AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pearl V Puri: ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಕಿರುತೆರೆ ನಟ ಪರ್ಲ್​ ವಿ. ಪುರಿಗೆ ಸಿಕ್ತು ರಿಲೀಫ್​

Pearl V Puri Granted Bail: ಸೆಟ್​ನಲ್ಲಿಯೇ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪ ಪರ್ಲ್​ ವಿರುದ್ಧ ಕೇಳಿ ಬಂದಿತ್ತು. ಜೂನ್​ ನಾಲ್ಕರಂದು ಪೊಲೀಸರು ಅವರನ್ನು ಬಂಧಿಸಿದ್ದರು. ಅಲ್ಲದೆ, ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.

Pearl V Puri: ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಕಿರುತೆರೆ ನಟ ಪರ್ಲ್​ ವಿ. ಪುರಿಗೆ ಸಿಕ್ತು ರಿಲೀಫ್​
ಪರ್ಲ್​ ವಿ. ಪುರಿ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on:Jun 15, 2021 | 5:07 PM

Share

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಕಿರುತೆರೆ ನಟ ಪರ್ಲ್​ ವಿ. ಪುರಿ ಅರೆಸ್ಟ್​ ಆಗಿದ್ದರು. ಈಗ ವಾಸೈ ನ್ಯಾಯಾಲಯ ಜಾಮೀನು ನೀಡಿದೆ. ಈ ಮೂಲಕ ನಟನಿಗೆ ಸಣ್ಣ ರಿಲೀಫ್​ ಸಿಕ್ಕಂತಾಗಿದೆ. ಸೆಟ್​ನಲ್ಲಿಯೇ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪ ಪರ್ಲ್​ ವಿರುದ್ಧ ಕೇಳಿ ಬಂದಿತ್ತು. ಜೂನ್​ ನಾಲ್ಕರಂದು ಪೊಲೀಸರು ಅವರನ್ನು ಬಂಧಿಸಿದ್ದರು. ಅಲ್ಲದೆ, ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಈಗ ವಾಸೈ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಪರ್ಲ್​ ಅವರು ಜಾಮೀನು ಕೋರಿ ಜೂನ್​ 7ರಂದು ಮೇಲ್ಮನವಿ ಸಲ್ಲಿಕೆ ಮಾಡಿದ್ದರು. ಜೂನ್​ 15ರಂದು ಅರ್ಜಿ ವಿಚಾರಣೆ ನಿಗದಿ ಮಾಡಲಾಗಿತ್ತು. ಈಗ ವಿಚಾರಣೆ ನಡೆಸಿ ನ್ಯಾಯಾಲಯ ಬೇಲ್​ ನೀಡಿದೆ. ಈ ಮೂಲಕ 11 ದಿನಗಳ ಜೈಲು ವಾಸದ ನಂತರದಲ್ಲಿ ಅವರು ಹೊರ ಬರುತ್ತಿದ್ದಾರೆ.

ಪರ್ಲ್​ ಅವರನ್ನು ಬಂಧಿಸಿದ ಬೆನ್ನಲ್ಲೇ ಪರ-ವಿರೋಧ ಚರ್ಚೆಗಳು ಸಾಕಷ್ಟು ನಡೆದಿದ್ದವು. ದಿವ್ಯಾ ಕುಮಾರ್, ಏಕ್ತಾ ಕಪೂರ್ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಪರ್ಲ್​ ಅವರನ್ನು ಬೆಂಬಲಿಸಿದ್ದರು. ಈ ಆರೋಪ ಒಂದು ಷಢ್ಯಂತ್ರ  ಎಂದು ಕರೆದಿದ್ದರು. ಇನ್ನೂ, ಕೆಲವರು ಪರ್ಲ್​ಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದರು.

‘2019ರಲ್ಲಿ ಶೋ ಒಂದರ ಶೂಟಿಂಗ್ ವೇಳೆ ತನ್ನ ಮಗಳ ಮೇಲೆ ಪರ್ಲ್​ ಅವರಿಂದ ಅತ್ಯಾಚಾರವಾಗಿದೆ. ಇದಕ್ಕೆ ನ್ಯಾಯ ಒದಗಿಸಬೇಕು’ ಎಂದು ಸಂತ್ರಸ್ತೆಯ ತಂದೆ ದೂರು ನೀಡಿದ್ದರು. ಆದರೆ, ಸಂತ್ರಸ್ತೆಯ ತಾಯಿ ಏಕ್ತಾ ಶರ್ಮಾ ಅವರು ಪರ್ಲ್ ಪರ ಮಾತನಾಡಿದ್ದರು. ಏಕ್ತಾ ಶರ್ಮಾ ಮತ್ತು ಅವರ ಪತಿ ಹಲವು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಮಗಳನ್ನು ತಮ್ಮ ಸುಪರ್ದಿಗೆ ಪಡೆಯಬೇಕು ಎಂಬ ಕಾರಣಕ್ಕೆ ಇಬ್ಬರ ನಡುವೆ ಜಟಾಪಟಿ ನಡೆಯುತ್ತಲೇ ಬಂದಿದೆ. ಅದೇ ಕಾರಣಕ್ಕಾಗಿ ಏಕ್ತಾ ಶರ್ಮಾ ಹೆಸರಿಗೆ ಮಸಿ ಬಳಿಯಲು ಅವರ ಗಂಡ ಈ ಸುಳ್ಳು ಕೇಸ್​ ದಾಖಲಿಸಿದ್ದಾರೆ ಎನ್ನಲಾಗಿತ್ತು.

ಇದನ್ನೂ ಓದಿ:

ಅಪ್ರಾಪ್ತೆ ಮೇಲೆ ರೇಪ್​ ಮಾಡಿದ ಆರೋಪ ಹೊತ್ತ ನಟ ಪರ್ಲ್​ ವಿ. ಪುರಿಗೆ ಸಂತ್ರಸ್ತೆಯ ತಾಯಿ ಬೆಂಬಲ; ಬಿಗ್​ ಟ್ವಿಸ್ಟ್​

Published On - 4:20 pm, Tue, 15 June 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ