AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜತೆ ಇದ್ದಾಗಲೂ ‘ಆರ್​ಆರ್​ಆರ್​’ ಪ್ರಚಾರ ಮಾಡಿದ ನಟಿ ಆಲಿಯಾ ಭಟ್​; ವಿಡಿಯೋ ವೈರಲ್​

ದಕ್ಷಿಣ ಭಾರತದಲ್ಲಿ ಆಲಿಯಾ ಭಟ್​ ನಟಿಸಿರುವ ಮೊದಲ ಸಿನಿಮಾ ‘ಆರ್​ಆರ್​ಆರ್’. ಹಾಗಾಗಿ ಈ ಚಿತ್ರ ಅವರಿಗೆ ಬಹುಮುಖ್ಯವಾಗಿದೆ. ಸೀತಾ ಎಂಬ ಪಾತ್ರವನ್ನು ಅವರು ನಿಭಾಯಿಸಿದ್ದಾರೆ.

ಪ್ರಿಯಕರನ ಜತೆ ಇದ್ದಾಗಲೂ ‘ಆರ್​ಆರ್​ಆರ್​’ ಪ್ರಚಾರ ಮಾಡಿದ ನಟಿ ಆಲಿಯಾ ಭಟ್​; ವಿಡಿಯೋ ವೈರಲ್​
ರಣಬೀರ್ ಕಪೂರ್, ಆಲಿಯಾ ಭಟ್
TV9 Web
| Edited By: |

Updated on: Mar 24, 2022 | 2:50 PM

Share

ವಿಶ್ವಾದ್ಯಂತ ಬಿಡುಗಡೆ ಆಗುತ್ತಿರುವ ‘ಆರ್​ಆರ್​ಆರ್​’ ಸಿನಿಮಾ (RRR Movie) ಬಗ್ಗೆ ಅಭಿಮಾನಿಗಳು ಎಲ್ಲಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ತೆಲುಗಿನಲ್ಲಿ ತಯಾರಾದ ಈ ಸಿನಿಮಾ ಹಿಂದಿ, ಕನ್ನಡ, ತಮಿಳು, ಮಲಯಾಳಂ ಭಾಷೆಗಳಿಗೂ ಡಬ್​ ಆಗಿ ತೆರೆ ಕಾಣುತ್ತಿದೆ. ಮಾ.25ರಂದು ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ. ನಟಿ ಆಲಿಯಾ ಭಟ್​ (Alia Bhatt) ಅವರಿಗೆ ಈ ಸಿನಿಮಾ ತುಂಬ ವಿಶೇಷವಾದದ್ದು. ಇತ್ತೀಚೆಗಷ್ಟೇ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಮೂಲಕ ಭರ್ಜರಿ ಗೆಲುವು ಪಡೆದುಕೊಂಡಿದ್ದ ಆಲಿಯಾ ಅವರು ಈಗ ‘ಆರ್​ಆರ್​ಆರ್​’ ಸಿನಿಮಾದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಈಗಾಗಲೇ ಈ ಸಿನಿಮಾಗೆ ಭರ್ಜರಿ ಪ್ರಚಾರ ನೀಡಲಾಗಿದೆ. ದೇಶದ ಎಲ್ಲ ಪ್ರಮುಖ ನಗರಗಳಿಗೆ ತೆರಳಿ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಕರ್ನಾಟಕದಲ್ಲಿ ಅತಿ ದೊಡ್ಡ ಪ್ರೀ-ರಿಲೀಸ್​ ಇವೆಂಟ್​ ಮಾಡಲಾಯಿತು. ಅಷ್ಟೆಲ್ಲ ಮಾಡಿದ್ದರೂ ಪ್ರಚಾರದ ಬಗ್ಗೆ ಚಿತ್ರತಂಡಕ್ಕೆ ಸಮಾಧಾನ ಆಗಿಲ್ಲ. ಇನ್ನು, ಆಲಿಯಾ ಭಟ್​ ಅವರಂತೂ ಹೊತ್ತಲ್ಲದ ಹೊತ್ತಿನಲ್ಲೂ ಈ ಚಿತ್ರಕ್ಕೆ ಪ್ರಚಾರ ನೀಡುತ್ತಿದ್ದಾರೆ. ಪ್ರಿಯಕರ ರಣಬೀರ್​ ಕಪೂರ್​ (Ranbir Kapoor) ಜೊತೆ ಇರುವಾಗಲೂ ಅವರು ‘ಆರ್​ಆರ್​ಆರ್​’ ಜಪ ಮಾಡಿದ್ದಾರೆ. ಆ ವಿಡಿಯೋ ಈಗ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿದೆ.

ಎಲ್ಲರಿಗೂ ತಿಳಿದಿರುವಂತೆ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಪರಸ್ಪರ ಪ್ರೀತಿಸುತ್ತಿದ್ದಾರೆ. ಮದುವೆ ಆಗುವ ಬಗ್ಗೆಯೂ ಅವರು ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಮದುವೆಯ ದಿನಾಂಕ ನಿಗದಿ ಆಗಿಲ್ಲವಷ್ಟೇ. ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಇವರಿಬ್ಬರು ಜೊತೆಯಾಗಿ ಅಭಿನಯಿಸುತ್ತಿದ್ದಾರೆ. ವಾರಾಣಸಿಯಲ್ಲಿ ಈ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಶೂಟಿಂಗ್​ನಲ್ಲಿ ರಣಬೀರ್​ ಕಪೂರ್​ ಕೂಡ ಆಲಿಯಾಗೆ ಸಾಥ್​ ನೀಡಿದ್ದಾರೆ. ಈ ವೇಳೆ ಚಿತ್ರೀಕರಣದ ತಂಡದವರ ಜೊತೆ ಬೋಟ್​ನಲ್ಲಿ ಹೋಗುವಾಗ ದೂರದಲ್ಲಿದ್ದ ಅಭಿಮಾನಿಗಳು ಅವರನ್ನು ಗುರುತಿಸಿದ್ದಾರೆ.

ಅಭಿಮಾನಿಗಳ ಚಲಿಸುತ್ತಿದ್ದ ಬೋಟ್​ನ ಸ್ವಲ್ಪ ದೂರದಲ್ಲೇ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಚಿತ್ರತಂಡದ ಜೊತೆ ಇನ್ನೊಂದು ಬೋಟ್​ನಲ್ಲಿ ತೆರಳುತ್ತಿದ್ದರು. ಅಭಿಮಾನಿಗಳು ದೂರದಿಂದಲೇ ‘ಆರ್​ಆರ್​ಆರ್​’ ಎಂದು ಜೋರಾಗಿ ಕೂಗಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಆಲಿಯಾ ಭಟ್​ ಅವರು ಕೂಡ ‘ಆರ್​ಆರ್​ಆರ್’ ಎಂದು ಕೂಗಿರುವ ವಿಡಿಯೋ ಈಗ ಅವರ ಅಭಿಮಾನಿಗಳ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ವೈರಲ್​ ಆಗಿದೆ.

ದಕ್ಷಿಣ ಭಾರತದಲ್ಲಿ ಆಲಿಯಾ ನಟಿಸಿರುವ ಮೊದಲ ಸಿನಿಮಾ ‘ಆರ್​ಆರ್​ಆರ್’. ಮೊದಲ ಸಿನಿಮಾದಲ್ಲಿಯೇ ರಾಜಮೌಳಿ ಅವರ ಜೊತೆ ಕೆಲಸ ಮಾಡುವ ಅವಕಾಶ ಅವರಿಗೆ ಸಿಕ್ಕಿರುವುದು ಗಮನಾರ್ಹ. ಈ ಸಿನಿಮಾದಲ್ಲಿ ಸೀತಾ ಎಂಬ ಪಾತ್ರವನ್ನು ಅವರು ನಿಭಾಯಿಸಿದ್ದಾರೆ. ಹಾಗಂತ ಅವರದ್ದು ಪೂರ್ಣ ಪ್ರಮಾಣದ ಪಾತ್ರ ಅಲ್ಲ. ಅದು ಕೂಡ ಒಂದು ಅತಿಥಿ ಪಾತ್ರದ ರೀತಿ ಇರಲಿದೆ ಎಂದು ನಿರ್ದೇಶಕರು ಈಗಾಗಲೇ ತಿಳಿಸಿದ್ದಾರೆ. ಆಲಿಯಾ ಒಪ್ಪಿಕೊಂಡಿದ್ದಾರೆ ಎಂದರೆ ಆ ಪಾತ್ರಕ್ಕೆ ಖಂಡಿತವಾಗಿಯೂ ತೂಕ ಇದ್ದೇ ಇರುತ್ತದೆ ಎಂಬುದು ಅಭಿಮಾನಿಗಳ ಲೆಕ್ಕಾಚಾರ.

ರಣಬೀರ್​ ಕಪೂರ್​ ಜೊತೆಗಿನ ಪ್ರೀತಿಯ ವಿಚಾರವನ್ನು ಆಲಿಯಾ ಭಟ್​ ಮುಚ್ಚಿಟ್ಟಿಲ್ಲ. ಅನೇಕ ಸಂದರ್ಭಗಳಲ್ಲಿ ಈ ಜೋಡಿ ಹಕ್ಕಿಗಳು ಜೊತೆಯಾಗಿ ಕಾಣಿಸಿಕೊಂಡಿವೆ. ಆಲಿಯಾ ಭಟ್​ ಅವರ ಸೋಶಿಯಲ್​ ಮೀಡಿಯಾ ಖಾತೆಯಲ್ಲಿನ ಅನೇಕ ಫೋಟೋಗಳು ಅವರಿಬ್ಬರ ನಡುವಿನ ಆಪ್ತತೆಗೆ ಸಾಕ್ಷಿ ಒದಗಿಸುತ್ತವೆ. ತಾವು ಚಿಕ್ಕ ವಯಸ್ಸಿನಲ್ಲಿ ಇದ್ದಾಗಲೇ ರಣಬೀರ್​ ಕಪೂರ್​ ಮೇಲೆ ಪ್ರೀತಿ ಚಿಗುರಿತ್ತು ಎಂಬುದನ್ನು ಇತ್ತೀಚಿನ ಸಂದರ್ಶನದಲ್ಲಿ ಆಲಿಯಾ ಬಾಯಿ ಬಿಟ್ಟಿದ್ದರು. ಅವರು ಹೋದಲ್ಲಿ ಬಂದಲ್ಲಿ ಪದೇ ಪದೇ ಮದುವೆ ಕುರಿತು ಪ್ರಶ್ನೆ ಎದುರಾಗುತ್ತಿದೆ. ಹಾಗಾಗಿ ಅದರ ಬಗ್ಗೆ ಹೆಚ್ಚಾಗಿ ಮಾತನಾಡಬಾರದು ಎಂದು ಅವರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ:

Alia Bhatt: 29 ವರ್ಷದ ಆಲಿಯಾ ಬಹುಕೋಟಿಗಳ ಒಡತಿ! ನಟಿಯ ಒಟ್ಟು ಆಸ್ತಿ ಎಷ್ಟು?

ಬೀಚ್​ನಲ್ಲಿ ಬಿಕಿನಿ ತೊಟ್ಟ ಆಲಿಯಾ; ಇಲ್ಲಿದೆ ಬರ್ತ್​ಡೇ ಸೆಲೆಬ್ರೇಷನ್​ ಫೋಟೋ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ