Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ: ಭರ್ಜರಿ ಜಯಭೇರಿ ಬಾರಿಸಿದ ದಳಪತಿ ವಿಜಯ್​ ಫ್ಯಾನ್ಸ್​ ಕ್ಲಬ್​

 169 ಸ್ಥಾನಗಳ ಪೈಕಿ ವಿಜಯ್​ ಪಕ್ಷ 115 ಸ್ಥಾನಗಳನ್ನು ಗೆದ್ದಿದೆ. ಅಂದರೆ, ಶೇ. 68 ಸ್ಥಾನಗಳು ವಿಜಯ್​ ಫ್ಯಾನ್​ ಕ್ಲಬ್​ ಪಕ್ಷದ ಪಾಲಾಗಿದೆ.

ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ: ಭರ್ಜರಿ ಜಯಭೇರಿ ಬಾರಿಸಿದ ದಳಪತಿ ವಿಜಯ್​ ಫ್ಯಾನ್ಸ್​ ಕ್ಲಬ್​
ದಳಪತಿ ವಿಜಯ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 14, 2021 | 4:00 PM

ತಮಿಳುನಾಡಿನಲ್ಲಿ ರಾಜಕೀಯಕ್ಕೂ ಚಿತ್ರರಂಗಕ್ಕೂ ಉತ್ತಮ ನಂಟಿದೆ. ಚಿತ್ರರಂಗದಲ್ಲಿ ಫೇಮಸ್​ ಆದ ನಂತರದಲ್ಲಿ ಪಾಲಿಟಿಕ್ಸ್​ಗೆ ಎಂಟ್ರಿ ನೀಡುವ ಸಂಪ್ರದಾಯ ಅಲ್ಲಿ ಮೊದಲಿನಿಂದಲೂ ನಡೆದು ಬಂದಿದೆ. ಈಗ ದಳಪತಿ ವಿಜಯ್​ ರಾಜಕೀಯಕ್ಕೆ ಎಂಟ್ರಿ ಕೊಡುವುದಕ್ಕೂ ಮೊದಲೇ ಅವರ ಹೆಸರಿನಲ್ಲಿ ಕಟ್ಟಲ್ಪಟ್ಟ ಪಕ್ಷವು ತಮಿಳುನಾಡು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದೆ.

ವಿಜಯ್​ ತಂದೆ ಖ್ಯಾತ ನಿರ್ದೇಶಕ ಎಸ್​.ಎ. ಚಂದ್ರಶೇಖರ್​. ಅವರು ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅವರು ‘ಆಲ್​ ಇಂಡಿಯಾ ದಳಪತಿ ವಿಜಯ್​ ಮಕ್ಕಳ್​ ಇಯಕ್ಕಮ್​’ ಪಕ್ಷ ಆರಂಭಿಸಿದ್ದರು. ಆರಂಭದಲ್ಲಿ ಇದಕ್ಕೆ ವಿಜಯ್​ ಅವರೇ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಈಗ ಈ ಪಕ್ಷದ ಮೂಲಕ ಚುನಾವಣೆಗೆ ಸ್ಪರ್ಧೆ ಮಾಡಲು ಒಪ್ಪಿಗೆ ಸೂಚಿಸಿದ್ದರು ವಿಜಯ್​. ಅಂತೆಯೇ, ತಮಿಳುನಾಡಿನ 9 ಜಿಲ್ಲೆಗಳಲ್ಲಿ ನಡೆದ ಗ್ರಾಮೀಣ ಚುನಾವಣೆಯಲ್ಲಿ ವಿಜಯ್​ ಫ್ಯಾನ್​ ಕ್ಲಬ್​ ಭರ್ಜರಿ ಜಯಭೇರಿ ಬಾರಿಸಿದೆ.

169 ಸ್ಥಾನಗಳ ಪೈಕಿ ವಿಜಯ್​ ಪಕ್ಷ 115 ಸ್ಥಾನಗಳನ್ನು ಗೆದ್ದಿದೆ. ಅಂದರೆ, ಶೇ. 68 ಸ್ಥಾನಗಳು ವಿಜಯ್​ ಫ್ಯಾನ್​ ಕ್ಲಬ್​ ಪಕ್ಷದ ಪಾಲಾಗಿದೆ. ಈ ಗೆಲುವಿನ ಬಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಬುಸ್ಸಿ ಆನಂದ್​ ಮಾತನಾಡಿದ್ದಾರೆ. ‘ನಾವು 115 ಸ್ಥಾನಗಳನ್ನು ಗೆದ್ದಿದ್ದೇವೆ. 115 ಮಂದಿಯಲ್ಲಿ 45 ಮಹಿಳೆಯರು. ಚುನಾವಣೆಯಲ್ಲಿ ನಿಂತವರೆಲ್ಲರೂ ರೈತರು, ವಿದ್ಯಾರ್ಥಿಗಳು, ವ್ಯಾಪಾರಸ್ಥರು, ಲ್ಯಾಬ್​ ಟೆಕ್ನೀಷಿಯನ್ಸ್​ ಮತ್ತು ಶಾಲಾ ಶಿಕ್ಷಕರು’ ಎಂದಿದ್ದಾರೆ.

ರಾಜ್ಯ ರಾಜಕಾರಣಕ್ಕೆ ಹೋಲಿಕೆ ಮಾಡಿದರೆ ವಿಜಯ್​ ಫ್ಯಾನ್​ ಕ್ಲಬ್​ ಗೆದ್ದಿರುವುದು ತುಂಬಾ ಕಡಿಮೆ ಸ್ಥಾನಗಳು. ಆದರೆ, ಮೊದಲ ಚುನಾವಣೆಯಲ್ಲೇ ಇಷ್ಟು ದೊಡ್ಡ ಗೆಲುವು ಕಂಡಿರುವುದು ವಿಜಯ್​ ರಾಜಕೀಯ ಜೀವನದಲ್ಲಿ ಬಹಳ ಮಹತ್ವ ಪಡೆದುಕೊಳ್ಳುವ ಸಾಧ್ಯತೆ ಇದೆ.

ವಿಜಯ್​ ಅವರ ಬಳಿ ಬಂದ ಅನೇಕ ಅಭಿಮಾನಿಗಳು ಈ ಪಕ್ಷದ ಅಡಿಯಲ್ಲಿ ಚುನಾವಣೆಗೆ ಸ್ಪರ್ಧೆ ಮಾಡೋಕೆ ಒಪ್ಪಿಗೆ ನೀಡುವಂತೆ ಕೋರಿದ್ದರು. ಕೊನೆಯ ಕ್ಷಣದಲ್ಲಿ ವಿಜಯ್​ ಇದಕ್ಕೆ ಅನುಮತಿ ನೀಡಿದ್ದರು. ಈಗ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬಂದಿದೆ.

ಸಿನಿಮಾ ಬಗ್ಗೆ ಹೇಳೋದಾದರೆ, ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಇತ್ತೀಚೆಗೆ ಫಸ್ಟ್​ ಲುಕ್​ ರಿಲೀಸ್​ ಆಗಿತ್ತು.  ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್​ ದಿಲೀಪ್​ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಇದನ್ನೂ ಓದಿ: ದಳಪತಿ ವಿಜಯ್​ ಮತ್ತು ಮಹೇಶ್​ ಬಾಬು ಪತ್ನಿ ನಮ್ರತಾ ಹಳೇ ವಿಚಾರ ಎಳೆದು ತಂದ ಫ್ಯಾನ್ಸ್​

ತಂದೆ-ತಾಯಿ ವಿರುದ್ಧವೇ ಕೋರ್ಟ್​ ಮೆಟ್ಟಿಲೇರಿದ ನಟ ದಳಪತಿ ವಿಜಯ್; ಇದು ಸರಿ ಇದೆ ಎಂದ ಫ್ಯಾನ್ಸ್​​

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ