AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸುಂದರವಾಗಿರಲಿಲ್ಲ, ಹಾಗಾಗಿ ಒಳ್ಳೇ ಆಫರ್​ ಬರಲಿಲ್ಲ’: ಅಲ್ಲು ಅರ್ಜುನ್​

ನಟ ಅಲ್ಲು ಅರ್ಜುನ್​ ಅವರು ಸ್ಟಾರ್​ ಕುಟುಂಬದಿಂದ ಬಂದವರು. ಹಾಗಿದ್ದರೂ ಕೂಡ ಅವರಿಗೆ ಆರಂಭದ ದಿನಗಳು ಚಾಲೆಂಜಿಂಗ್​ ಆಗಿದ್ದವು. ಮೊದಲ ಸಿನಿಮಾ ಗೆದ್ದರೂ ಕೂಡ ಅಲ್ಲು ಅರ್ಜುನ್​ಗೆ ಸರಿಯಾದ ಅವಕಾಶಗಳು ಸಿಗುತ್ತಿರಲಿಲ್ಲ. ಅದಕ್ಕೆ ತಮ್ಮ ಲುಕ್​ ಕಾರಣ ಎಂದು ಈಗ ಅಲ್ಲು ಅರ್ಜುನ್​ ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ವಿವರ..

‘ನಾನು ಸುಂದರವಾಗಿರಲಿಲ್ಲ, ಹಾಗಾಗಿ ಒಳ್ಳೇ ಆಫರ್​ ಬರಲಿಲ್ಲ’: ಅಲ್ಲು ಅರ್ಜುನ್​
ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: May 08, 2024 | 5:26 PM

Share

ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರು ಇಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಶೈನ್​ ಆಗುತ್ತಿದ್ದಾರೆ. ಅವರನ್ನು ಹುಡುಕಿಕೊಂಡು ನೂರಾರು ಅವಕಾಶಗಳು ಬರುತ್ತಿವೆ. ಆದರೆ ಆರಂಭದಲ್ಲಿ ಪರಿಸ್ಥಿತಿ ಹೀಗೆ ಇರಲಿಲ್ಲ. ಅಲ್ಲು ಅರ್ಜುನ್​ ನಟಿಸಿದ ‘ಆರ್ಯ’ ಸಿನಿಮಾ (Arya Movie) ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು ಈಗ ಅಲ್ಲು ಅರ್ಜುನ್​ ನೆನಪಿಸಿಕೊಂಡಿದ್ದಾರೆ. ‘ಪುಷ್ಪ 2’ (Pushpa 2) ಸಿನಿಮಾದ ಬಿಡುಗಡೆಗೆ ಸಜ್ಜಾಗುತ್ತಿರುವ ಅವರು ನೆನಪಿನ ಪುಟ ತೆರೆದಿದ್ದಾರೆ.

ಅಲ್ಲು ಅರ್ಜುನ್​ ನಟನೆಯ ಮೊದಲ ಸಿನಿಮಾ ‘ಗಂಗೋತ್ರಿ’ 2003ರ ಮಾರ್ಚ್​ 28ರಂದು ಬಿಡುಗಡೆ ಆಗಿತ್ತು. ಆ ಸಿನಿಮಾ ಹಿಟ್​ ಆಯಿತು. ಹಾಗಿದ್ದರೂ ಕೂಡ ಅಲ್ಲು ಅರ್ಜುನ್​ ಅವರಿಗೆ ಉತ್ತಮ ಅವಕಾಶಗಳು ಬಂದಿರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಅವರು ಈಗ ಹೇಳಿದ್ದಾರೆ. ನೋಡೋಕೆ ತಾವು ಚೆನ್ನಾಗಿರಲಿಲ್ಲ ಎಂದು ಸ್ವತಃ ಅಲ್ಲು ಅರ್ಜುನ್​ ಹೇಳಿದ್ದಾರೆ.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಅಲ್ಲು ಅರ್ಜುನ್ ಅವರು ಈ ವಿಚಾರವನ್ನು ವಿವರಿಸಿದ್ದಾರೆ. ‘ನಾನು ನಟಿಸಿದ ‘ಗಂಗೋತ್ರಿ’ ಸಿನಿಮಾ ಹಿಟ್​ ಆಯಿತು. ಆದರೆ ನಾನು ನೋಡೋಕೆ ಅಷ್ಟೇನೂ ಚೆನ್ನಾಗಿಲ್ಲ ಅಂತ ಅನಿಸಿದ್ದರಿಂದ ಒಳ್ಳೆಯ ಸಿನಿಮಾ ಅವಕಾಶಗಳು ನನಗೆ ಬರಲಿಲ್ಲ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ. ಬಳಿಕ ‘ಆರ್ಯ’ ಸಿನಿಮಾದ ಅವಕಾಶ ಸಿಕ್ಕಿದ್ದು ಹೇಗೆ ಎಂದು ಅವರು ಮೆಲುಕು ಹಾಕಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಬಿಡುಗಡೆಗೂ ಮುನ್ನ 150 ಕೋಟಿ ರೂಪಾಯಿಗೆ ಹೆಚ್ಚಿತು ಅಲ್ಲು ಅರ್ಜುನ್​ ಸಂಬಳ

‘ಗಂಗೋತ್ರಿ ಸಿನಿಮಾ ಯಶಸ್ವಿ ಆಯಿತು. ಆದರೆ ನಟನಾಗಿ ನಾನು ಗುರುತಿಸಿಕೊಳ್ಳಲು ಸೋತೆ. ನಿತಿನ್ ನಟನೆಯ ‘ದಿಲ್​’ ಸಿನಿಮಾವನ್ನು ನೋಡಲು ಹೋಗಿದ್ದಾಗ ಅಲ್ಲಿ ನನಗೆ ಸುಕುಮಾರ್​ ಪರಿಚಯ ಆಯಿತು. ‘ಆರ್ಯ’ ಚಿತ್ರಕ್ಕಾಗಿ ಅವರು ನನ್ನನ್ನು ಭೇಟಿ ಮಾಡಿದರು. ಅವರು ಹೊಸ ನಿರ್ದೇಶಕನಾಗಿದ್ದರು. ಆದರೆ ಅವರು ಸ್ಕ್ರಿಪ್ಟ್ ಬರೆದ ರೀತಿ ನನಗೆ ತುಂಬ ಇಷ್ಟ ಆಯಿತು’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ.

ಅಲ್ಲಿಂದ ಶುರುವಾದ ಅಲ್ಲು ಅರ್ಜುನ್​ ಮತ್ತು ಸುಕುಮಾರ್​ ಅವರ ಸ್ನೇಹ ‘ಪುಷ್ಪ 2’ ಸಿನಿಮಾದ ತನಕ ಬಂದಿದೆ. ಈ ಸಿನಿಮಾ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ. ಬಾಕ್ಸ್​ ಆಫೀಸ್​ನಲ್ಲಿ ಮೋಡಿ ಮಾಡುವ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ