನಲ್ಲೇ ಉಳಿದುಕೊಂಡಿದೆ. ಇಷ್ಟು ಅದ್ಭುತ ಪ್ರಪಂಚವನ್ನು ಸೃಷ್ಟಿಸುವ ಚಲನಚಿತ್ರಗಳು ತುಂಬಾ ಕಡಿಮೆ, ಸಿನಿಮಾ ಬಿಡುಗಡೆಯಾದ ವರ್ಷಗಳ ಬಳಿಕವೂ ಜನರ ಸ್ಮೃತಿಯಲ್ಲಿ ಉಳಿದುಕೊಂಡಿದೆ ಆ ಸಿನಿಮಾ. ಅದೇ ಕಾರಣಕ್ಕೆ ಈ ಅವಕಾಶ ನನಗೆ ತುಂಬಾ ರೋಚಕವಾಗಿ ಕಂಡಿತು, ಹಾಗಾಗಿ ಒಪ್ಪಿಕೊಂಡೆ’ ಎಂದು ಅವರು ಹೇಳಿದ್ದಾರೆ.

ಆದೇಶ್ ಪ್ರಸಾದ್ ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಆಲಿಯಾ ಭಟ್ ಜೊತೆಗೆ ಸೋಹಮ್ ಶಾ ಮತ್ತು ನವಾಜುದ್ದೀನ್ ಸಿದ್ದಿಕಿ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೋಹಮ್ ಶಾ ಫಿಲ್ಮ್ಸ್ ಮತ್ತು ಪೆನ್ ಸ್ಟುಡಿಯೋಸ್ ನಿರ್ಮಿಸುತ್ತಿರುವ ಈ ಚಿತ್ರವು ಡಿಸೆಂಬರ್ 3, 2027 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅಂದಹಾಗೆ, ‘ತುಂಬಾಡ್’ ನಿರ್ದೇಶಿಸಿದ್ದ ರಾಹಿ ಅನಿಲ್ ಈ ಸಿನಿಮಾದಿಂದ ಹೊರಗೆ ಉಳಿದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ