AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೊಬೆಲ್​ ವಿಶ್ವ ದಾಖಲೆ ಪಟ್ಟಿ ಸೇರಿದ ಅಲ್ಲು ಅರ್ಜುನ್​ ಮಗಳು ಅಲ್ಲು ಅರ್ಹಾ ಸಾಧನೆ

ಅಲ್ಲು ಅರ್ಹಾ ಕುಟುಂಬದ ಸದಸ್ಯರ ಎದುರು ಚೆಸ್​ ಆಡಿದ್ದಾಳೆ. ಈ ವಿಡಿಯೋವನ್ನು ಅಲ್ಲು ಅರ್ಜುನ್​ ಪತ್ನಿ ಸ್ನೇಹಾ ರೆಡ್ಡಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅಲ್ಲು ಅರ್ಹಾಗೆ ನೊಬೆಲ್​ ವರ್ಲ್ಡ್​ ರೆಕಾರ್ಡ್​ ನೀಡಿ ಗೌರವಿಸಲಾಗಿದೆ.

ನೊಬೆಲ್​ ವಿಶ್ವ ದಾಖಲೆ ಪಟ್ಟಿ ಸೇರಿದ ಅಲ್ಲು ಅರ್ಜುನ್​ ಮಗಳು ಅಲ್ಲು ಅರ್ಹಾ ಸಾಧನೆ
ಅಲ್ಲು ಅರ್ಹಾ-ಅಲ್ಲು ಅರ್ಜುನ್​ ದಂಪತಿ
TV9 Web
| Edited By: |

Updated on:Nov 22, 2021 | 6:19 PM

Share

ಟಾಲಿವುಡ್​ ಸ್ಟಾರ್​ ನಟ ಅಲ್ಲು ಅರ್ಜುನ್​ಗೆ ದೊಡ್ಡ ಅಭಿಮಾನ ಬಳಗ ಇದೆ. ಅವರ ಇಡೀ ಕುಟುಂಬವೇ ಹಲವು ದಶಕಗಳಿಂದ ಸಿನಿಮಾ ಕೆಲಸಗಳಲ್ಲಿ ನಿರತವಾಗಿದೆ. ಈಗ ಅಲ್ಲು​ ಫ್ಯಾಮಿಲಿಯ ನಾಲ್ಕನೇ ತಲೆಮಾರಿನ ಪ್ರತಿಭೆ, ಅಂದರೆ ಅಲ್ಲು ಅರ್ಜುನ್​ ಅವರ ಪುತ್ರಿ ಅಲ್ಲು ಅರ್ಹಾ ಕೂಡ ಚಿತ್ರರಂಗಕ್ಕೆ ಬರುತ್ತಿದ್ದಾಳೆ. ಅವಳು ಇತ್ತೀಚೆಗೆ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ. ಈ ಮಧ್ಯೆ ಅವಳ ಹೆಸರಲ್ಲಿ ನೊಬೆಲ್ ದಾಖಲೆ ನಿರ್ಮಾಣ ಆಗಿದೆ.  ಅತಿ ಚಿಕ್ಕ ವಯಸ್ಸಿಗೆ ಅಲ್ಲು ಅರ್ಹಾ ಚೆಸ್​ ಟ್ರೇನರ್​ ಆಗಿದ್ದಾಳೆ.

ಅಲ್ಲು ಅರ್ಹಾ ಕುಟುಂಬದ ಸದಸ್ಯರ ಎದುರು ಚೆಸ್​ ಆಡಿದ್ದಾಳೆ. ಈ ವಿಡಿಯೋವನ್ನು ಅಲ್ಲು ಅರ್ಜುನ್​ ಪತ್ನಿ ಸ್ನೇಹಾ ರೆಡ್ಡಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅಲ್ಲು ಅರ್ಹಾಗೆ ನೊಬೆಲ್​ ವರ್ಲ್ಡ್​ ರೆಕಾರ್ಡ್​ ನೀಡಿ ಗೌರವಿಸಲಾಗಿದೆ. ಇದು ಅಲ್ಲು ಅರ್ಜುನ್​ ಕುಟುಂಬಕ್ಕೆ ಖುಷಿ ನೀಡಿದೆ.

ಅಲ್ಲು ಅರ್ಜುನ್​ ಪುತ್ರಿ ಅಲ್ಲು ಅರ್ಹಾಗೆ ಇನ್ನೂ 5ರ ಪ್ರಾಯ. ಈ ಪುಟಾಣಿಗೆ ಸಮಂತಾ ಅಕ್ಕಿನೇನಿ ನಟನೆಯ ‘ಶಾಕುಂತಲಂ’ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ಪೌರಾಣಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಮಂತಾ ಅವರು ಶಕುಂತಲೆಯ ಪಾತ್ರ ಮಾಡಿದ್ದು, ಶಕುಂತಲೆ ಪುತ್ರ ಭರತನ ಪಾತ್ರಕ್ಕೆ ಅಲ್ಲು ಅರ್ಹಾ ಬಣ್ಣ ಹಚ್ಚಿದ್ದಾಳೆ.

‘ಶಾಕುಂತಲಂ ಸಿನಿಮಾ ಮೂಲಕ ಅಲ್ಲು ಕುಟುಂಬದ ನಾಲ್ಕನೇ ತಲೆಮಾರಿನ ಅಲ್ಲು ಅರ್ಹಾ ಚಿತ್ರಕ್ಕೆ ಕಾಲಿಡುತ್ತಿರುವುದು ನಮಗೆ ಹೆಮ್ಮೆಯ ಕ್ಷಣ. ಇಂಥ ಸುಂದರ ಸಿನಿಮಾದಲ್ಲಿ ನನ್ನ ಮಗಳಿಗೆ ಚೊಚ್ಚಲ ಅವಕಾಶ ನೀಡಿರುವುದಕ್ಕೆ ನಿರ್ದೇಶಕ ಗುಣಶೇಖರ್ ಅವರಿಗೆ ಧನ್ಯವಾದಗಳು. ನನ್ನ ಮಗಳು ಮೊದಲ ಸಿನಿಮಾದಲ್ಲೇ ಸಮಂತಾ ಅಕ್ಕಿನೇನಿ ಜೊತೆ ಅಭಿನಯಿಸಿದ್ದನ್ನು ನೋಡಲು ಖುಷಿ ಆಗುತ್ತದೆ. ಶಾಕುಂತಲಂ ತಂಡದ ಎಲ್ಲ ಕಲಾವಿದರು ಮತ್ತು ತಾಂತ್ರಿಕ ವರ್ಗಕ್ಕೆ ನನ್ನ ಶುಭ ಹಾರೈಕೆಗಳು’ ಎಂದು ಅಲ್ಲು ಅರ್ಜುನ್​ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: ಮಗಳ ಸಿನಿಮಾ ಶೂಟಿಂಗ್​ ನೋಡಲು ಸೆಟ್​ಗೆ ಬಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ

ಸಂಕಷ್ಟದಲ್ಲಿದ್ದ ಅಲ್ಲು ಅರ್ಜುನ್​ ಸಹಾಯಕ್ಕೆ ನಿಂತ ‘ಕೆಜಿಎಫ್​ 2’ ನಟಿ ರವೀನಾ ಟಂಡನ್​ ಕುಟುಂಬ

Published On - 6:09 pm, Mon, 22 November 21

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!