AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್​ಗೆ ಅಪ್ಲೈ ಮಾಡಿದ ಅಲ್ಲು ಅರ್ಜುನ್; ಕಾರಣ ಏನು?

ಅಲ್ಲು ಅರ್ಜುನ್ ‘ಪುಷ್ಪ 2’ ಚಿತ್ರಕ್ಕಾಗಿ ಸಂಪೂರ್ಣ ಕಾಲ್​ಶೀಟ್ ನೀಡಿದ್ದಾರೆ. ಅವರು ಸದ್ಯ ಬೇರೆ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಅವರು ಹೈದರಾಬಾದ್​ನ ಆರ್​ಟಿಒದಲ್ಲಿ ಅಂತಾರಾಷ್ಟ್ರೀಯ ವಾಹನ ಚಾಲನೆ ಪರವಾನಿಗೆ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್​ಗೆ ಅಪ್ಲೈ ಮಾಡಿದ ಅಲ್ಲು ಅರ್ಜುನ್; ಕಾರಣ ಏನು?
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Mar 21, 2024 | 7:02 AM

Share

ನಟ ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ  ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದ ಶೂಟಿಂಗ್ ಹೈದರಾಬಾದ್ ಮಾತ್ರವಲ್ಲ ವಿದೇಶದಲ್ಲೂ ನಡೆಯಲಿದೆ. ಈ ಕಾರಣಕ್ಕೆ ಅಲ್ಲು ಅರ್ಜುನ್ ಅವರು ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್​ಗೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ವಿದೇಶದಲ್ಲಿ ಕಾರು ಚಲಾಯಿಸಲು ಅವರು ರೆಡಿ ಆಗಿದ್ದಾರೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರಕ್ಕಾಗಿ ಸಂಪೂರ್ಣ ಕಾಲ್​ಶೀಟ್ ನೀಡಿದ್ದಾರೆ. ಅವರು ಸದ್ಯ ಬೇರೆ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಅವರು ಹೈದರಾಬಾದ್​ನ ಆರ್​ಟಿಒದಲ್ಲಿ ಅಂತಾರಾಷ್ಟ್ರೀಯ ವಾಹನ ಚಾಲನೆ ಪರವಾನಿಗೆ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ ಈ ತಂಡ ಬ್ಯಾಂಕಾಕ್​ಗೆ ತೆರಳಿ ಆ್ಯಕ್ಷನ್ ಸೀಕ್ವೆನ್ಸ್​ಗಳನ್ನು ಶೂಟ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ ಎನ್ನಲಾಗಿದೆ.

ಅಲ್ಲು ಅರ್ಜುನ್ ಅವರು ಬ್ಯಾಂಕಾಕ್​ನಲ್ಲಿ ಕಾರುಗಳ ಜೊತೆ ಟ್ರಕ್ ಕೂಡ ಓಡಿಸಲಿದ್ದಾರೆ. ಜಪಾನ್​ನಲ್ಲೂ ಸಿನಿಮಾದ ಶೂಟಿಂಗ್ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸಿನಿಮಾದ ಕಥೆ ಎಲ್ಲೆಲ್ಲಿ ಸಾಗಲಿದೆ ಎನ್ನುವ ಕುತೂಹಲ ಮೂಡಿದೆ.

ಕೆಲವು ಮೂಲಗ ಪ್ರಕಾರ ಮೇ ಕೊನೆಯಲ್ಲಿ ಸಂಪೂರ್ಣ ಶೂಟಿಂಗ್ ಪೂರ್ಣಗೊಳಿಸುವ ಆಲೋಚನೆಯಲ್ಲಿ ತಂಡ ಇದೆ. ಎಡಿಟಿಂಗ್, ವಿಎಫ್​ಎಕ್ಸ್, ಡಬ್ಬಿಂಗ್ ಬಿಜಿಎಂ ಸೆಟ್​ ಮಾಡಲು ಸಾಕಷ್ಟು ಸಮಯದ ಅಗತ್ಯವಿದೆ. ಎರಡು ತಿಂಗಳಲ್ಲಿ ಇದನ್ನು ಪೂರ್ಣಗೊಳಿಸೋ ಆಲೋಚನೆ ತಂಡದ್ದಾಗಿದೆ.

ಇದನ್ನೂ ಓದಿ: ‘ನಾವು ಸಹೋದರರು, ಪರಸ್ಪರ ಗೌರವ ಇದೆ’; ಬಾಲಿವುಡ್​ ಬಗ್ಗೆ ಅಲ್ಲು ಅರ್ಜುನ್​ ಮಾತು

ಅಲ್ಲು ಅರ್ಜುನ್ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ