Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪು ಮಾತಾಡಿದೆ, ಕ್ಷಮಿಸಿ: ರಾಮ್ ಚರಣ್ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಅಲ್ಲು ಅರವಿಂದ್

ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಅವರ ಮೇಲೆ ರಾಮ್ ಚರಣ್ ಅಭಿಮಾನಿಗಳು ಸಖತ್ ಕೋಪ ಮಾಡಿಕೊಂಡಿದ್ದರು. ಅದಕ್ಕಾಗಿ ಅಲ್ಲು ಅರವಿಂದ್ ಈಗ ಕ್ಷಮೆ ಕೇಳಿದ್ದಾರೆ. ತಮ್ಮ ಮಾತಿನ ಹಿಂದೆ ಬೇರೆ ಉದ್ದೇಶ ಇರಲಿಲ್ಲ ಎಂದು ಅವರು ಹೇಳಿದ್ದಾರೆ. ‘ತಂಡೇಲ್’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ತಪ್ಪು ಮಾತಾಡಿದೆ, ಕ್ಷಮಿಸಿ: ರಾಮ್ ಚರಣ್ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಅಲ್ಲು ಅರವಿಂದ್
Allu Aravind, Ram Charan
Follow us
ಮದನ್​ ಕುಮಾರ್​
|

Updated on: Feb 10, 2025 | 9:41 PM

ಸೆಲೆಬ್ರಿಟಿಗಳು ಆಡುವ ಒಂದೊಂದು ಮಾತು ಕೂಡ ಸುದ್ದಿ ಆಗುತ್ತದೆ. ಅಭಿಮಾನಿಗಳು ಎಲ್ಲವನ್ನೂ ಗಮನಿಸುತ್ತಾ ಇರುತ್ತಾರೆ. ತಮ್ಮ ನೆಚ್ಚಿನ ಹೀರೋ ಬಗ್ಗೆ ಯಾರಾದರೂ ಇಲ್ಲಸಲ್ಲದ್ದು ಮಾತನಾಡಿದರೆ ಫ್ಯಾನ್ಸ್ ಗರಂ ಆಗುತ್ತಾರೆ. ಅದಕ್ಕೆ ಇಲ್ಲಿದೆ ಲೇಟೆಸ್ಟ್​ ಉದಾಹರಣೆ. ಕೆಲವೇ ದಿನಗಳ ಹಿಂದೆ ರಾಮ್ ಚರಣ್ ಬಗ್ಗೆ ಅಲ್ಲು ಅರವಿಂದ್ ಅವರು ಒಂದು ಹೇಳಿಕೆ ನೀಡಿದ್ದರು. ‘ಗೇಮ್ ಚೇಂಜರ್’ ಸಿನಿಮಾದ ಸೋಲಿನ ಬಗ್ಗೆ ಅವರು ಮಾತನಾಡಿದ್ದರು. ಅದರಿಂದ ರಾಮ್ ಚರಣ್ ಅಭಿಮಾನಿಗಳು ಸಿಟ್ಟಾಗಿದ್ದರು. ಈಗ ರಾಮ್​ ಚರಣ್ ಫ್ಯಾನ್ಸ್​ ಬಳಿ ಅಲ್ಲು ಅರವಿಂದ್ ಕ್ಷಮೆ ಕೇಳಿದ್ದಾರೆ.

‘ತಂಡೇಲ್’ ಸಿನಿಮಾವನ್ನು ಅಲ್ಲು ಅರವಿಂದ್ ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಪ್ರೀ-ರಿಲೀಸ್ ಇವೆಂಟ್​ನಲ್ಲಿ ಮಾತನಾಡುವಾಗ ಅವರು ‘ಗೇಮ್ ಚೇಂಜರ್’ ಸಿನಿಮಾದ ನಿರ್ಮಾಪಕ ದಿಲ್ ರಾಜು ಬಗ್ಗೆ ವಿಷಯ ಪ್ರಸ್ತಾಪಿಸಿದ್ದರು. ‘ಒಂದೇ ವಾರದ ಅಂತರದಲ್ಲಿ ದಿಲ್ ರಾಜು ಅವರು ಸೋಲು ಮತ್ತು ಗೆಲುವನ್ನು ಕಂಡಿದ್ದಾರೆ’ ಎಂದು ಹೇಳಿದ್ದರು. ಈ ಮಾತಿನ ಅರ್ಥ ಇಷ್ಟೇ. ದಿಲ್ ರಾಜು ನಿರ್ಮಾಣದ ‘ಗೇಮ್ ಚೇಂಜರ್​’ ಸಿನಿಮಾ ಸೋತಿತು, ‘ಸಂಕ್ರಾಂತಿಕಿ ವಸ್ತುನಾಮ್’ ಸಿನಿಮಾ ಗೆದ್ದಿದೆ.

ಆದರೆ ಈ ಮಾತನ್ನು ರಾಮ್ ಚರಣ್​ ಫ್ಯಾನ್ಸ್ ಸಹಜವಾಗಿ ಸ್ವೀಕರಿಸಲಿಲ್ಲ. ‘ಗೇಮ್ ಚೇಂಜರ್’ ಚಿತ್ರದ ಸೋಲನ್ನು ಈ ರೀತಿ ಲೇವಡಿ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಫ್ಯಾನ್ಸ್ ಗರಂ ಆದರು. ಸೋಶಿಯಲ್ ಮೀಡಿಯಾದಲ್ಲಿ ಅಲ್ಲು ಅರವಿಂದ್ ಅವರನ್ನು ಟ್ರೋಲ್ ಮಾಡಲಾಯಿತು. ಹಾಗಾಗಿ ಈ ವಿಷಯಕ್ಕೆ ಅಲ್ಲು ಅರವಿಂದ್ ಈಗ ಸ್ಪಷ್ಟನೆ ನೀಡಿದ್ದಾರೆ. ಈ ವಿವಾದವನ್ನು ಇಲ್ಲಿಗೆ ಬಿಟ್ಟು ಬಿಡಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಂಗ್ಲಿಷ್​ನಲ್ಲೂ ಬಂತು ‘ಪುಷ್ಪ 2’ ಸಿನಿಮಾ; ವಿಶ್ವಾದ್ಯಂತ ಅಲ್ಲು ಅರ್ಜುನ್ ಹವಾ

‘ಇತ್ತೀಚೆಗೆ ಹಿರಿಯ ಪತ್ರಕರ್ತರೊಬ್ಬರು ಈ ವಿಷಯದ ಬಗ್ಗೆ ಸ್ಪಷ್ಟನೆ ನೀಡವಂತೆ ಸೂಚಿಸಿದರು. ಹಾಗಾಗಿ ಗೊಂದಲ ಪರಿಹರಿಸುತ್ತೇನೆ. ಕೇವಲ ಒಂದು ವಾರದಲ್ಲಿ ದಿಲ್ ರಾಜು ಏಳು-ಬೀಳು ಎರಡನ್ನೂ ಕಂಡಿದ್ದಾರೆ ಎಂಬುದನ್ನು ಹೇಳುವುದು ನನ್ನ ಮಾತಿನ ಉದ್ದೇಶ ಆಗಿತ್ತು. ಆಕಸ್ಮಿಕವಾಗಿ ನಾನು ಆ ಹೇಳಿಕೆ ನೀಡಿದೆ. ರಾಮ್ ಚರಣ್ ಬಗ್ಗೆ ನಾನು ಕೆಟ್ಟದಾಗಿ ಮಾತನಾಡಿದೆ ಅಂತ ಅಭಿಮಾನಿಗಳು ನನ್ನನ್ನು ಟ್ರೋಲ್ ಮಾಡಿದರು. ನನ್ನ ಮಾತಿಗೆ ನಾನು ಕ್ಷಮೆ ಕೇಳುತ್ತೇನೆ. ರಾಮ್ ಚರಣ್ ಕೂಡ ನನ್ನ ಮಗನಿದ್ದಂತೆ. ನಮ್ಮ ನಡುವೆ ಉತ್ತಮ ಬಾಂಧವ್ಯ ಇದೆ. ಇದನ್ನು ಇಲ್ಲಿಗೆ ಬಿಡಿ. ನಾನು ಮಾತನಾಡಿದ್ದು ಸರಿಯಲ್ಲ ಎಂಬುದು ನನಗೆ ತಿಳಿದಿದೆ’ ಎಂದು ಅಲ್ಲು ಅರವಿಂದ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ