AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾರನ್ನು ಹೊಗಳಿ ಅಟ್ಟಕ್ಕೇರಿಸಿದ ಆಲಿಯಾ ಭಟ್

Samantha: ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾ ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರೀ ರಿಲೀಸ್​ ಇವೆಂಟ್​ನಲ್ಲಿ ಸಮಂತಾ ಅತಿಥಿಯಾಗಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಟಿ ಆಲಿಯಾ, ಸಮಂತಾರನ್ನು ಶ್ಲಾಘಿಸಿದರು.

ಸಮಂತಾರನ್ನು ಹೊಗಳಿ ಅಟ್ಟಕ್ಕೇರಿಸಿದ ಆಲಿಯಾ ಭಟ್
ಮಂಜುನಾಥ ಸಿ.
|

Updated on: Oct 09, 2024 | 1:06 PM

Share

ತೆಲಂಗಾಣ ಸಚಿವೆ ಕೊಂಡ ಸುರೇಖಾ ಹೇಳಿಕೆಯಿಂದ ಒಲ್ಲದ ಕಾರಣಕ್ಕೆ ಸಮಂತಾ ಸುದ್ದಿಯಾಗಿದ್ದರು. ಸಮಂತಾ ಬಗ್ಗೆ ನೀಚ ಹೇಳಿಕೆಯೊಂದನ್ನು ಸಚಿವೆ ಕೊಂಡ ಸುರೇಖಾ ನೀಡಿದ್ದರು. ಆ ಸಮಯದಲ್ಲಿ ತೆಲುಗು ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಮಂತಾರ ಬೆಂಬಲಕ್ಕೆ ನಿಂತಿದ್ದರು. ವಿವಾದವಾದ ಬಳಿಕ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಟಿ ಸಮಂತಾ ಕಾಣಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಸಮಂತಾಗೆ ಭರಪೂರ ಬೆಂಬಲ ವ್ಯಕ್ತವಾಯಿತು. ರಾಷ್ಟ್ರಪ್ರಶಸ್ತಿ ವಿಜೇತ ನಟಿ ಆಲಿಯಾ ಭಟ್ ಸೇರಿದಂತೆ ಹಲವು ಖ್ಯಾತನಾಮರು ಸಮಂತಾರನ್ನು ಮನಸಾರೆ ಹೊಗಳಿದರು.

ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಹೈದರಾಬಾದ್​ನಲ್ಲಿ ಆಯೋಜಿಸಲಾಗಿತ್ತು, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಮಂತಾ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ‘ಜಿಗ್ರಾ’ ಸಿನಿಮಾದ ನಟಿ ಮತ್ತು ನಿರ್ಮಾಪಕಿ ಆಲಿಯಾ ಭಟ್, ‘ಪ್ರೀತಿಯ ಸಮಂತಾ, ನೀವು ಆನ್​ ಸ್ಕ್ರೀನ್ ಮತ್ತು ಆಫ್​ ಸ್ಕ್ರೀನ್​ನಲ್ಲಿ ನಿಜಕ್ಕೂ ಹೀರೋ. ನಿಮ್ಮ ಪ್ರತಿಭೆ, ಹೊಡೆತಗಳನ್ನು ಸಹಿಸಿಕೊಂಡು ಮತ್ತೆ ಎದ್ದು ನಿಲ್ಲುವ ರೀತಿ, ನಿಮ್ಮ ಶಕ್ತಿಯ ಅಭಿಮಾನಿ ನಾನು. ಪುರುಷರ ಪ್ರಪಂಚದಲ್ಲಿ ಮಹಿಳಾಗಿರುವುದು ಸುಲಭದ ಕಾರ್ಯವಲ್ಲ. ಆದರೆ ನೀವು ಈ ಲಿಂಗಭೇದಗಳನ್ನು ಮೀರಿ ಬಿಟ್ಟಿದ್ದೀರಿ’ ಎಂದಿದ್ದಾರೆ.

ಇದನ್ನೂ ನೋಡಿ: ರಜನೀಕಾಂತ್ ಜೊತೆ ಸಮಂತಾ ಹೋಲಿಕೆ, ಖ್ಯಾತ ನಿರ್ದೇಶಕ ಕೊಟ್ಟ ಕಾರಣವೇನು?

ಮುಂದುವರೆದು, ‘ನೀವು ನಿಮ್ಮ ಕಾಲುಗಳ ಮೇಲೆ ನಿಂತು, ನಿಮ್ಮ ಶಕ್ತಿ, ಪ್ರತಿಭೆ, ಆತ್ಮವಿಶ್ವಾಸದಿಂದ ಹಲವಾರು ಮಹಿಳೆಯರಿಗೆ ಸ್ಪೂರ್ತಿ ಆಗಿದ್ದೀರಿ. ಈ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಾನು ತುಸು ದೀರ್ಘವಾದ ಸಂದೇಶವನ್ನೇ ನಿಮಗೆ ಕಳಿಸಿದ್ದೆ. ಆದರೆ ನೀವು ಕೆಲವೇ ಸೆಕೆಂಡ್​ಗಳನ್ನು ಪ್ರತಿಕ್ರಿಯಿಸಿ ನಾನು ಬರುತ್ತೇನೆ ಎಂದು ಖಾತ್ರಿಪಡಿಸಿದಿರಿ, ಧನ್ಯವಾದ. ನಾನು ಸುಮ್ಮನೆ ಹೇಳುತ್ತಿಲ್ಲ, ತ್ರಿವಿಕ್ರಮ್ (ನಿರ್ದೇಶಕ) ನಾನು ಹಾಗೂ ಸಮಂತಾ ಇಬ್ಬರೂ ನಿಮ್ಮ ಸಿನಿಮಾನಲ್ಲಿ ನಟಿಸಲು ಇಷ್ಟಪಡುತ್ತೀವಿ. ಎಲ್ಲರೂ ಹೇಳುತ್ತಾರೆ ನಟಿ ಇನ್ನೊಬ್ಬ ನಟಿಯನ್ನು ಪ್ರತಿಸ್ಪರ್ಧೆಯ ರೂಪದಲ್ಲಿ ನೋಡುತ್ತಾರೆ ಎಂದು, ಆದರೆ ಅದು ನಿಜವಲ್ಲ, ನನ್ನ ಸಿನಿಮಾದ ಪ್ರಚಾರಕ್ಕೆ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಆಗಿರುವ ಸಮಂತಾ ಬಂದಿರುವುದು ನನಗೆ ನಿಜಕ್ಕೂ ಬಹಳ ಹೆಮ್ಮೆ’ ಎಂದರು ಆಲಿಯಾ ಭಟ್.

ನಾಟು-ನಾಟು ಬಗ್ಗೆಯೂ ಮಾತನಾಡಿದ ಆಲಿಯಾ, ‘ಆರ್​ಆರ್​ಆರ್ ಸಿನಿಮಾದ ಬಳಿಕ ನನಗೆ ವಿಶೇಷ ಪ್ರೀತಿ ತೆಲುಗು ಪ್ರೇಕ್ಷಕರಿಂದ ಸಿಗುತ್ತಿದೆ. ‘ನಾಟು-ನಾಟು’ ಹಾಡು ನಮ್ಮ ಮನೆಯಲ್ಲಿ ಪ್ರತಿದಿನವೂ ಕೇಳುತ್ತದೆ. ನನ್ನ ಮಗಳು ರಾಹಾಗೆ ಆ ಹಾಡು ಬಹಳ ಇಷ್ಟ. ನಾನು ಮತ್ತು ರಾಹಾ ಪ್ರತಿದಿನ ಆ ಹಾಡು ಹಾಕಿಕೊಂಡು ಕುಣಿಯುತ್ತೇವೆ. ತೆಲುಗು ಪ್ರೇಕ್ಷಕರು ನಿಜಕ್ಕೂ ಅದ್ಭುತ. ಒಂದು ಒಳ್ಳೆಯ ಸಿನಿಮಾವನ್ನು ಪ್ರೀತಿ ಮಾಡುವುದರಲ್ಲಿ ತೆಲುಗು ಪ್ರೇಕ್ಷಕರೇ ಮೊದಲು. ಇದೇ ಕಾರಣಕ್ಕೆ ನಾವು ‘ಗಂಗೂಬಾಯಿ ಕಾಠಿಯಾವಾಡಿ’ ಹಾಗೂ ‘ಬ್ರಹ್ಮಾಸ್ತ್ರ’ ಸಿನಿಮಾಗಳನ್ನು ತೆಲುಗಿನಲ್ಲಿ ಬಿಡುಗಡೆ ಮಾಡಿದೆವು. ಈಗ ‘ಜಿಗ್ರಾ’ ಸಿನಿಮಾವನ್ನು ಸಹ ತೆಲುಗಿನಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಸಿನಿಮಾ ಅಕ್ಟೋಬರ್ 11 ಕ್ಕೆ ತೆರೆಗೆ ಬರಲಿದೆ’ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ