AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸುಂದರವಾಗಿರಲಿಲ್ಲ, ಹಾಗಾಗಿ ಒಳ್ಳೇ ಆಫರ್​ ಬರಲಿಲ್ಲ’: ಅಲ್ಲು ಅರ್ಜುನ್​

ನಟ ಅಲ್ಲು ಅರ್ಜುನ್​ ಅವರು ಸ್ಟಾರ್​ ಕುಟುಂಬದಿಂದ ಬಂದವರು. ಹಾಗಿದ್ದರೂ ಕೂಡ ಅವರಿಗೆ ಆರಂಭದ ದಿನಗಳು ಚಾಲೆಂಜಿಂಗ್​ ಆಗಿದ್ದವು. ಮೊದಲ ಸಿನಿಮಾ ಗೆದ್ದರೂ ಕೂಡ ಅಲ್ಲು ಅರ್ಜುನ್​ಗೆ ಸರಿಯಾದ ಅವಕಾಶಗಳು ಸಿಗುತ್ತಿರಲಿಲ್ಲ. ಅದಕ್ಕೆ ತಮ್ಮ ಲುಕ್​ ಕಾರಣ ಎಂದು ಈಗ ಅಲ್ಲು ಅರ್ಜುನ್​ ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ವಿವರ..

‘ನಾನು ಸುಂದರವಾಗಿರಲಿಲ್ಲ, ಹಾಗಾಗಿ ಒಳ್ಳೇ ಆಫರ್​ ಬರಲಿಲ್ಲ’: ಅಲ್ಲು ಅರ್ಜುನ್​
ಅಲ್ಲು ಅರ್ಜುನ್​
Follow us
ಮದನ್​ ಕುಮಾರ್​
|

Updated on: May 08, 2024 | 5:26 PM

ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರು ಇಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಶೈನ್​ ಆಗುತ್ತಿದ್ದಾರೆ. ಅವರನ್ನು ಹುಡುಕಿಕೊಂಡು ನೂರಾರು ಅವಕಾಶಗಳು ಬರುತ್ತಿವೆ. ಆದರೆ ಆರಂಭದಲ್ಲಿ ಪರಿಸ್ಥಿತಿ ಹೀಗೆ ಇರಲಿಲ್ಲ. ಅಲ್ಲು ಅರ್ಜುನ್​ ನಟಿಸಿದ ‘ಆರ್ಯ’ ಸಿನಿಮಾ (Arya Movie) ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು ಈಗ ಅಲ್ಲು ಅರ್ಜುನ್​ ನೆನಪಿಸಿಕೊಂಡಿದ್ದಾರೆ. ‘ಪುಷ್ಪ 2’ (Pushpa 2) ಸಿನಿಮಾದ ಬಿಡುಗಡೆಗೆ ಸಜ್ಜಾಗುತ್ತಿರುವ ಅವರು ನೆನಪಿನ ಪುಟ ತೆರೆದಿದ್ದಾರೆ.

ಅಲ್ಲು ಅರ್ಜುನ್​ ನಟನೆಯ ಮೊದಲ ಸಿನಿಮಾ ‘ಗಂಗೋತ್ರಿ’ 2003ರ ಮಾರ್ಚ್​ 28ರಂದು ಬಿಡುಗಡೆ ಆಗಿತ್ತು. ಆ ಸಿನಿಮಾ ಹಿಟ್​ ಆಯಿತು. ಹಾಗಿದ್ದರೂ ಕೂಡ ಅಲ್ಲು ಅರ್ಜುನ್​ ಅವರಿಗೆ ಉತ್ತಮ ಅವಕಾಶಗಳು ಬಂದಿರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಅವರು ಈಗ ಹೇಳಿದ್ದಾರೆ. ನೋಡೋಕೆ ತಾವು ಚೆನ್ನಾಗಿರಲಿಲ್ಲ ಎಂದು ಸ್ವತಃ ಅಲ್ಲು ಅರ್ಜುನ್​ ಹೇಳಿದ್ದಾರೆ.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಅಲ್ಲು ಅರ್ಜುನ್ ಅವರು ಈ ವಿಚಾರವನ್ನು ವಿವರಿಸಿದ್ದಾರೆ. ‘ನಾನು ನಟಿಸಿದ ‘ಗಂಗೋತ್ರಿ’ ಸಿನಿಮಾ ಹಿಟ್​ ಆಯಿತು. ಆದರೆ ನಾನು ನೋಡೋಕೆ ಅಷ್ಟೇನೂ ಚೆನ್ನಾಗಿಲ್ಲ ಅಂತ ಅನಿಸಿದ್ದರಿಂದ ಒಳ್ಳೆಯ ಸಿನಿಮಾ ಅವಕಾಶಗಳು ನನಗೆ ಬರಲಿಲ್ಲ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ. ಬಳಿಕ ‘ಆರ್ಯ’ ಸಿನಿಮಾದ ಅವಕಾಶ ಸಿಕ್ಕಿದ್ದು ಹೇಗೆ ಎಂದು ಅವರು ಮೆಲುಕು ಹಾಕಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಬಿಡುಗಡೆಗೂ ಮುನ್ನ 150 ಕೋಟಿ ರೂಪಾಯಿಗೆ ಹೆಚ್ಚಿತು ಅಲ್ಲು ಅರ್ಜುನ್​ ಸಂಬಳ

‘ಗಂಗೋತ್ರಿ ಸಿನಿಮಾ ಯಶಸ್ವಿ ಆಯಿತು. ಆದರೆ ನಟನಾಗಿ ನಾನು ಗುರುತಿಸಿಕೊಳ್ಳಲು ಸೋತೆ. ನಿತಿನ್ ನಟನೆಯ ‘ದಿಲ್​’ ಸಿನಿಮಾವನ್ನು ನೋಡಲು ಹೋಗಿದ್ದಾಗ ಅಲ್ಲಿ ನನಗೆ ಸುಕುಮಾರ್​ ಪರಿಚಯ ಆಯಿತು. ‘ಆರ್ಯ’ ಚಿತ್ರಕ್ಕಾಗಿ ಅವರು ನನ್ನನ್ನು ಭೇಟಿ ಮಾಡಿದರು. ಅವರು ಹೊಸ ನಿರ್ದೇಶಕನಾಗಿದ್ದರು. ಆದರೆ ಅವರು ಸ್ಕ್ರಿಪ್ಟ್ ಬರೆದ ರೀತಿ ನನಗೆ ತುಂಬ ಇಷ್ಟ ಆಯಿತು’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ.

ಅಲ್ಲಿಂದ ಶುರುವಾದ ಅಲ್ಲು ಅರ್ಜುನ್​ ಮತ್ತು ಸುಕುಮಾರ್​ ಅವರ ಸ್ನೇಹ ‘ಪುಷ್ಪ 2’ ಸಿನಿಮಾದ ತನಕ ಬಂದಿದೆ. ಈ ಸಿನಿಮಾ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ. ಬಾಕ್ಸ್​ ಆಫೀಸ್​ನಲ್ಲಿ ಮೋಡಿ ಮಾಡುವ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ