AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ಸ್ಟಾರ್ ಆಗಿ ಬೆಳೆಯುತ್ತಿರೋ ಈ ಹೀರೋಗೆ ಚಾನ್ಸ್​ ಕೊಟ್ಟ ಅಲ್ಲು-ಅಟ್ಲಿ

ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಅಟ್ಲಿ ಅವರ ಮುಂಬರುವ ಚಿತ್ರದ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದೆ. ಈ ಚಿತ್ರದಲ್ಲಿ ತಮಿಳಿನ ಯುವ ಹೀರೋ ಎರಡನೇ ನಾಯಕನಾಗಿ ಅಭಿನಯಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಮೊದಲು ಈ ಕಥೆಯನ್ನು ಸಲ್ಮಾನ್ ಖಾನ್ ಗೆ ಹೇಳಲಾಗಿತ್ತು. ಆದರೆ ಅದು ಹೊಂದಿಕೆಯಾಗದ ಕಾರಣ ದಕ್ಷಿಣಕ್ಕೆ ತರಲಾಗಿದೆ.

​ಸ್ಟಾರ್ ಆಗಿ ಬೆಳೆಯುತ್ತಿರೋ ಈ ಹೀರೋಗೆ ಚಾನ್ಸ್​ ಕೊಟ್ಟ ಅಲ್ಲು-ಅಟ್ಲಿ
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Mar 06, 2025 | 7:34 AM

Share

ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಅಟ್ಲಿ ಒಟ್ಟಾಗಿ ಸಿನಿಮಾ ಮಾಡುತ್ತಿರುವ ವಿಚಾರ ಜೋರಾಗಿ ಚರ್ಚೆಯಲ್ಲಿ ಇದೆ. ಈ ಸಿನಿಮಾದ ಕಥೆ ಮೊದಲು ಸಲ್ಮಾನ್ ಖಾನ್​ಗೆ (Salman Khan) ಹೇಳಲಾಗಿತ್ತು. ಆದರೆ, ಸರಿಯಾಗಿ ಹೊಂದಿಕೆ ಆಗದ ಕಾರಣ ಅದನ್ನು ಈಗ ದಕ್ಷಿಣಕ್ಕೆ ತೆಗೆದುಕೊಂಡು ಬಂದಿದ್ದಾರೆ ಅಟ್ಲಿ. ಹೀಗಿರುವಾಗಲೇ ಅಟ್ಲಿ ಅವರ ಕಡೆಯಿಂದ ಒಂದು ದೊಡ್ಡ ಸುದ್ದಿ ಹೊರ ಬಿದ್ದಿದೆ. ಸ್ಟಾರ್ ಆಗಿ ಬೆಳೆಯುತ್ತಿರುವ ಹೀರೋಗೆ ಚಾನ್ಸ್ ನೀಡಲು ಅಲ್ಲು ಅರ್ಜುನ್ ಹಾಗೂ ಅಟ್ಲಿ ಮುಂದಾಗಿದ್ದಾರೆ ಎಂದು ವರದಿ ಆಗಿದೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಮೂಲಕ ದೊಡ್ಡ ಹೀರೋ ಆಗಿ ಬೆಳೆದಿದ್ದಾರೆ. ಹೀಗಾಗಿ ಅವರ ಮುಂದಿನ ಸಿನಿಮಾಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈಗ ಅವರ ನಟನೆಯ ಚಿತ್ರದಲ್ಲಿ ಶಿವಕಾರ್ತಿಕೇಯ ಅವರು ಸೆಕೆಂಡ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರ ಅವರ ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ.

ಶಿವಕಾರ್ತಿಕೇಯ ಅವರು ‘ಅಮರನ್’ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಗಿದೆ. ಸದ್ಯ ಅವರು ಸುಧಾ ಕೊಂಗರ ನಿರ್ದೇಶನದ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟ್​ನ ಮೇ ಒಳಗೆ ಪೂರ್ಣಗೊಳಿಸೋ ಆಲೋನಚೆಯಲ್ಲಿ ಅವರಿದ್ದಾರೆ. ಆ ಬಳಿಕ ಶಿವಕಾರ್ತಿಕೇಯ ಮುಂದಿನ ಸಿನಿಮಾಗಳಲ್ಲಿ ಬ್ಯುಸಿ ಆಗಲಿದ್ದಾರೆ.

ಇದನ್ನೂ ಓದಿ
Image
ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲುಗೆ ಶಿಫ್ಟ್
Image
ಅಲ್ಲು ಅರ್ಜುನ್-ತ್ರಿವಿಕ್ರಂ ಸಿನಿಮಾ ಬಗ್ಗೆ ಸಿಕ್ತು ದೊಡ್ಡ ಅಪ್​ಡೇಟ್
Image
ಪುಷ್ಪನಿಗಾಗಿ ಮತ್ತೆ ದಕ್ಷಿಣಕ್ಕೆ ಬರುತ್ತಿರುವ ಖಾನ್​ಗಳ ಮೆಚ್ಚಿನ ನಿರ್ದೇಶಕ
Image
ಡಾಲಿ ಮದುವೆಗೆ ಬರ್ತಾರೆ ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ?

ಇದನ್ನೂ ಓದಿ: ‘ಅಮರನ್’ ಚಿತ್ರಕ್ಕಾಗಿ ಶಿವಕಾರ್ತಿಕೇಯನ್ ಹಾಗೂ ಸಾಯಿ ಪಲ್ಲವಿ ಪಡೆದ ಸಂಭಾವನೆ ಎಷ್ಟು?

ಸದ್ಯ ಚರ್ಚೆ ಆಗುತ್ತಿರುವ ವಿಚಾರ ಅಂತೆಕಂತೆ ಅಷ್ಟೇ. ಈ ಬಗ್ಗೆ ಅಟ್ಲಿ ಆಗಲೀ, ಅಲ್ಲು ಅರ್ಜುನ್ ಆಗಲಿ ಅಥವಾ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವ ಸನ್ ಪಿಕ್ಚರ್ಸ್ ಆಗಲಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಈ ಚಿತ್ರಕ್ಕೆ ಸಾಯಿ ಅಭಯಂಕರ್ ಅಥವಾ ಅನಿರುದ್ಧ್ ಅವರು ಸಂಗೀತ ಸಂಯೋಜನೆ ಮಾಡೋ ಸಾಧ್ಯತೆ ಇದೆ.  ಸಿನಿಮಾದ ಕೆಲಸ ಯಾವಾಗ ಆರಂಭ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?