ಅಲ್ಲು ಅರ್ಜುನ್ ಮನೆ ಎದುರು ಜಮಾಯಿಸಿದ ಅಭಿಮಾನಿಗಳಿಗೆ ಪೊಲೀಸರ ಲಾಠಿ ಏಟು

‘ಪುಷ್ಪ 2’ ಸಿನಿಮಾದ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರಿಗೆ ಹುಟ್ಟುಹಬ್ಬದ ವಿಶ್ ಮಾಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಮನೆ ಎದುರು ಜಮಾಯಿಸಿದ್ದಾರೆ. ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಲಾಠಿ ಬೀಸಬೇಕಾಯಿತು. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಅಲ್ಲು ಅರ್ಜುನ್ ಮನೆ ಎದುರು ಜಮಾಯಿಸಿದ ಅಭಿಮಾನಿಗಳಿಗೆ ಪೊಲೀಸರ ಲಾಠಿ ಏಟು
Allu Arjun Birthday Celebration

Updated on: Apr 08, 2026 | 7:57 PM

ತೆಲುಗು ಚಿತ್ರರಂಗದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಇಂದು (ಏಪ್ರಿಲ್ 8) 44ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮಂಗಳವಾರ (ಏಪ್ರಿಲ್ 7) ರಾತ್ರಿಯಿಂದಲೇ ದೇಶದ ವಿವಿಧ ಮೂಲೆಗಳಿಂದ ಬಂದ ಸಾವಿರಾರು ಅಭಿಮಾನಿಗಳು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ನಟನ ನಿವಾಸದ ಮುಂದೆ ಜಮಾಯಿಸಿದ್ದರು. ಈ ವೇಳೆ ಜನದಟ್ಟಣೆ ಮಿತಿಮೀರಿದ ಕಾರಣ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ (Lathi Charge) ನಡೆಸಬೇಕಾಯಿತು. ಸೋಶಿಯಲ್ ಮೀಡಿಯಾದಲ್ಲಿ ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ತಮ್ಮ ನೆಚ್ಚಿನ ನಟನಿಗೆ ಶುಭಾಶಯ ಕೋರಲು ಮಂಗಳವಾರ ರಾತ್ರಿಯೇ ಅಭಿಮಾನಿಗಳು ಫಲಕ ಮತ್ತು ಉಡುಗೊರೆಗಳೊಂದಿಗೆ ಸಾಲುಗಟ್ಟಿ ನಿಂತಿದ್ದರು. ಅಭಿಮಾನಿಗಳ ಕೂಗಾಟ ಮತ್ತು ನೂಕುನುಗ್ಗಲು ಹೆಚ್ಚಾದಾಗ, ಅಲ್ಲು ಅರ್ಜುನ್ ಅವರ ಖಾಸಗಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಹರಸಾಹಸ ಪಡಬೇಕಾಯಿತು. ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಬುಧವಾರ ಬೆಳಿಗ್ಗೆ ಅಲ್ಲು ಅರ್ಜುನ್ ಅವರು ತಮ್ಮ ಮನೆಯಿಂದ ಹೊರಬಂದು ಅಭಿಮಾನಿಗಳಿಗೆ ದರ್ಶನ ನೀಡಿದರು. ಈ ವೇಳೆ ಅಭಿಮಾನಿಯೊಬ್ಬರು ‘ಪುಷ್ಪ 2: ದಿ ರೂಲ್’ ಸಿನಿಮಾದ ಜಾತ್ರೆ ಗೆಟಪ್‌ನಲ್ಲಿ ಬಂದು ಎಲ್ಲರ ಗಮನ ಸೆಳೆದರು. ಅಭಿಮಾನಿಗಳ ಪ್ರೀತಿಗೆ ಮನಸೋತ ಅಲ್ಲು ಅರ್ಜುನ್, ಕಾಂಪೌಂಡ್ ಗೋಡೆಯ ಮೇಲೆ ನಿಂತು ಕೈ ಮುಗಿದು ಎಲ್ಲರಿಗೂ ಧನ್ಯವಾದ ತಿಳಿಸಿದರು. ಅಷ್ಟೇ ಅಲ್ಲದೆ, ಹತ್ತಿರಕ್ಕೆ ಬಂದು ಅಭಿಮಾನಿಗಳ ಕೈ ಮುಟ್ಟಿ ಸಂಭ್ರಮ ಹಂಚಿಕೊಂಡರು.

‘ನಿಮ್ಮ ಪ್ರೀತಿ ಮತ್ತು ಹಾರೈಕೆಗಳಿಗೆ ನಾನು ಸದಾ ಋಣಿ. ಇಷ್ಟು ದೂರದಿಂದ ಬಂದು ನನಗೆ ಶುಭ ಕೋರುತ್ತಿರುವುದಕ್ಕೆ ಧನ್ಯವಾದಗಳು’ ಎಂದು ಅಲ್ಲು ಅರ್ಜುನ್ ಅವರು ಅಭಿಮಾನಿಗಳ ಪ್ರೀತಿಗೆ ಪ್ರತಿಕ್ರಿಯಿಸಿದ್ದಾರೆ. ಆಂಧ್ರ ಮತ್ತು ತೆಲಂಗಾಣದಲ್ಲಿ ಮಾತ್ರವಲ್ಲದೇ ಬೇರೆ ರಾಜ್ಯಗಳಲ್ಲಿ ಮತ್ತು ವಿದೇಶದಲ್ಲಿ ಕೂಡ ಅಲ್ಲು ಅರ್ಜುನ್ ಅವರಿಗೆ ಅಭಿಮಾನಿಗಳು ಇದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಬೆಳೆಯಲು ಈ ಎಲ್ಲಾ ವ್ಯಕ್ತಿಗಳು ಕಾರಣ

ಅಲ್ಲು ಅರ್ಜುನ್ ಅವರು ಈಗ ನಿರ್ದೇಶಕ ಅಟ್ಲಿ ಜೊತೆಗಿನ ಹೊಸ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಆ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ‘ರಾಕಾ’ ಎಂದು ಶೀರ್ಷಿಕೆ ಇಡಲಾಗಿದೆ. ಅಲ್ಲು ಅರ್ಜುನ್ ಅವರ ಲುಕ್ ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us