AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನಲ್ಲಿ ಬರ್ತಿದೆ ‘ಉಗ್ರಂ’ ಸಿನಿಮಾ; ಹೀರೋ ಯಾರು? ನಿರ್ದೇಶನ ಯಾರದ್ದು?

Ugram Movie: ತೆಲುಗು ಸಿನಿಮಾದ ಶೀರ್ಷಿಕೆ ವಿನ್ಯಾಸ ಕನ್ನಡದ ‘ಉಗ್ರಂ’ ರೀತಿಯೇ ಇದೆ. ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದ್ದು, ಅಲ್ಲರಿ ನರೇಶ್​ ಅವರು ಆಕ್ರೋಶ ಭರಿತವಾಗಿ ಪೋಸ್​ ನೀಡಿದ್ದಾರೆ.

ತೆಲುಗಿನಲ್ಲಿ ಬರ್ತಿದೆ ‘ಉಗ್ರಂ’ ಸಿನಿಮಾ; ಹೀರೋ ಯಾರು? ನಿರ್ದೇಶನ ಯಾರದ್ದು?
ಅಲ್ಲರಿ ನರೇಶ್
TV9 Web
| Edited By: |

Updated on:Aug 22, 2022 | 12:16 PM

Share

ಸಿನಿಮಾ ಗೆಲ್ಲಬೇಕು ಎಂದರೆ ಹಲವು ವಿಚಾರಗಳು ಮುಖ್ಯವಾಗುತ್ತವೆ. ಶೀರ್ಷಿಕೆಯಂತೂ ಆಕರ್ಷಕವಾಗಿ ಇರಬೇಕು. ಸಖತ್​ ಕ್ಯಾಚಿ ಆದಂತಹ ಟೈಟಲ್​ಗಳಿಗೆ ಸದಾ ಬೇಡಿಕೆ ಇದ್ದೇ ಇರುತ್ತದೆ. ಬೇರೆ ಭಾಷೆಯಲ್ಲಿ ಸೂಪರ್ ಹಿಟ್​ ಆದ ಸಿನಿಮಾದ ಶೀರ್ಷಿಕೆಯನ್ನು ಇಟ್ಟುಕೊಂಡು ಇನ್ನೊಂದು ಭಾಷೆಯಲ್ಲಿ ಚಿತ್ರ ಮಾಡಿದ ಉದಾಹರಣೆಗಳು ಕೂಡ ಸಾಕಷ್ಟಿದೆ. ಈಗ ತೆಲುಗು ಮಂದಿ ‘ಉಗ್ರಂ’ (Ugram Movie) ಟೈಟಲ್​ ಮೇಲೆ ಕಣ್ಣು ಇಟ್ಟಿದ್ದಾರೆ. ಕನ್ನಡದಲ್ಲಿ ನಟ ಶ್ರೀಮುರಳಿ ಅವರಿಗೆ ಹೊಸ ಇಮೇಜ್​ ನೀಡಿದ ಚಿತ್ರ ಇದು. ಪ್ರಶಾಂತ್​ ನೀಲ್​ (Prashanth Neel) ನಿರ್ದೇಶನದ ಚೊಚ್ಚಲ ಸಿನಿಮಾ ‘ಉಗ್ರಂ’. ಈಗ ಇದೇ ಶೀರ್ಷಿಕೆಯನ್ನು ಬಳಸಿಕೊಂಡು ತೆಲುಗಿನಲ್ಲಿ ಒಂದು ಸಿನಿಮಾ ಮಾಡಲಾಗುತ್ತಿದೆ. ಖ್ಯಾತ ನಟ ಅಲ್ಲರಿ ನರೇಶ್​ (Allari Naresh) ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಅಲ್ಲರಿ ನರೇಶ್​ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಯಶಸ್ಸು ಸಿಕ್ಕಿರಲಿಲ್ಲ. 2021ರ ಫೆಬ್ರವರಿಯಲ್ಲಿ ತೆರೆಕಂಡ ‘ನಾಂದಿ’ ಸಿನಿಮಾ ಅವರಿಗೆ ಗೆಲುವು ತಂದುಕೊಟ್ಟಿತು. ಆ ಚಿತ್ರಕ್ಕೆ ವಿಜಯ್​ ಕನಕಮೆಡಲ ನಿರ್ದೇಶನ ಮಾಡಿದ್ದರು. ಈಗ ಇದೇ ನಟ-ನಿರ್ದೇಶಕರು ಮತ್ತೆ ಒಂದಾಗಿ ಸಿನಿಮಾ ಮಾಡುತ್ತಿದ್ದಾರೆ. ಅವರ ಹೊಸ ಚಿತ್ರಕ್ಕೆ ‘ಉಗ್ರಂ’ ಎಂದು ಹೆಸರು ಇಡಲಾಗಿದೆ. ಈ ಸಿನಿಮಾದ ಕಥೆ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ
Image
Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​
Image
ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?
Image
ನಾಯಕಿ ಪ್ರಧಾನ ಸಿನಿಮಾ ಮಾಡ್ತಾರಾ ಪ್ರಶಾಂತ್​ ನೀಲ್​? ಇಂಥ ಗಾಸಿಪ್​ ಹರಡಲು ಕಾರಣ ಇಲ್ಲಿದೆ..
Image
3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ

ಕನ್ನಡದ ‘ಉಗ್ರಂ’ ಸಿನಿಮಾಗೂ ಈ ತೆಲುಗು ಚಿತ್ರಕ್ಕೂ ಏನಾದರೂ ಲಿಂಕ್​ ಇರಬಹುದೇ ಎಂಬ ಕೌತುಕ ಮನೆ ಮಾಡಿದೆ. ಈ ಸಿನಿಮಾದ ಶೀರ್ಷಿಕೆ ವಿನ್ಯಾಸ ಕೂಡ ಕನ್ನಡದ ‘ಉಗ್ರಂ’ ರೀತಿಯೇ ಇದೆ. ಸದ್ಯ ಈ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಅಲ್ಲರಿ ನರೇಶ್​ ಅವರು ಆಕ್ರೋಶ ಭರಿತವಾಗಿ ಪೋಸ್​ ನೀಡಿದ್ದಾರೆ. ಅವರ ಬೆನ್ನಿಗೆ ಚಾಕು ಹಾಕಲಾಗಿದೆ. ಮೈಯೆಲ್ಲ ರಕ್ತಸಿಕ್ತ ಆಗಿದ್ದರೂ ಕೂಡ ಅವರು ಆರ್ಭಟಿಸುತ್ತಿರುವ ರೀತಿಯಲ್ಲಿ ಈ ಫಸ್ಟ್​ ಲುಕ್​ ಮೂಡಿಬಂದಿದೆ. ಆ ಮೂಲಕ ‘ಉಗ್ರಂ’ ಸಿನಿಮಾ ಕೌತುಕ ಮೂಡಿಸಿದೆ.

ಕನ್ನಡದ ‘ಉಗ್ರಂ’ ಚಿತ್ರ 2014ರಲ್ಲಿ ತೆರೆಕಂಡಿತು. ಮೊದಲ ನಿರ್ದೇಶನದಲ್ಲೇ ಪ್ರಶಾಂತ್​ ನೀಲ್​ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಆ ಸಿನಿಮಾದ ಕಥೆಯನ್ನೇ ಇಟ್ಟುಕೊಂಡು ಅವರು ‘ಸಲಾರ್​’ ಚಿತ್ರ ಮಾಡುತ್ತಿದ್ದಾರೆ ಎಂಬ ಗಾಸಿಪ್​ ಕೂಡ ಇದೆ. ಅದರ ಬೆನ್ನಲೇ ‘ಉಗ್ರಂ’ ಶೀರ್ಷಿಕೆ ಟಾಲಿವುಡ್​ನಲ್ಲಿ ಮರುಬಳಕೆ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:16 pm, Mon, 22 August 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ