AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ಮನೆ ಎದುರು ಅಭಿಮಾನಿಗಳ ದಂಡು; ಎಚ್ಚರಿಕೆಯಿಂದ ನಡೆದುಕೊಂಡ ನಟ

ಅಲ್ಲು ಅರ್ಜುನ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಹುಟ್ಟುಹಬ್ಬದ ದಿನ ಅವರಿಗೆ ವಿಶ್ ಮಾಡಲು ಫ್ಯಾನ್ಸ್ ಆಗಮಿಸಿದ್ದಾರೆ. ಮನೆ ಎದುರು ಬಂದ ಅಭಿಮಾನಿಗಳನ್ನು ಅಲ್ಲು ಅರ್ಜುನ್ ಅವರು ಭೇಟಿ ಮಾಡಿದ್ದಾರೆ. ಆದರೆ ಯಾವುದೇ ನೂಕುನೂಗ್ಗಲು ಉಂಟಾಗದ ರೀತಿಯಲ್ಲಿ ಅವರು ಎಚ್ಚರಿಕೆ ವಹಿಸಿದ್ದಾರೆ.

ಅಲ್ಲು ಅರ್ಜುನ್ ಮನೆ ಎದುರು ಅಭಿಮಾನಿಗಳ ದಂಡು; ಎಚ್ಚರಿಕೆಯಿಂದ ನಡೆದುಕೊಂಡ ನಟ
Allu Arjun
ಮದನ್​ ಕುಮಾರ್​
|

Updated on: Apr 08, 2025 | 7:11 PM

Share

ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ಇಂದು (ಏಪ್ರಿಲ್ 8) ಹುಟ್ಟುಹಬ್ಬದ ಸಂಭ್ರಮ. ಬಹಳ ಸಡಗರದಿಂದ ಅವರು ಬರ್ತ್​ಡೇ (Allu Arjun Birthday) ಆಚರಣೆ ಮಾಡಿಕೊಂಡಿದ್ದಾರೆ. ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ಅಲ್ಲು ಅರ್ಜುನ್​ಗೆ ವಿಶ್ ಮಾಡಿದ್ದಾರೆ. ಅಲ್ಲದೇ ಸಾವಿರಾರು ಅಭಿಮಾನಿಗಳು ಅಲ್ಲು ಅರ್ಜುನ್ ಅವರ ಮನೆ ಎದುರು ಕೂಡ ಜಮಾಯಿಸಿದ್ದಾರೆ. ತಮ್ಮ ನೆಚ್ಚಿನ ನಟನ ಜನ್ಮದಿನದಂದು ನೇರವಾಗಿ ಭೇಟಿ ಮಾಡಿ ಶುಭಾಶಯ ಕೋರಬೇಕು ಎಂಬುದು ಅಭಿಮಾನಿಗಳ (Allu Arjun Fans) ಆಸೆ. ಅದಕ್ಕೆ ಅಲ್ಲು ಅರ್ಜುನ್ ಅವರು ಸಹಕರಿಸಿದ್ದಾರೆ. ಜೊತೆಗೆ ಅವರು ಎಚ್ಚರಿಕೆಯಿಂದಲೂ ನಡೆದುಕೊಂಡಿದ್ದಾರೆ.

ಸ್ಟಾರ್​ ನಟರು ಬಂದಾಗ ಅವರನ್ನು ನೋಡಲು ಜನಜಂಗುಳಿ ಉಂಟಾಗುತ್ತದೆ. ಎಚ್ಚರ ತಪ್ಪಿ ನಡೆದುಕೊಂಡರೆ ಕಾಲ್ತುಳಿತ ಉಂಟಾಗುವ ಸಾಧ್ಯತೆ ಇರುತ್ತದೆ. ‘ಪುಷ್ಪ 2’ ಸಿನಿಮಾ ಬಿಡುಗಡೆ ಆದಾಗ ಅಲ್ಲು ಅರ್ಜುನ್ ಅವರು ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಆಗ ಉಂಟಾದ ಕಾಲ್ತುಳಿದಲ್ಲಿ ಅಭಿಮಾನಿಯೊಬ್ಬರು ಸಾವಿಗೀಡಾಗಿದ್ದರು. ಆ ಬಳಿಕ ಅಲ್ಲು ಅರ್ಜುನ್ ಅವರು ಹೆಚ್ಚು ಜಾಗ್ರತೆ ವಹಿಸುತ್ತಿದ್ದಾರೆ.

ಇದನ್ನೂ ಓದಿ
Image
ಹೆಸರು ಬದಲಾವಣೆ ಮಾಡಿಕೊಳ್ಳಲಿರುವ ಅಲ್ಲು ಅರ್ಜುನ್, ಕಾರಣವೇನು?
Image
ಚಿತ್ರರಂಗದಲ್ಲಿ 22 ವರ್ಷ ಪೂರೈಸಿದ ಅಲ್ಲು ಅರ್ಜುನ್; ಮುಂದಿದೆ ದೊಡ್ಡ ಸವಾಲು
Image
‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಮಾಹಿತಿ ಕೊಟ್ಟ ನಿರ್ಮಾಪಕ
Image
ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲುಗೆ ಶಿಫ್ಟ್

ಹುಟ್ಟುಹಬ್ಬದ ದಿನ ತಮಗೆ ವಿಶ್ ಮಾಡಲು ಬಂದ ಅಭಿಮಾನಿಗಳನ್ನು ಅಲ್ಲು ಅರ್ಜುನ್ ಅವರು ದೂರದಿಂದಲೇ ಮಾತನಾಡಿಸಿದ್ದಾರೆ. ಯಾವುದೇ ನೂಕು ನುಗ್ಗಲು ಆಗದ ರೀತಿಯಲ್ಲಿ ಅವರು ನೋಡಿಕೊಂಡಿದ್ದಾರೆ. ಕೇವಲ ಮುಂಭಾಗ ನಿಂತಿರುವ ಕೆಲವು ಅಭಿಮಾನಿಗಳಿಗೆ ಅವರು ಕೈ ಕುಲುಕಿದ್ದಾರೆ. ಉಳಿದಂತೆ ಎಲ್ಲರಿಗೂ ದೂರದಿಂದಲೇ ಕೈ ಬೀಸಿ ಧನ್ಯವಾದ ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕಮೆಂಟ್​ಗಳ ಮೂಲಕ ಕೂಡ ಅಭಿಮಾನಿಗಳು ಅಲ್ಲು ಅರ್ಜುನ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಮುಂದಿನ ಸಿನಿಮಾಗೆ ಶುಭವಾಗಲಿ ಎಂದು ಹಾರೈಸಿದ್ದಾರೆ. ಪ್ಯಾನ್ ಇಂಡಿಯಾ ನಿರ್ದೇಶಕ ಅಟ್ಲಿ ಜೊತೆ ಅಲ್ಲು ಅರ್ಜುನ್ ಅವರು ಹೊಸ ಸಿನಿಮಾ ಘೋಷಿಸಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಜೀವನ ಬದಲಿಸಿದ್ದು ಚಿರಂಜೀವಿಯ ಒಂದು ಮಾತು

‘ಪುಷ್ಪ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ನಂತರ ಅಲ್ಲು ಅರ್ಜುನ್ ಅವರು ಅಟ್ಲಿ ಜೊತೆ ಕೈ ಜೋಡಿಸಿದ್ದಾರೆ. ಈ ಸಿನಿಮಾದ ತಯಾರಿ ಹೇಗಿದೆ ಎಂಬುದನ್ನು ತಿಳಿಸಲು ವಿಡಿಯೋ ಹಂಚಿಕೊಳ್ಳಲಾಗಿದೆ. ಅಮೆರಿಕದಲ್ಲಿ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ‘ಸನ್ ಪಿಕ್ಚರ್ಸ್​’ ಸಂಸ್ಥೆಯು ಈ ಸಿನಿಮಾಗೆ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು