Pushpa 2: ಮತ್ತೊಂದು ಹಂತದ ಶೂಟಿಂಗ್​ಗೆ ಮೈ ಕೊಡವಿ ನಿಂತ ಅಲ್ಲು ಅರ್ಜುನ್​; ಇಲ್ಲಿದೆ ‘ಪುಷ್ಪ 2’ ಅಪ್​ಡೇಟ್​

Pushpa 2 Shooting Update: ಜನರು ಫಸ್ಟ್​ ಗ್ಲಿಂಪ್ಸ್​ ಇಷ್ಟಪಟ್ಟಿರುವುದರಿಂದ ‘ಪುಷ್ಪ 2’ ತಂಡಕ್ಕೆ ಖುಷಿಯಾಗಿದೆ. ಇಂದಿನಿಂದ (ಏಪ್ರಿಲ್​ 10) ವಿಶಾಖಪಟ್ಟಣದಲ್ಲಿ ಮತ್ತೊಂದು ಹಂತದ ಶೂಟಿಂಗ್​ ಆರಂಭ ಆಗಲಿದೆ.

Pushpa 2: ಮತ್ತೊಂದು ಹಂತದ ಶೂಟಿಂಗ್​ಗೆ ಮೈ ಕೊಡವಿ ನಿಂತ ಅಲ್ಲು ಅರ್ಜುನ್​; ಇಲ್ಲಿದೆ ‘ಪುಷ್ಪ 2’ ಅಪ್​ಡೇಟ್​
ಅಲ್ಲು ಅರ್ಜುನ್
Follow us
|

Updated on: Apr 10, 2023 | 8:30 AM

ನಟ ಅಲ್ಲು ಅರ್ಜುನ್​ (Allu Arjun) ಅವರ ಸಂಪೂರ್ಣ ಗಮನ ಈಗ ‘ಪುಷ್ಪ 2’ ಸಿನಿಮಾ ಮೇಲಿದೆ. ಅಭಿಮಾನಿಗಳು ಈ ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬುದು ಚಿತ್ರತಂಡಕ್ಕೆ ಗೊತ್ತು. ಆ ನಿರೀಕ್ಷೆಗೆ ತಕ್ಕಂತೆಯೇ ಇಡೀ ತಂಡ ಕೆಲಸ ಮಾಡುತ್ತಿದೆ. ನಿರ್ದೇಶಕ ಸುಕುಮಾರ್​ (Director Sukumar) ಮತ್ತು ಅವರ ಟೀಮ್​ ಹಗಲಿರುಳು ಶ್ರಮಿಸುತ್ತಿದೆ. ಅವರಿಗೆ ಅಲ್ಲು ಅರ್ಜುನ್​ ಸಾಥ್​ ನೀಡುತ್ತಿದ್ದಾರೆ. ಇತ್ತೀಚೆಗೆ ಅಲ್ಲು ಅರ್ಜು​ನ್​ ಜನ್ಮದಿನದ ಪ್ರಯುಕ್ತ ಫಸ್ಟ್​ ಗ್ಲಿಂಪ್ಸ್​ ಬಿಡುಗಡೆ ಆಯಿತು. ಅದನ್ನು ಕಂಡು ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ. ಎಲ್ಲ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿರುವುದರಿಂದ ಅಲ್ಲು ಅರ್ಜುನ್​ ಅವರು ಮುಂದಿನ ಹಂತದ ಶೂಟಿಂಗ್​ಗೆ ಸಜ್ಜಾಗಿದ್ದಾರೆ. ‘ಪುಷ್ಪ 2’ (Pushpa 2 Movie) ಸಿನಿಮಾದ ಕೆಲಸಗಳು ಈಗ ಬಿರುಸಿನಿಂದ ಸಾಗುತ್ತಿವೆ.

‘ಪುಷ್ಪ’ ಸಿನಿಮಾ ತೆರೆಕಂಡಿದ್ದು 2021ರ ಡಿಸೆಂಬರ್​ನಲ್ಲಿ. ಬಹಳ ತಿಂಗಳು ಗ್ಯಾಪ್​ ತೆಗೆದುಕೊಂಡು ‘ಪುಷ್ಪ 2’ ಚಿತ್ರಕ್ಕೆ ತಯಾರಿ ಮಾಡಿಕೊಳ್ಳಲಾಯ್ತು. ಅಂದುಕೊಂಡ ಪ್ಲ್ಯಾನ್​ ಪ್ರಕಾರವೇ ಎಲ್ಲವೂ ನಡೆಯುತ್ತಿದೆ. ಈ ಸಿನಿಮಾ ದೊಡ್ಡ ಕ್ಯಾನ್ವಾಸ್​ನಲ್ಲಿ ಮೂಡಿಬರುತ್ತಿದೆ ಎಂಬುದಕ್ಕೆ ಈಗಾಗಲೇ ಫಸ್ಟ್​ ಗ್ಲಿಂಪ್ಸ್​ ವಿಡಿಯೋ ಮೂಲಕ ಸುಳಿವು ಸಿಕ್ಕಿದೆ. ಅಲ್ಲದೇ, ಕಥೆಯ ಎಳೆ ಕೂಡ ಬಹಿರಂಗ ಆಗಿದೆ.

‘ನನ್ನ ಪುಷ್ಪರಾಜ್​​ಗೆ ಹುಟ್ಟುಹಬ್ಬದ ಶುಭಾಶಯ’; ಅಲ್ಲು ಅರ್ಜುನ್​ಗೆ ಶುಭಾಶಯ ತಿಳಿಸಿದ ರಶ್ಮಿಕಾ ಮಂದಣ್ಣ

ಇದನ್ನೂ ಓದಿ
Image
‘ನನ್ನ ಪುಷ್ಪರಾಜ್​​ಗೆ ಹುಟ್ಟುಹಬ್ಬದ ಶುಭಾಶಯ’; ಅಲ್ಲು ಅರ್ಜುನ್​ಗೆ ಶುಭಾಶಯ ತಿಳಿಸಿದ ರಶ್ಮಿಕಾ ಮಂದಣ್ಣ
Image
Pushpa 2: ಕಥಾನಾಯಕನೇ ನಾಪತ್ತೆ; ಎಲ್ಲಿದ್ದಾನೆ ಪುಷ್ಪರಾಜ್​? ಅಲ್ಲು ಅರ್ಜುನ್​ ಜನ್ಮದಿನಕ್ಕೂ ಮುನ್ನ ದೊಡ್ಡ ಟ್ವಿಸ್ಟ್​
Image
Allu Arjun: ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್​; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸ್ಟಾರ್​ ನಟ
Image
Sai Pallavi: ‘ಪುಷ್ಪ 2’ ಸಿನಿಮಾದಲ್ಲಿ ಸಾಯಿ ಪಲ್ಲವಿಗೆ ನೆಗೆಟಿವ್​ ಪಾತ್ರ? ಟಾಲಿವುಡ್​ ಅಂಗಳದಲ್ಲಿ ಗುಸುಗುಸು

ಜನರು ಫಸ್ಟ್​ ಗ್ಲಿಂಪ್ಸ್​ ಇಷ್ಟಪಟ್ಟಿರುವುದರಿಂದ ‘ಪುಷ್ಪ 2’ ತಂಡಕ್ಕೆ ಖುಷಿಯಾಗಿದೆ. ಅದೇ ಖುಷಿಯಲ್ಲಿ ಇಂದಿನಿಂದ (ಏಪ್ರಿಲ್​ 10) ವಿಶಾಖಪಟ್ಟಣದಲ್ಲಿ ಮತ್ತೊಂದು ಹಂತದ ಶೂಟಿಂಗ್​ ಆರಂಭ ಆಗಲಿದೆ. ಇಲ್ಲಿ ಒಂದು ವಾರಗಳ ಕಾಲ ಚಿತ್ರೀಕರಣ​ ನಡೆಯಲಿದೆ. ಅದಕ್ಕಾಗಿ ಅಲ್ಲು ಅರ್ಜುನ್​ ಅವರು ಭಾನುವಾರವೇ ವಿಶಾಖಪಟ್ಟಣದ ವಿಮಾನ ಹತ್ತಿದ್ದಾರೆ. ಬರ್ತ್​ ಡೇ ಸಲುವಾಗಿ ಬ್ರೇಕ್​ ಪಡೆದುಕೊಂಡಿದ್ದ ಅವರು ಈಗ ಮತ್ತೆ ಮೈ ಕೊಡವಿ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

Pushpa 2: ‘ಕಾಂತಾರ’ ಸಿನಿಮಾದಿಂದ ಸ್ಫೂರ್ತಿ ಪಡೆಯಿತೇ ‘ಪುಷ್ಪ 2’ ಪೋಸ್ಟರ್​? ಕನ್ನಡದ ಮೇಲೆ ಕಣ್ಣಿಟ್ಟ ತೆಲುಗು ಚಿತ್ರರಂಗ

ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದವರು ನಟಿಸುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್​ ಬಹುಕೋಟಿ ರೂಪಾಯಿ ಬಂಡವಾಳ ಹೂಡುತ್ತಿದೆ. ಉತ್ತರ ಭಾರತದ ಮಂದಿ ಕೂಡ ಈ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಪುಷ್ಪ’ ಚಿತ್ರದ ಮೊದಲ ಪಾರ್ಟ್​ಗೆ ಹೋಲಿಸಿದರೆ ಎರಡನೇ ಪಾರ್ಟ್​ನಲ್ಲಿ ಕಥೆ ಹಿರಿದಾಗಲಿದೆ. ವಿದೇಶಕ್ಕೂ ಕಥೆ ಸಾಗಲಿದೆ. ತಿರುಪತಿ ಜೈಲಿನಿಂದ ಪುಷ್ಪರಾಜ್​ ತಪ್ಪಿಸಿಕೊಂಡಿದ್ದಾನೆ ಎಂಬುದನ್ನು ಫಸ್ಟ್​ ಗ್ಲಿಂಪ್ಸ್​ನಲ್ಲಿ ತೋರಿಸಲಾಗಿದೆ. ‘ಪುಷ್ಪ ಎಲ್ಲಿ’ ಎಂಬ ಹ್ಯಾಶ್​ ಟ್ಯಾಗ್​ ಟ್ರೆಂಡ್​ ಆಗಿದೆ. ಆದಷ್ಟು ಬೇಗ ಈ ಸಿನಿಮಾವನ್ನು ತೆರೆಮೇಲೆ ನೋಡಬೇಕು ಎಂದು ಫ್ಯಾನ್ಸ್​ ಹಂಬಲಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ