Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ಮನೆ ಎದುರು ಅಭಿಮಾನಿಗಳ ದಂಡು; ಎಚ್ಚರಿಕೆಯಿಂದ ನಡೆದುಕೊಂಡ ನಟ

ಅಲ್ಲು ಅರ್ಜುನ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಹುಟ್ಟುಹಬ್ಬದ ದಿನ ಅವರಿಗೆ ವಿಶ್ ಮಾಡಲು ಫ್ಯಾನ್ಸ್ ಆಗಮಿಸಿದ್ದಾರೆ. ಮನೆ ಎದುರು ಬಂದ ಅಭಿಮಾನಿಗಳನ್ನು ಅಲ್ಲು ಅರ್ಜುನ್ ಅವರು ಭೇಟಿ ಮಾಡಿದ್ದಾರೆ. ಆದರೆ ಯಾವುದೇ ನೂಕುನೂಗ್ಗಲು ಉಂಟಾಗದ ರೀತಿಯಲ್ಲಿ ಅವರು ಎಚ್ಚರಿಕೆ ವಹಿಸಿದ್ದಾರೆ.

ಅಲ್ಲು ಅರ್ಜುನ್ ಮನೆ ಎದುರು ಅಭಿಮಾನಿಗಳ ದಂಡು; ಎಚ್ಚರಿಕೆಯಿಂದ ನಡೆದುಕೊಂಡ ನಟ
Allu Arjun
Follow us
ಮದನ್​ ಕುಮಾರ್​
|

Updated on: Apr 08, 2025 | 7:11 PM

ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ಇಂದು (ಏಪ್ರಿಲ್ 8) ಹುಟ್ಟುಹಬ್ಬದ ಸಂಭ್ರಮ. ಬಹಳ ಸಡಗರದಿಂದ ಅವರು ಬರ್ತ್​ಡೇ (Allu Arjun Birthday) ಆಚರಣೆ ಮಾಡಿಕೊಂಡಿದ್ದಾರೆ. ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ಅಲ್ಲು ಅರ್ಜುನ್​ಗೆ ವಿಶ್ ಮಾಡಿದ್ದಾರೆ. ಅಲ್ಲದೇ ಸಾವಿರಾರು ಅಭಿಮಾನಿಗಳು ಅಲ್ಲು ಅರ್ಜುನ್ ಅವರ ಮನೆ ಎದುರು ಕೂಡ ಜಮಾಯಿಸಿದ್ದಾರೆ. ತಮ್ಮ ನೆಚ್ಚಿನ ನಟನ ಜನ್ಮದಿನದಂದು ನೇರವಾಗಿ ಭೇಟಿ ಮಾಡಿ ಶುಭಾಶಯ ಕೋರಬೇಕು ಎಂಬುದು ಅಭಿಮಾನಿಗಳ (Allu Arjun Fans) ಆಸೆ. ಅದಕ್ಕೆ ಅಲ್ಲು ಅರ್ಜುನ್ ಅವರು ಸಹಕರಿಸಿದ್ದಾರೆ. ಜೊತೆಗೆ ಅವರು ಎಚ್ಚರಿಕೆಯಿಂದಲೂ ನಡೆದುಕೊಂಡಿದ್ದಾರೆ.

ಸ್ಟಾರ್​ ನಟರು ಬಂದಾಗ ಅವರನ್ನು ನೋಡಲು ಜನಜಂಗುಳಿ ಉಂಟಾಗುತ್ತದೆ. ಎಚ್ಚರ ತಪ್ಪಿ ನಡೆದುಕೊಂಡರೆ ಕಾಲ್ತುಳಿತ ಉಂಟಾಗುವ ಸಾಧ್ಯತೆ ಇರುತ್ತದೆ. ‘ಪುಷ್ಪ 2’ ಸಿನಿಮಾ ಬಿಡುಗಡೆ ಆದಾಗ ಅಲ್ಲು ಅರ್ಜುನ್ ಅವರು ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಆಗ ಉಂಟಾದ ಕಾಲ್ತುಳಿದಲ್ಲಿ ಅಭಿಮಾನಿಯೊಬ್ಬರು ಸಾವಿಗೀಡಾಗಿದ್ದರು. ಆ ಬಳಿಕ ಅಲ್ಲು ಅರ್ಜುನ್ ಅವರು ಹೆಚ್ಚು ಜಾಗ್ರತೆ ವಹಿಸುತ್ತಿದ್ದಾರೆ.

ಇದನ್ನೂ ಓದಿ
Image
ಹೆಸರು ಬದಲಾವಣೆ ಮಾಡಿಕೊಳ್ಳಲಿರುವ ಅಲ್ಲು ಅರ್ಜುನ್, ಕಾರಣವೇನು?
Image
ಚಿತ್ರರಂಗದಲ್ಲಿ 22 ವರ್ಷ ಪೂರೈಸಿದ ಅಲ್ಲು ಅರ್ಜುನ್; ಮುಂದಿದೆ ದೊಡ್ಡ ಸವಾಲು
Image
‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಮಾಹಿತಿ ಕೊಟ್ಟ ನಿರ್ಮಾಪಕ
Image
ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲುಗೆ ಶಿಫ್ಟ್

ಹುಟ್ಟುಹಬ್ಬದ ದಿನ ತಮಗೆ ವಿಶ್ ಮಾಡಲು ಬಂದ ಅಭಿಮಾನಿಗಳನ್ನು ಅಲ್ಲು ಅರ್ಜುನ್ ಅವರು ದೂರದಿಂದಲೇ ಮಾತನಾಡಿಸಿದ್ದಾರೆ. ಯಾವುದೇ ನೂಕು ನುಗ್ಗಲು ಆಗದ ರೀತಿಯಲ್ಲಿ ಅವರು ನೋಡಿಕೊಂಡಿದ್ದಾರೆ. ಕೇವಲ ಮುಂಭಾಗ ನಿಂತಿರುವ ಕೆಲವು ಅಭಿಮಾನಿಗಳಿಗೆ ಅವರು ಕೈ ಕುಲುಕಿದ್ದಾರೆ. ಉಳಿದಂತೆ ಎಲ್ಲರಿಗೂ ದೂರದಿಂದಲೇ ಕೈ ಬೀಸಿ ಧನ್ಯವಾದ ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕಮೆಂಟ್​ಗಳ ಮೂಲಕ ಕೂಡ ಅಭಿಮಾನಿಗಳು ಅಲ್ಲು ಅರ್ಜುನ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಮುಂದಿನ ಸಿನಿಮಾಗೆ ಶುಭವಾಗಲಿ ಎಂದು ಹಾರೈಸಿದ್ದಾರೆ. ಪ್ಯಾನ್ ಇಂಡಿಯಾ ನಿರ್ದೇಶಕ ಅಟ್ಲಿ ಜೊತೆ ಅಲ್ಲು ಅರ್ಜುನ್ ಅವರು ಹೊಸ ಸಿನಿಮಾ ಘೋಷಿಸಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಜೀವನ ಬದಲಿಸಿದ್ದು ಚಿರಂಜೀವಿಯ ಒಂದು ಮಾತು

‘ಪುಷ್ಪ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ನಂತರ ಅಲ್ಲು ಅರ್ಜುನ್ ಅವರು ಅಟ್ಲಿ ಜೊತೆ ಕೈ ಜೋಡಿಸಿದ್ದಾರೆ. ಈ ಸಿನಿಮಾದ ತಯಾರಿ ಹೇಗಿದೆ ಎಂಬುದನ್ನು ತಿಳಿಸಲು ವಿಡಿಯೋ ಹಂಚಿಕೊಳ್ಳಲಾಗಿದೆ. ಅಮೆರಿಕದಲ್ಲಿ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ‘ಸನ್ ಪಿಕ್ಚರ್ಸ್​’ ಸಂಸ್ಥೆಯು ಈ ಸಿನಿಮಾಗೆ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ