Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾರನ್ನು ಹೊಗಳಿ ಅಟ್ಟಕ್ಕೇರಿಸಿದ ಆಲಿಯಾ ಭಟ್

Samantha: ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾ ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರೀ ರಿಲೀಸ್​ ಇವೆಂಟ್​ನಲ್ಲಿ ಸಮಂತಾ ಅತಿಥಿಯಾಗಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಟಿ ಆಲಿಯಾ, ಸಮಂತಾರನ್ನು ಶ್ಲಾಘಿಸಿದರು.

ಸಮಂತಾರನ್ನು ಹೊಗಳಿ ಅಟ್ಟಕ್ಕೇರಿಸಿದ ಆಲಿಯಾ ಭಟ್
Follow us
ಮಂಜುನಾಥ ಸಿ.
|

Updated on: Oct 09, 2024 | 1:06 PM

ತೆಲಂಗಾಣ ಸಚಿವೆ ಕೊಂಡ ಸುರೇಖಾ ಹೇಳಿಕೆಯಿಂದ ಒಲ್ಲದ ಕಾರಣಕ್ಕೆ ಸಮಂತಾ ಸುದ್ದಿಯಾಗಿದ್ದರು. ಸಮಂತಾ ಬಗ್ಗೆ ನೀಚ ಹೇಳಿಕೆಯೊಂದನ್ನು ಸಚಿವೆ ಕೊಂಡ ಸುರೇಖಾ ನೀಡಿದ್ದರು. ಆ ಸಮಯದಲ್ಲಿ ತೆಲುಗು ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಮಂತಾರ ಬೆಂಬಲಕ್ಕೆ ನಿಂತಿದ್ದರು. ವಿವಾದವಾದ ಬಳಿಕ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಟಿ ಸಮಂತಾ ಕಾಣಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಸಮಂತಾಗೆ ಭರಪೂರ ಬೆಂಬಲ ವ್ಯಕ್ತವಾಯಿತು. ರಾಷ್ಟ್ರಪ್ರಶಸ್ತಿ ವಿಜೇತ ನಟಿ ಆಲಿಯಾ ಭಟ್ ಸೇರಿದಂತೆ ಹಲವು ಖ್ಯಾತನಾಮರು ಸಮಂತಾರನ್ನು ಮನಸಾರೆ ಹೊಗಳಿದರು.

ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಹೈದರಾಬಾದ್​ನಲ್ಲಿ ಆಯೋಜಿಸಲಾಗಿತ್ತು, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಮಂತಾ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ‘ಜಿಗ್ರಾ’ ಸಿನಿಮಾದ ನಟಿ ಮತ್ತು ನಿರ್ಮಾಪಕಿ ಆಲಿಯಾ ಭಟ್, ‘ಪ್ರೀತಿಯ ಸಮಂತಾ, ನೀವು ಆನ್​ ಸ್ಕ್ರೀನ್ ಮತ್ತು ಆಫ್​ ಸ್ಕ್ರೀನ್​ನಲ್ಲಿ ನಿಜಕ್ಕೂ ಹೀರೋ. ನಿಮ್ಮ ಪ್ರತಿಭೆ, ಹೊಡೆತಗಳನ್ನು ಸಹಿಸಿಕೊಂಡು ಮತ್ತೆ ಎದ್ದು ನಿಲ್ಲುವ ರೀತಿ, ನಿಮ್ಮ ಶಕ್ತಿಯ ಅಭಿಮಾನಿ ನಾನು. ಪುರುಷರ ಪ್ರಪಂಚದಲ್ಲಿ ಮಹಿಳಾಗಿರುವುದು ಸುಲಭದ ಕಾರ್ಯವಲ್ಲ. ಆದರೆ ನೀವು ಈ ಲಿಂಗಭೇದಗಳನ್ನು ಮೀರಿ ಬಿಟ್ಟಿದ್ದೀರಿ’ ಎಂದಿದ್ದಾರೆ.

ಇದನ್ನೂ ನೋಡಿ: ರಜನೀಕಾಂತ್ ಜೊತೆ ಸಮಂತಾ ಹೋಲಿಕೆ, ಖ್ಯಾತ ನಿರ್ದೇಶಕ ಕೊಟ್ಟ ಕಾರಣವೇನು?

ಮುಂದುವರೆದು, ‘ನೀವು ನಿಮ್ಮ ಕಾಲುಗಳ ಮೇಲೆ ನಿಂತು, ನಿಮ್ಮ ಶಕ್ತಿ, ಪ್ರತಿಭೆ, ಆತ್ಮವಿಶ್ವಾಸದಿಂದ ಹಲವಾರು ಮಹಿಳೆಯರಿಗೆ ಸ್ಪೂರ್ತಿ ಆಗಿದ್ದೀರಿ. ಈ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಾನು ತುಸು ದೀರ್ಘವಾದ ಸಂದೇಶವನ್ನೇ ನಿಮಗೆ ಕಳಿಸಿದ್ದೆ. ಆದರೆ ನೀವು ಕೆಲವೇ ಸೆಕೆಂಡ್​ಗಳನ್ನು ಪ್ರತಿಕ್ರಿಯಿಸಿ ನಾನು ಬರುತ್ತೇನೆ ಎಂದು ಖಾತ್ರಿಪಡಿಸಿದಿರಿ, ಧನ್ಯವಾದ. ನಾನು ಸುಮ್ಮನೆ ಹೇಳುತ್ತಿಲ್ಲ, ತ್ರಿವಿಕ್ರಮ್ (ನಿರ್ದೇಶಕ) ನಾನು ಹಾಗೂ ಸಮಂತಾ ಇಬ್ಬರೂ ನಿಮ್ಮ ಸಿನಿಮಾನಲ್ಲಿ ನಟಿಸಲು ಇಷ್ಟಪಡುತ್ತೀವಿ. ಎಲ್ಲರೂ ಹೇಳುತ್ತಾರೆ ನಟಿ ಇನ್ನೊಬ್ಬ ನಟಿಯನ್ನು ಪ್ರತಿಸ್ಪರ್ಧೆಯ ರೂಪದಲ್ಲಿ ನೋಡುತ್ತಾರೆ ಎಂದು, ಆದರೆ ಅದು ನಿಜವಲ್ಲ, ನನ್ನ ಸಿನಿಮಾದ ಪ್ರಚಾರಕ್ಕೆ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಆಗಿರುವ ಸಮಂತಾ ಬಂದಿರುವುದು ನನಗೆ ನಿಜಕ್ಕೂ ಬಹಳ ಹೆಮ್ಮೆ’ ಎಂದರು ಆಲಿಯಾ ಭಟ್.

ನಾಟು-ನಾಟು ಬಗ್ಗೆಯೂ ಮಾತನಾಡಿದ ಆಲಿಯಾ, ‘ಆರ್​ಆರ್​ಆರ್ ಸಿನಿಮಾದ ಬಳಿಕ ನನಗೆ ವಿಶೇಷ ಪ್ರೀತಿ ತೆಲುಗು ಪ್ರೇಕ್ಷಕರಿಂದ ಸಿಗುತ್ತಿದೆ. ‘ನಾಟು-ನಾಟು’ ಹಾಡು ನಮ್ಮ ಮನೆಯಲ್ಲಿ ಪ್ರತಿದಿನವೂ ಕೇಳುತ್ತದೆ. ನನ್ನ ಮಗಳು ರಾಹಾಗೆ ಆ ಹಾಡು ಬಹಳ ಇಷ್ಟ. ನಾನು ಮತ್ತು ರಾಹಾ ಪ್ರತಿದಿನ ಆ ಹಾಡು ಹಾಕಿಕೊಂಡು ಕುಣಿಯುತ್ತೇವೆ. ತೆಲುಗು ಪ್ರೇಕ್ಷಕರು ನಿಜಕ್ಕೂ ಅದ್ಭುತ. ಒಂದು ಒಳ್ಳೆಯ ಸಿನಿಮಾವನ್ನು ಪ್ರೀತಿ ಮಾಡುವುದರಲ್ಲಿ ತೆಲುಗು ಪ್ರೇಕ್ಷಕರೇ ಮೊದಲು. ಇದೇ ಕಾರಣಕ್ಕೆ ನಾವು ‘ಗಂಗೂಬಾಯಿ ಕಾಠಿಯಾವಾಡಿ’ ಹಾಗೂ ‘ಬ್ರಹ್ಮಾಸ್ತ್ರ’ ಸಿನಿಮಾಗಳನ್ನು ತೆಲುಗಿನಲ್ಲಿ ಬಿಡುಗಡೆ ಮಾಡಿದೆವು. ಈಗ ‘ಜಿಗ್ರಾ’ ಸಿನಿಮಾವನ್ನು ಸಹ ತೆಲುಗಿನಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಸಿನಿಮಾ ಅಕ್ಟೋಬರ್ 11 ಕ್ಕೆ ತೆರೆಗೆ ಬರಲಿದೆ’ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್