AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಟಾರ್ ಕಿಡ್ ಎಂದು ಟೀಕಿಸಿದವರ ಮುಖಕ್ಕೆ ಗುದ್ದಬೇಕು’; ಆಲಿಯಾ ಭಟ್

ಸೋನಮ್ ಕಪೂರ್, ಅನನ್ಯಾ ಪಾಂಡೆ ದೊಡ್ಡ ಹಿನ್ನೆಲೆ ಹೊಂದಿರುವವರು. ಆದರೆ, ಅವರಿಗೆ ತಮ್ಮ ತನವನ್ನು ಸಾಬೀತು ಮಾಡಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಅವರಿಗೆ ಈವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.

‘ಸ್ಟಾರ್ ಕಿಡ್ ಎಂದು ಟೀಕಿಸಿದವರ ಮುಖಕ್ಕೆ ಗುದ್ದಬೇಕು’; ಆಲಿಯಾ ಭಟ್
ಆಲಿಯಾ ಭಟ್
ರಾಜೇಶ್ ದುಗ್ಗುಮನೆ
|

Updated on: Nov 17, 2023 | 10:32 AM

Share

ಅನೇಕ ಸ್ಟಾರ್​ ಕಿಡ್​​ಗಳು ಬಾಲಿವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕೆಲವರಿಗೆ ಯಶಸ್ಸು ಸಿಕ್ಕಿದೆ. ಆದರೆ, ಇನ್ನೂ ಕೆಲವರಿಗೆ ಗೆಲುವು ಸಿಕ್ಕಿಲ್ಲ. ಸ್ಟಾರ್ ಕಲಾವಿದರ ಮಕ್ಕಳಾದರೂ ಅವರು ತಮ್ಮ ತನವನ್ನು ಸಾಬೀತು ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಜನಪ್ರಿಯತೆ ಪಡೆಯಲು ಸಾಧ್ಯ. ಆಲಿಯಾ ಭಟ್ (Alia Bhatt) ಖ್ಯಾತ ನಿರ್ದೇಶಕ ಮಹೇಶ್ ಭಟ್ ಅವರ ಮಗಳು. ಈ ಕಾರಣದಿಂದಲೇ ಅವರಿಗೆ ಬಾಲಿವುಡ್​ನಲ್ಲಿ ಸುಲಭದಲ್ಲಿ ಅವಕಾಶ ಸಿಕ್ಕಿತು. ಇದನ್ನು ಅವರೂ ಒಪ್ಪಿಕೊಳ್ಳುತ್ತಾರೆ. ಆದರೆ, ಅವರು ತನ್ನ ತನವನ್ನು ಸಾಬೀತು ಮಾಡಿದ್ದಾರೆ. ಅವರು ಹೇಳಿರುವ ಹೇಳಿಕೆ ವೈರಲ್ ಆಗಿದೆ.

ಆಲಿಯಾ ಭಟ್ ಅವರು ‘ಕಾಫಿ ವಿತ್ ಕರಣ್​’ ಶೋದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ಅವರ ಹಳೆಯ ಹೇಳಿಕೆ ವೈರಲ್ ಆಗಿದೆ. ‘ಯಾವುದೇ ಕುಟುಂಬದಿಂದ ಬಂದರೂ ಕೊನೆಯಲ್ಲಿ ಅದು ನಮ್ಮ ಜರ್ನಿಯೇ ಆಗಿರುತ್ತದೆ. ನಿಮ್ಮ ತಂದೆ, ತಾಯಿ, ಅಜ್ಜ ಇದನ್ನು ಬದಲಾಯಿಸಲು ಸಾಧ್ಯವಿಲ್ಲ. ಸ್ಟಾರ್ ಮಕ್ಕಳಿಗೆ ಇದು ಸುಲಭ ಎಂದು ಹೇಳುವ ಎಲ್ಲ ಜನರ ಮುಖಕ್ಕೆ ಗುದ್ದಲು ಬಯಸುತ್ತೇನೆ’ ಎಂದು ಆಲಿಯಾ ಭಟ್ ಹೇಳಿದ್ದರು.

ಸೋನಮ್ ಕಪೂರ್, ಅನನ್ಯಾ ಪಾಂಡೆ ದೊಡ್ಡ ಹಿನ್ನೆಲೆ ಹೊಂದಿರುವವರು. ಆದರೆ, ಅವರಿಗೆ ತಮ್ಮ ತನವನ್ನು ಸಾಬೀತು ಮಾಡಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಅವರಿಗೆ ಈವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ. ನಟನೆಯ ಮೂಲಕ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಲು ಅವರ ಬಳಿ ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಅವರು ಹೆಚ್ಚು ಗುರುತಿಸಿಕೊಂಡಿಲ್ಲ. ಆದರೆ, ಆಲಿಯಾ ಭಟ್ ಇವರಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ

ಆಲಿಯಾ ಭಟ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ರಾಜಿ’, ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸೇರಿ ಅನೇಕ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಇತ್ತೀಚೆಗೆ ಅವರಿಗೆ ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಹಾಲಿವುಡ್​ ಚಿತ್ರರಂಗಕ್ಕೂ ಅವರು ಕಾಲಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್