AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಳಿ ಆಗುತ್ತಿದ್ದಂತೆ ಮನೆ ಬಿಟ್ಟು ತೆರಳಿದ ಅಲ್ಲು ಅರ್ಜುನ್ ಮಕ್ಕಳು

ಪುಷ್ಪ 2 ಚಿತ್ರದ ಯಶಸ್ಸಿನ ನಂತರ, ಅಲ್ಲು ಅರ್ಜುನ್ ಅವರ ಮನೆ ಮೇಲೆ ದಾಳಿ ನಡೆದಿದೆ. ಹೈದರಾಬಾದ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಕ್ಕೆ ಅವರ ವಿರುದ್ಧ ಪ್ರತಿಭಟನೆ ನಡೆದಿದ್ದು, ಅದರ ಪರಿಣಾಮವಾಗಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಅಲ್ಲು ಅರ್ಜುನ್ ಮಕ್ಕಳು ಕುಟುಂಬದೊಂದಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ.

ದಾಳಿ ಆಗುತ್ತಿದ್ದಂತೆ ಮನೆ ಬಿಟ್ಟು ತೆರಳಿದ ಅಲ್ಲು ಅರ್ಜುನ್ ಮಕ್ಕಳು
ಅಲ್ಲು ಅರ್ಜುನ್ ಕುಟುಂಬ
Follow us
ರಾಜೇಶ್ ದುಗ್ಗುಮನೆ
|

Updated on:Dec 23, 2024 | 10:35 AM

ಅಲ್ಲು ಅರ್ಜುನ್ ಅವರಿಗೆ ಕಷ್ಟದ ಸಮಯ ಎದುರಾಗಿದೆ. ಅವರ ಮನೆಯ ಮೇಲೆ ದಾಳಿ ನಡೆದಿದೆ. ಹೈದರಾಬಾದ್​​ನಲ್ಲಿರುವ ನಿವಾಸದ ಹೊರ ಭಾಗವನ್ನು ಹಾಳು ಮಾಡಲಾಗಿದೆ. ಸಂಧ್ಯಾ ಥಿಯೇಟರ್​ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟಿದ್ದರು. ಇದಕ್ಕೆ ಅಲ್ಲು ಅರ್ಜುನ್ ಪರೋಕ್ಷ ಕಾರಣ ಎನ್ನಲಾಗಿದೆ. ಅವರಿಗೆ ನ್ಯಾಯ ಸಿಗಬೇಕು ಎಂದು ಅಲ್ಲು ಅರ್ಜುನ್ ಮನೆ ಎದುರು ಪ್ರತಿಭಟನೆ ನಡೆಸಲಾಗುತ್ತಿತ್ತು. ಆ ಬಳಿಕ ಅವರು ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿ ಬಳಿಕ ಅಲ್ಲು ಅರ್ಜುನ್ ಮಕ್ಕಳು ಮನೆ ಬಿಟ್ಟು ಹೊರಟಿದ್ದಾರೆ.

‘ಇಸ್ಮಾನಿಯಾ ಯೂನಿವರ್ಸಿಟಿ ಜಾಯಿಂಟ್ ಆ್ಯಕ್ಷನ್ ಕಮಿಟಿಯವರು ಈ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಈ ದಾಳಿ ಬಳಿಕ ಅಲ್ಲು ಅರ್ಜುನ್ ಭಯಗೊಂಡಿದ್ದಾರೆ. ಅಲ್ಲು ಅರ್ಜುನ್  ಮಕ್ಕಳಾದ ಅಲ್ಲು ಅರ್ಹಾ, ಅಲ್ಲು ಅಯಾನ್ ಕಾರು ಹತ್ತಿ ವೇಗವಾಗಿ ಹೊರಟಿದ್ದಾರೆ. ಅವರು ಬೇರೆ ಕಡೆ ಹೋಗಿ ಉಳಿದುಕೊಂಡಿದ್ದಾರೆ.

ಅಲ್ಲು ಅರ್ಜುನ್ ಅವರಿಗೆ ಈ ವರ್ಷ ‘ಪುಷ್ಪ 2’ ಚಿತ್ರದ ಮೂಲಕ ದೊಡ್ಡ ಯಶಸ್ಸು ಸಿಕ್ಕಿತ್ತು. ಆದರೆ, ಈ ಯಶಸ್ಸನ್ನು ಎಂಜಾಯ್ ಮಾಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಮಹಿಳೆ ಮೃತಪಟ್ಟಿದ್ದಕ್ಕೆ ಅವರು ಅರೆಸ್ಟ್ ಆಗಿದ್ದರು. ಅವರು ಹೊರ ಬಂದು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದರು. ಈ ಬೆನ್ನಲ್ಲೇ ಅಲ್ಲು ಅರ್ಜುನ್ ಮನೆಯ ಮೇಲೆ ದಾಳಿ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಲ್ಲು ಅರವಿಂದ್, ಈ ರೀತಿಯ ಘಟನೆಯನ್ನು ಬೆಂಬಲಿಸಬಾರದು ಎಂದಿದ್ದಾರೆ.

ಇದನ್ನೂ ಓದಿ: 1 ಕೋಟಿ ರೂ. ಪರಿಹಾರ ಕೊಡುವಂತೆ ಒತ್ತಾಯಿಸಿ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ

ಅಲ್ಲು ಅರ್ಜುನ್ ಮಕ್ಕಳು ಈಗ ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಆಗಿದ್ದಾರೆ ಎನ್ನಲಾಗಿದೆ. ಅವರಿಗೆ ಈಗ ಸಿಕ್ಕಿರೋದು ಮಧ್ಯಂತರ ಜಾಮೀನು. ಅವರಿಗೆ ಮತ್ತೆ ಜೈಲು ಸೇರುವ ಭಯ ಕಾಡುತ್ತಿದೆ. ಈ ವಿಚಾರದಲ್ಲಿ ಅವರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಅವರು ಹಲವು ವಿಚಾರಕ್ಕೆ ಸ್ಪಷ್ಟನೆ ಕೊಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:34 am, Mon, 23 December 24

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ